AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ

ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ
ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಮೇಲೆ ಹಲ್ಲೆ
TV9 Web
| Edited By: ಆಯೇಷಾ ಬಾನು|

Updated on:Jul 29, 2023 | 11:12 AM

Share

ಮೈಸೂರು, ಜುಲೈ 29: ತಿರುಪತಿ(Tirupati) ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್ ವಿಚಾರಕ್ಕೆ ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನಿಂದ 220 ಮಂದಿ ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ನೂರಾರು ಜನರನ್ನು ಕರೆಸಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ದೂರು‌ ನೀಡಿದ್ರು ಆಂಧ್ರದ ಪಾಕಲಂ ಪೊಲೀಸರು ಸ್ಪಂದಿಸಿಲ್ಲ. ಮೊಬೈಲ್​ನಲ್ಲಿ ಸೆರೆಯಾದ ಹಲ್ಲೆ ದೃಶ್ಯ ಡಿಲೀಟ್ ಮಾಡಿಸಿದರು ಎಂದು ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಹೀಗಾಗಿ ಹಲ್ಲೆಗೊಳಗಾದವರು ಈ ಬಗ್ಗೆ ಮೈಸೂರಿನಲ್ಲಿ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಆಂಧ್ರ ವ್ಯಕ್ತಿಗಳು

ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಸೀಟ್ ಮೇಲಿಟ್ಟಿದ್ದ ಲ್ಯಾಪ್ ಟಾಪ್ ಮೇಲೆ ಕುಳಿತಿದ್ದೀರಾ ಎಂದು ಗಲಾಟೆ ಶುರುವಾಗಿದ್ದು ಮಾತಿಗೆ ಮಾತು ಬೆಳೆದು ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಆಂಧ್ರ ಮೂಲದವರು ಜನರನ್ನು ಕರೆಸಿ ಹಲ್ಲೆ ಮಾಡಿಸಿದ್ದಾರೆ. ಪೊಲೀಸರನ್ನು ಕರೆದರು ಸಹಾಯಕ್ಕೆ ಬರಲಿಲ್ಲ. ಪೊಲೀಸರಿಗೆ ನಾವು ದೂರು ಕೊಟ್ಟರೂ ನಮ್ಮನ್ನೆ ಅಪರಾಧಿಗಳಂತೆ ಪ್ರಶ್ನೆ ಮಾಡಿದರು. ಹಲ್ಲೆ ಮಾಡಿದ ವಿಡಿಯೋವನ್ನ ಚಿತ್ರಿಕರಣ ಮಾಡಿದ್ದಕ್ಕೆ‌ ಮೊಬೈಲನ್ನು ಕಿತ್ತುಕೊಂಡಿದ್ದಾರೆ. ಅಲ್ಲಿನ ಜನ ತಮ್ಮ ಬಳಿ ಡ್ರಾಗರ್ ಹಾಗೂ ಚಾಕು ಸೇರಿದಂತೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದು ಅದರಲ್ಲೇ ಹಲ್ಲೆ ಮಾಡಿದ್ದಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಸದ್ಯ ಮೈಸೂರು ರೈಲ್ವೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:51 am, Sat, 29 July 23

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!