Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಕಾರ್ಯಚರಣೆ ನಡೆಸಿದರೂ ಸಿಗದ ಹುಲಿರಾಯ, ಕೊನೆಗೆ ವ್ಯಾಘ್ರನ ಬಂಧನಕ್ಕೆ ಬಂದ ಗಜರಾಜರು!

ಮೈಸೂರು ಜಿಲ್ಲೆಯ ಹುಣಸೂರು, ಹೆಚ್​ಡಿ ಕೋಟೆ, ಪಿರಿಯಾಪಟ್ಟಣ ಹಾಗೂ ನಂಜನಗೂಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬರುವ ಕಾಡು ಪ್ರಾಣಿಗಳು, ರೈತರ ನಿದ್ದೆಗೆಡಿಸಿವೆ. ಅದರಲ್ಲೂ ಬಂಡೀಪುರ ಅರಣ್ಯದ ಹೆಡಿಯಾಲ ವಲಯ ವ್ಯಾಪ್ತಿಯಲ್ಲಿ ಹುಲಿ ಕಾಟ ಶುರುವಾಗಿದ್ದು, ಈಗಾಗಲೇ ಓರ್ವ ವ್ಯಕ್ತಿಯನ್ನು ಬಲಿ ಪಡೆದುಕೊಂಡಿದೆ. ಇದೀಗ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸತತ ಕಾರ್ಯಚರಣೆ ನಡೆಸಿದರೂ ಫಲ ನೀಡಿಲ್ಲ. ಇದೀಗ ಅಂತಿಮವಾಗಿ ಇದೀಗ ಆ ವ್ಯಾಘ್ರನ ಬಂಧನಕ್ಕೆ ಗಜರಾಜರುಗಳನ್ನು ಕರೆತರಲಾಗಿದೆ.

ನಿರಂತರ ಕಾರ್ಯಚರಣೆ ನಡೆಸಿದರೂ ಸಿಗದ ಹುಲಿರಾಯ, ಕೊನೆಗೆ ವ್ಯಾಘ್ರನ ಬಂಧನಕ್ಕೆ ಬಂದ ಗಜರಾಜರು!
Follow us
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on: Nov 04, 2023 | 11:02 AM

ಮೈಸೂರು, (ನವೆಂಬರ್ 04): ಪ್ರಾಣಿಗಳು ಕಾಡಿನಿಂದ ನಾಡಿನೊಳಗೆ ಬರುತ್ತಿವೆ. ಅದರಲ್ಲೂ ಮೈಸೂರು ಭಾಗದಲ್ಲಿ ಚಿರತೆ, ಆನೆ, ಹುಲಿಗಳ ಕಾಟ ಮಿತಿ ಮೀರಿದ್ದು, ಹಲವು ಜನರು ಹಾಗೂ ಹಸು, ಮೇಕೆಗಳನ್ನು ಬಲಿ ಪಡೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ಜನರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ. ಅದರಂತೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ‌ ಹೆಡಿಯಾಲ ಗ್ರಾಮದಲ್ಲಿ ಮೊನ್ನೇ ಅಷ್ಟೇ ವ್ಯಕ್ತಿಯೋರ್ವನನ್ನು ಹುಲಿ ಬಲಿ ಪಡೆದುಕೊಂಡಿತ್ತು. ಇದೀಗ ಆ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಚರಣೆ ನಡೆಸಿದ್ದು, ಈಗ ವ್ಯಾಘ್ರನ ಪತ್ತೆಗೆ ಆನೆಗಳನ್ನು ಕರೆತರಲಾಗಿದೆ.

ಹೌದು… ಬಂಡೀಪುರ ಅರಣ್ಯದ ವಲಯ ವ್ಯಾಪ್ತಿಯ ಹೆಡಿಯಾಲ ಗ್ರಾಮದ ಕಳೆದ ಮೂರು ದಿನಗಳ ಹಿಂದೆ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಕಾರ್ಯಚರಣೆ ಸಂದರ್ಭದಲ್ಲೇ ಹುಲಿ ಮೇಕೆಯನ್ನ ಹೊತ್ತೊಯ್ದಿತ್ತು.ಇದರೊಂದಿಗೆ ಹುಲಿ ಪದೇ ಪದೇ ಆತಂಕ ಸೃಷ್ಟಿಸಿದೆ. ಅಲ್ಲದೇ ಸ್ಥಳೀಯ ಜನರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಇದರಿಂದ ಅರಣ್ಯ ಇಲಾಖೆ, ವ್ಯಾಘ್ರನ ಬಂಧನಕ್ಕೆ ಬಂಡೀಪುರ, ರಾಂಪುರ ಆನೆ ಕ್ಯಾಂಪ್​ನಿಂದ ಆನೆಗಳನ್ನು ಕರೆತಂದಿದೆ.

ಇದನ್ನೂ ಓದಿ: ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

ಒಂದು ಕಡೆ ಬಂಡೀಪುರ ರಾಂಪುರ ಆನೆ ಕ್ಯಾಂಪ್​ನ‌ ಪಾರ್ಥಸಾರಥಿ, ಧರ್ಮ ಆನೆಗಳ ಮೂಲಕ ಶೋಧಕಾರ್ಯ ನಡೆಯುತ್ತಿದ್ದರೆ, ಮತ್ತೊಂದೆಡೆ ಸಿಬ್ಬಂದಿಯಿಂದ ಕಾಲ್ನಡಿಗೆಯಲ್ಲಿ ಕಾರ್ಯಚರಣೆ ನಡೆಯುತ್ತಿದೆ.

ಕೇವಲ ನಂಜನಗೂಡು ಭಾಗದ ಕಥೆಯಲ್ಲ. ಹೆಚ್ ಡಿ ಕೋಟೆ, ಹುಣಸೂರು, ಪಿರಿಯಾಪಟ್ಟಣ ಸೇರಿದಂತೆ ಹಲವು ಭಾಗಗಳಲ್ಲಿ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದೆ. ಕೇವಲ ಹುಲಿ ಮಾತ್ರವಲ್ಲ ಚಿರತೆ ಆನೆಗಳು ನಾಡಿಗೆ ಬರುವುದು ಹೆಚ್ಚಾಗುತ್ತಿದೆ. ಒಂದು ಕಡೆ ಬೆಳೆ ನಾಶದಿಂದ ಲಕ್ಷಾಂತರ ರೂಪಾಯಿ ನಷ್ಟವುಂಟಾದರೆ ಮತ್ತೊಂದು ಕಡೆ ಜೀವವೇ ಹೋಗುವ ಭಯ ಕಾಡಂಚಿನ ಗ್ರಾಮದ ಜನರನ್ನು ಕಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ