AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ

ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ
ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಮೇಲೆ ಹಲ್ಲೆ
TV9 Web
| Edited By: |

Updated on:Jul 29, 2023 | 11:12 AM

Share

ಮೈಸೂರು, ಜುಲೈ 29: ತಿರುಪತಿ(Tirupati) ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್ ವಿಚಾರಕ್ಕೆ ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನಿಂದ 220 ಮಂದಿ ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ನೂರಾರು ಜನರನ್ನು ಕರೆಸಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ದೂರು‌ ನೀಡಿದ್ರು ಆಂಧ್ರದ ಪಾಕಲಂ ಪೊಲೀಸರು ಸ್ಪಂದಿಸಿಲ್ಲ. ಮೊಬೈಲ್​ನಲ್ಲಿ ಸೆರೆಯಾದ ಹಲ್ಲೆ ದೃಶ್ಯ ಡಿಲೀಟ್ ಮಾಡಿಸಿದರು ಎಂದು ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಹೀಗಾಗಿ ಹಲ್ಲೆಗೊಳಗಾದವರು ಈ ಬಗ್ಗೆ ಮೈಸೂರಿನಲ್ಲಿ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಆಂಧ್ರ ವ್ಯಕ್ತಿಗಳು

ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಸೀಟ್ ಮೇಲಿಟ್ಟಿದ್ದ ಲ್ಯಾಪ್ ಟಾಪ್ ಮೇಲೆ ಕುಳಿತಿದ್ದೀರಾ ಎಂದು ಗಲಾಟೆ ಶುರುವಾಗಿದ್ದು ಮಾತಿಗೆ ಮಾತು ಬೆಳೆದು ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಆಂಧ್ರ ಮೂಲದವರು ಜನರನ್ನು ಕರೆಸಿ ಹಲ್ಲೆ ಮಾಡಿಸಿದ್ದಾರೆ. ಪೊಲೀಸರನ್ನು ಕರೆದರು ಸಹಾಯಕ್ಕೆ ಬರಲಿಲ್ಲ. ಪೊಲೀಸರಿಗೆ ನಾವು ದೂರು ಕೊಟ್ಟರೂ ನಮ್ಮನ್ನೆ ಅಪರಾಧಿಗಳಂತೆ ಪ್ರಶ್ನೆ ಮಾಡಿದರು. ಹಲ್ಲೆ ಮಾಡಿದ ವಿಡಿಯೋವನ್ನ ಚಿತ್ರಿಕರಣ ಮಾಡಿದ್ದಕ್ಕೆ‌ ಮೊಬೈಲನ್ನು ಕಿತ್ತುಕೊಂಡಿದ್ದಾರೆ. ಅಲ್ಲಿನ ಜನ ತಮ್ಮ ಬಳಿ ಡ್ರಾಗರ್ ಹಾಗೂ ಚಾಕು ಸೇರಿದಂತೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದು ಅದರಲ್ಲೇ ಹಲ್ಲೆ ಮಾಡಿದ್ದಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಸದ್ಯ ಮೈಸೂರು ರೈಲ್ವೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:51 am, Sat, 29 July 23

Follow Us
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ