AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಕಾರ್ಯಚರಣೆ ನಡೆಸಿದರೂ ಸಿಗದ ಹುಲಿರಾಯ, ಕೊನೆಗೆ ವ್ಯಾಘ್ರನ ಬಂಧನಕ್ಕೆ ಬಂದ ಗಜರಾಜರು!

ಮೈಸೂರು ಜಿಲ್ಲೆಯ ಹುಣಸೂರು, ಹೆಚ್​ಡಿ ಕೋಟೆ, ಪಿರಿಯಾಪಟ್ಟಣ ಹಾಗೂ ನಂಜನಗೂಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬರುವ ಕಾಡು ಪ್ರಾಣಿಗಳು, ರೈತರ ನಿದ್ದೆಗೆಡಿಸಿವೆ. ಅದರಲ್ಲೂ ಬಂಡೀಪುರ ಅರಣ್ಯದ ಹೆಡಿಯಾಲ ವಲಯ ವ್ಯಾಪ್ತಿಯಲ್ಲಿ ಹುಲಿ ಕಾಟ ಶುರುವಾಗಿದ್ದು, ಈಗಾಗಲೇ ಓರ್ವ ವ್ಯಕ್ತಿಯನ್ನು ಬಲಿ ಪಡೆದುಕೊಂಡಿದೆ. ಇದೀಗ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸತತ ಕಾರ್ಯಚರಣೆ ನಡೆಸಿದರೂ ಫಲ ನೀಡಿಲ್ಲ. ಇದೀಗ ಅಂತಿಮವಾಗಿ ಇದೀಗ ಆ ವ್ಯಾಘ್ರನ ಬಂಧನಕ್ಕೆ ಗಜರಾಜರುಗಳನ್ನು ಕರೆತರಲಾಗಿದೆ.

ನಿರಂತರ ಕಾರ್ಯಚರಣೆ ನಡೆಸಿದರೂ ಸಿಗದ ಹುಲಿರಾಯ, ಕೊನೆಗೆ ವ್ಯಾಘ್ರನ ಬಂಧನಕ್ಕೆ ಬಂದ ಗಜರಾಜರು!
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 04, 2023 | 11:02 AM

Share

ಮೈಸೂರು, (ನವೆಂಬರ್ 04): ಪ್ರಾಣಿಗಳು ಕಾಡಿನಿಂದ ನಾಡಿನೊಳಗೆ ಬರುತ್ತಿವೆ. ಅದರಲ್ಲೂ ಮೈಸೂರು ಭಾಗದಲ್ಲಿ ಚಿರತೆ, ಆನೆ, ಹುಲಿಗಳ ಕಾಟ ಮಿತಿ ಮೀರಿದ್ದು, ಹಲವು ಜನರು ಹಾಗೂ ಹಸು, ಮೇಕೆಗಳನ್ನು ಬಲಿ ಪಡೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ಜನರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ. ಅದರಂತೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ‌ ಹೆಡಿಯಾಲ ಗ್ರಾಮದಲ್ಲಿ ಮೊನ್ನೇ ಅಷ್ಟೇ ವ್ಯಕ್ತಿಯೋರ್ವನನ್ನು ಹುಲಿ ಬಲಿ ಪಡೆದುಕೊಂಡಿತ್ತು. ಇದೀಗ ಆ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಚರಣೆ ನಡೆಸಿದ್ದು, ಈಗ ವ್ಯಾಘ್ರನ ಪತ್ತೆಗೆ ಆನೆಗಳನ್ನು ಕರೆತರಲಾಗಿದೆ.

ಹೌದು… ಬಂಡೀಪುರ ಅರಣ್ಯದ ವಲಯ ವ್ಯಾಪ್ತಿಯ ಹೆಡಿಯಾಲ ಗ್ರಾಮದ ಕಳೆದ ಮೂರು ದಿನಗಳ ಹಿಂದೆ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಕಾರ್ಯಚರಣೆ ಸಂದರ್ಭದಲ್ಲೇ ಹುಲಿ ಮೇಕೆಯನ್ನ ಹೊತ್ತೊಯ್ದಿತ್ತು.ಇದರೊಂದಿಗೆ ಹುಲಿ ಪದೇ ಪದೇ ಆತಂಕ ಸೃಷ್ಟಿಸಿದೆ. ಅಲ್ಲದೇ ಸ್ಥಳೀಯ ಜನರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಇದರಿಂದ ಅರಣ್ಯ ಇಲಾಖೆ, ವ್ಯಾಘ್ರನ ಬಂಧನಕ್ಕೆ ಬಂಡೀಪುರ, ರಾಂಪುರ ಆನೆ ಕ್ಯಾಂಪ್​ನಿಂದ ಆನೆಗಳನ್ನು ಕರೆತಂದಿದೆ.

ಇದನ್ನೂ ಓದಿ: ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

ಒಂದು ಕಡೆ ಬಂಡೀಪುರ ರಾಂಪುರ ಆನೆ ಕ್ಯಾಂಪ್​ನ‌ ಪಾರ್ಥಸಾರಥಿ, ಧರ್ಮ ಆನೆಗಳ ಮೂಲಕ ಶೋಧಕಾರ್ಯ ನಡೆಯುತ್ತಿದ್ದರೆ, ಮತ್ತೊಂದೆಡೆ ಸಿಬ್ಬಂದಿಯಿಂದ ಕಾಲ್ನಡಿಗೆಯಲ್ಲಿ ಕಾರ್ಯಚರಣೆ ನಡೆಯುತ್ತಿದೆ.

ಕೇವಲ ನಂಜನಗೂಡು ಭಾಗದ ಕಥೆಯಲ್ಲ. ಹೆಚ್ ಡಿ ಕೋಟೆ, ಹುಣಸೂರು, ಪಿರಿಯಾಪಟ್ಟಣ ಸೇರಿದಂತೆ ಹಲವು ಭಾಗಗಳಲ್ಲಿ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದೆ. ಕೇವಲ ಹುಲಿ ಮಾತ್ರವಲ್ಲ ಚಿರತೆ ಆನೆಗಳು ನಾಡಿಗೆ ಬರುವುದು ಹೆಚ್ಚಾಗುತ್ತಿದೆ. ಒಂದು ಕಡೆ ಬೆಳೆ ನಾಶದಿಂದ ಲಕ್ಷಾಂತರ ರೂಪಾಯಿ ನಷ್ಟವುಂಟಾದರೆ ಮತ್ತೊಂದು ಕಡೆ ಜೀವವೇ ಹೋಗುವ ಭಯ ಕಾಡಂಚಿನ ಗ್ರಾಮದ ಜನರನ್ನು ಕಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್