AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​​ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದರೆ ಮತವಾಗಿ ಪರಿವರ್ತನೆಯಾಗುವುದಿಲ್ಲ: ಬಿಜೆಪಿಗೆ ಹೆಚ್​ಡಿಕೆ ಟಾಂಗ್

ಎಸ್​ಸಿ, ಎಸ್​​ಟಿ ಸಮುದಾಯಕ್ಕೆ ಮೀಸಲಾತಿ ನೀಡುವುದರಿಂದ ತಮಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅದು ಮತವಾಗಿ ಪರಿವರ್ತನೆಯಾಗುವುದಿಲ್ಲ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಾಸ್ವಾಮಿ ವಾಗ್ದಾಳಿ

ಎಸ್​ಸಿ, ಎಸ್​​ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದರೆ ಮತವಾಗಿ ಪರಿವರ್ತನೆಯಾಗುವುದಿಲ್ಲ: ಬಿಜೆಪಿಗೆ  ಹೆಚ್​ಡಿಕೆ ಟಾಂಗ್
ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on: Oct 08, 2022 | 3:44 PM

Share

ಮೈಸೂರು: ಎಸ್​ಸಿ, (SC) ಎಸ್​​ಟಿ (ST) ಸಮುದಾಯಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣ ಹೆಚ್ಚಸಿದ ಕುರಿತು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಾಸ್ವಾಮಿ ಮಾತನಾಡಿ ಮೀಸಲಾತಿ ನೀಡುವುದರಿಂದ ತಮಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅದು ಮತವಾಗಿ ಪರಿವರ್ತನೆಯಾಗುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನ್ಯಾ. ನಾಗಮೋಹನದಾಸ್ ಅವರು ಎರಡು ವರ್ಷದ ಹಿಂದೆಯೇ ಮೀಸಲಾತಿ ಹೆಚ್ಚಳ ಕುರಿತಾದ ವರದಿ ಕೊಟ್ಟಿದ್ದರು. ಈಗ ಅದನ್ನು ಅನುಷ್ಟಾನ ಮಾಡುತ್ತಿದ್ದಾರೆ. ಅದರ ಅರ್ಥ ಏನು ಎಂಬುದು ಎಲ್ಲರಿಗೂ ಗೊತ್ತು ಎಂದು ಹೇಳಿದರು.

ರಾಜಕೀಯ ಮುಖಂಡರುಗಳೇ ತಮಗಾಗಿ ತಮ್ಮ ಅನುಕೂಲಕ್ಕಾಗಿ ಮೀಸಲಾತಿ ಹೋರಾಟವನ್ನು ಹುಟ್ಟು ಹಾಕಿದ್ದಾರೆ. ಮುಂದೊಂದು ದಿನ ಅದು ಅವರಿಗೆ ತಿರುಗು ಬಾಣ ಆಗುತ್ತದೆ. ಸರ್ಕಾರ ಜೇನುಗೂಡಿಗೆ ಕಲ್ಲು ಎಸೆಯುವ ಕೆಲಸ ಮಾಡುತ್ತಿದೆ ಎಂದರು.

ಕೇಂದ್ರೀಯ ಪರೀಕ್ಷೆಗಳಲ್ಲಿ ಹಿಂದಿ, ಇಂಗ್ಲೆಷ್​ಗೆ ಮಾತ್ರ ಆದ್ಯತೆ ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಕೇಂದ್ರದ ಆಧೀನದ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಇದು ವ್ಯವಸ್ಥಿತವಾಗಿ ಹಿಂದಿಯನ್ನು ಹೇರುವ ಪ್ರಕ್ರಿಯೆಯಾಗಿದೆ. ಈಗ ಡಿಟಿಹೆಚ್​​ಗಳಲ್ಲೂ ಇಂಗ್ಲಿಷ್​ ಜೊತೆ ಹಿಂದಿ ಬರುತ್ತಿದೆ. ಇದರಿಂದ ಪ್ರಾದೇಶಿಕ ಭಾಷೆಗಳಿಗೆ ಅಪಾಯ ಆಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಈ ನಿಲುವು ಖಂಡನೀಯ ಎಂದು ಖಂಡಿಸಿದರು.

ಟಿಪ್ಪು ಎಕ್ಸ್​​ಪ್ರೆಸ್​ಗೆ ಒಡೆಯರ್ ಎಕ್ಸ್​​ಪ್ರೆಸ್​​ ಎಂದು ಮರುನಾಮಕರಣ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು ಇದು ಕೂಡ ವೋಟ್​​ ಬ್ಯಾಂಕ್​ನ ಒಂದು ಭಾಗ. ಭಾವನಾತ್ಮಕವಾಗಿ ಜನರನ್ನು ಸೆಳೆಯುವ ತಂತ್ರ ಇದು. ಹೆಸರು ಬದಲಾದ ಮಾತ್ರಕ್ಕೆ ಜನರ ಜೀವನ ಬದಲಾಗಲ್ಲ. ಆಯಾ ಕಾಲಕ್ಕೆ ಈ ತರದ ಬದಲಾವಣೆ ನಡೆಯುತ್ತಿರುತ್ತವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್