ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ಕೊಂದ ತಂದೆ!

ಸಾಕಲು ಆಗುತ್ತಿಲ್ಲವೆಂದು ತನ್ನ ಒಂದೂವರೆ ವರ್ಷದ ಗಂಡು ಮಗುವನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಠಾಣೆ ಪೊಲೀಸರು ಆರೋಪಿ ಗಣೇಶ್​ನನ್ನು ಬಂಧಿಸಿದ್ದಾರೆ.

ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ಕೊಂದ ತಂದೆ!
ತನ್ನ ಒಂದೂವರೆ ವರ್ಷದ ಮಗುವನ್ನು ಕೊಂದ ಆರೋಪಿ ಗಣೇಶ್ (ಎಡ ಚಿತ್ರ) ಮತ್ತು ಮಗುವಿನ ಸಾಂದರ್ಭಿಕ ಚಿತ್ರ
Follow us
| Updated By: Rakesh Nayak Manchi

Updated on: Oct 19, 2023 | 8:08 AM

ಮೈಸೂರು, ಅ.10: ಈತನಿಗೆ ಎರಡು ಹೆಣ್ಣು ಮಕ್ಕಳಿದ್ದಾರೆ. ಪತ್ನಿ ಗಂಡು ಮಗುವಿಗೆ ಜನ್ಮ ನೀಡುವ ವೇಳೆ ಸಾವನ್ನಪ್ಪಿದ್ದಾರೆ. ಆದರೆ, ಈ ಸಣ್ಣ ಮಗುವನ್ನು ಸಾಕಲು ಆಗುತ್ತಿಲ್ಲವೆಂದು ಇಬ್ಬರು ಹೆಣ್ಣು ಮಕ್ಕಳನ್ನು ಅಜ್ಜಿ ತಾತನ ಜೊತೆ ಬಿಟ್ಟು ಒಂದೂವರೆ ವರ್ಷದ ಮಗುವನ್ನು ಕೊಂಡುಹೋಗಿ ಕೆರೆಗೆ ಎಸೆದು ಕೊಲೆ (Murder) ಮಾಡಿದ್ದಾನೆ. ಈ ಘಟನೆ ಮೈಸೂರು (Mysuru) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿನಲ್ಲಿ ನಡೆದಿದೆ.

2014 ರಲ್ಲಿ ಗಣೇಶ್ (30) ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ನಾರಾಯಣ ಸ್ವಾಮಿ ಎಂಬುವವರ ಮಗಳು ಲಕ್ಷ್ಮೀ ಎಂಬುವವರನ್ನು ಮದುವೆಯಾಗಿದ್ದರು. ದೇವನಹಳ್ಳಿಯಲ್ಲಿಯೆ ವಾಸವಿದ್ದ ದಂಪತಿಗೆ ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಒಂದು ವರ್ಷದ ಹಿಂದೆ ಮೂರನೇ ಮಗುವಿಗೆ ಜನ್ಮ ನೀಡುವ ವೇಳೆ ಲಕ್ಷ್ಮೀ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಗು ಅಳ್ತಿದೆ ನಿದ್ದೆ ಬರುತ್ತಿಲ್ಲ ಎಂದು ಅಣ್ಣನ ಮಗಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಮಹಿಳೆ

ಹೀಗಾಗಿ ಹೆಣ್ಣು ಮಕ್ಕಳನ್ನು ಅಜ್ಜಿ ತಾತನ ಜೊತೆ ಬಿಟ್ಟು ಒಂದೂವರೆ ವರ್ಷದ ಕುಮಾರ್ ಎಂಬ ಗಂಡು ಮಗುವಿನಿಂದಿಗೆ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿಗೆ ವಾಪಸ್ ಆಗಿದ್ದಾನೆ. ಇಲ್ಲಿ ತನ್ನ ತಾಯಿಯೊಂದಿಗೆ ಮಗುವನ್ನು ಸಾಕುತ್ತಿದ್ದನು. ಹಲವು ಬಾರಿ ಮಗುವನ್ನು ನಮಗೆ ವಾಪಸ್ಸು ನೀಡಿ, ನಾವೇ ಸಾಕುವುದಾಗಿ ಅತ್ತೆ ತಿಳಿಸಿದ್ದರು.

ಆದರೆ, ಅತ್ತೆಗೆ ಮಗುವನ್ನು ಒಪ್ಪಿಸದೆ ಅದನ್ನು ಸಾಕಲು ಆಗುತ್ತಿಲ್ಲವೆಂದು ಕೆರೆಗೆ ಎಸೆದು ಕೊಂದೇ ಬಿಟ್ಟಿದ್ದಾನೆ. ಕೊಲೆ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣಾ ಪೊಲೀಸರು, ಆರೋಪಿ ಗಣೇಶ್​ನನ್ನು ಬಂದಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು