ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ

ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ
ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಮೇಲೆ ಹಲ್ಲೆ
Follow us
| Updated By: ಆಯೇಷಾ ಬಾನು

Updated on:Jul 29, 2023 | 11:12 AM

ಮೈಸೂರು, ಜುಲೈ 29: ತಿರುಪತಿ(Tirupati) ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್ ವಿಚಾರಕ್ಕೆ ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನಿಂದ 220 ಮಂದಿ ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ನೂರಾರು ಜನರನ್ನು ಕರೆಸಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ದೂರು‌ ನೀಡಿದ್ರು ಆಂಧ್ರದ ಪಾಕಲಂ ಪೊಲೀಸರು ಸ್ಪಂದಿಸಿಲ್ಲ. ಮೊಬೈಲ್​ನಲ್ಲಿ ಸೆರೆಯಾದ ಹಲ್ಲೆ ದೃಶ್ಯ ಡಿಲೀಟ್ ಮಾಡಿಸಿದರು ಎಂದು ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಹೀಗಾಗಿ ಹಲ್ಲೆಗೊಳಗಾದವರು ಈ ಬಗ್ಗೆ ಮೈಸೂರಿನಲ್ಲಿ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಆಂಧ್ರ ವ್ಯಕ್ತಿಗಳು

ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಸೀಟ್ ಮೇಲಿಟ್ಟಿದ್ದ ಲ್ಯಾಪ್ ಟಾಪ್ ಮೇಲೆ ಕುಳಿತಿದ್ದೀರಾ ಎಂದು ಗಲಾಟೆ ಶುರುವಾಗಿದ್ದು ಮಾತಿಗೆ ಮಾತು ಬೆಳೆದು ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಆಂಧ್ರ ಮೂಲದವರು ಜನರನ್ನು ಕರೆಸಿ ಹಲ್ಲೆ ಮಾಡಿಸಿದ್ದಾರೆ. ಪೊಲೀಸರನ್ನು ಕರೆದರು ಸಹಾಯಕ್ಕೆ ಬರಲಿಲ್ಲ. ಪೊಲೀಸರಿಗೆ ನಾವು ದೂರು ಕೊಟ್ಟರೂ ನಮ್ಮನ್ನೆ ಅಪರಾಧಿಗಳಂತೆ ಪ್ರಶ್ನೆ ಮಾಡಿದರು. ಹಲ್ಲೆ ಮಾಡಿದ ವಿಡಿಯೋವನ್ನ ಚಿತ್ರಿಕರಣ ಮಾಡಿದ್ದಕ್ಕೆ‌ ಮೊಬೈಲನ್ನು ಕಿತ್ತುಕೊಂಡಿದ್ದಾರೆ. ಅಲ್ಲಿನ ಜನ ತಮ್ಮ ಬಳಿ ಡ್ರಾಗರ್ ಹಾಗೂ ಚಾಕು ಸೇರಿದಂತೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದು ಅದರಲ್ಲೇ ಹಲ್ಲೆ ಮಾಡಿದ್ದಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಸದ್ಯ ಮೈಸೂರು ರೈಲ್ವೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:51 am, Sat, 29 July 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!