AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​​ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದರೆ ಮತವಾಗಿ ಪರಿವರ್ತನೆಯಾಗುವುದಿಲ್ಲ: ಬಿಜೆಪಿಗೆ ಹೆಚ್​ಡಿಕೆ ಟಾಂಗ್

ಎಸ್​ಸಿ, ಎಸ್​​ಟಿ ಸಮುದಾಯಕ್ಕೆ ಮೀಸಲಾತಿ ನೀಡುವುದರಿಂದ ತಮಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅದು ಮತವಾಗಿ ಪರಿವರ್ತನೆಯಾಗುವುದಿಲ್ಲ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಾಸ್ವಾಮಿ ವಾಗ್ದಾಳಿ

ಎಸ್​ಸಿ, ಎಸ್​​ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದರೆ ಮತವಾಗಿ ಪರಿವರ್ತನೆಯಾಗುವುದಿಲ್ಲ: ಬಿಜೆಪಿಗೆ  ಹೆಚ್​ಡಿಕೆ ಟಾಂಗ್
ಹೆಚ್ ಡಿ ಕುಮಾರಸ್ವಾಮಿ
TV9 Web
| Updated By: ವಿವೇಕ ಬಿರಾದಾರ|

Updated on: Oct 08, 2022 | 3:44 PM

Share

ಮೈಸೂರು: ಎಸ್​ಸಿ, (SC) ಎಸ್​​ಟಿ (ST) ಸಮುದಾಯಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣ ಹೆಚ್ಚಸಿದ ಕುರಿತು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಾಸ್ವಾಮಿ ಮಾತನಾಡಿ ಮೀಸಲಾತಿ ನೀಡುವುದರಿಂದ ತಮಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅದು ಮತವಾಗಿ ಪರಿವರ್ತನೆಯಾಗುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನ್ಯಾ. ನಾಗಮೋಹನದಾಸ್ ಅವರು ಎರಡು ವರ್ಷದ ಹಿಂದೆಯೇ ಮೀಸಲಾತಿ ಹೆಚ್ಚಳ ಕುರಿತಾದ ವರದಿ ಕೊಟ್ಟಿದ್ದರು. ಈಗ ಅದನ್ನು ಅನುಷ್ಟಾನ ಮಾಡುತ್ತಿದ್ದಾರೆ. ಅದರ ಅರ್ಥ ಏನು ಎಂಬುದು ಎಲ್ಲರಿಗೂ ಗೊತ್ತು ಎಂದು ಹೇಳಿದರು.

ರಾಜಕೀಯ ಮುಖಂಡರುಗಳೇ ತಮಗಾಗಿ ತಮ್ಮ ಅನುಕೂಲಕ್ಕಾಗಿ ಮೀಸಲಾತಿ ಹೋರಾಟವನ್ನು ಹುಟ್ಟು ಹಾಕಿದ್ದಾರೆ. ಮುಂದೊಂದು ದಿನ ಅದು ಅವರಿಗೆ ತಿರುಗು ಬಾಣ ಆಗುತ್ತದೆ. ಸರ್ಕಾರ ಜೇನುಗೂಡಿಗೆ ಕಲ್ಲು ಎಸೆಯುವ ಕೆಲಸ ಮಾಡುತ್ತಿದೆ ಎಂದರು.

ಕೇಂದ್ರೀಯ ಪರೀಕ್ಷೆಗಳಲ್ಲಿ ಹಿಂದಿ, ಇಂಗ್ಲೆಷ್​ಗೆ ಮಾತ್ರ ಆದ್ಯತೆ ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಕೇಂದ್ರದ ಆಧೀನದ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಇದು ವ್ಯವಸ್ಥಿತವಾಗಿ ಹಿಂದಿಯನ್ನು ಹೇರುವ ಪ್ರಕ್ರಿಯೆಯಾಗಿದೆ. ಈಗ ಡಿಟಿಹೆಚ್​​ಗಳಲ್ಲೂ ಇಂಗ್ಲಿಷ್​ ಜೊತೆ ಹಿಂದಿ ಬರುತ್ತಿದೆ. ಇದರಿಂದ ಪ್ರಾದೇಶಿಕ ಭಾಷೆಗಳಿಗೆ ಅಪಾಯ ಆಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಈ ನಿಲುವು ಖಂಡನೀಯ ಎಂದು ಖಂಡಿಸಿದರು.

ಟಿಪ್ಪು ಎಕ್ಸ್​​ಪ್ರೆಸ್​ಗೆ ಒಡೆಯರ್ ಎಕ್ಸ್​​ಪ್ರೆಸ್​​ ಎಂದು ಮರುನಾಮಕರಣ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು ಇದು ಕೂಡ ವೋಟ್​​ ಬ್ಯಾಂಕ್​ನ ಒಂದು ಭಾಗ. ಭಾವನಾತ್ಮಕವಾಗಿ ಜನರನ್ನು ಸೆಳೆಯುವ ತಂತ್ರ ಇದು. ಹೆಸರು ಬದಲಾದ ಮಾತ್ರಕ್ಕೆ ಜನರ ಜೀವನ ಬದಲಾಗಲ್ಲ. ಆಯಾ ಕಾಲಕ್ಕೆ ಈ ತರದ ಬದಲಾವಣೆ ನಡೆಯುತ್ತಿರುತ್ತವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!