AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವೃತ್ತ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿಯೇ ಓಲಾ ಬೈಕ್​ ಕಂಪನಿ ತಮಿಳುನಾಡಿಗೆ ಹೋಯ್ತು. ಓಲಾ ಕಂಪನಿ ಇಲ್ಲೇ ಆಗಿದ್ರೆ 10,000 ಉದ್ಯೋಗ ಸಿಗುತ್ತಿತ್ತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉದಾಹರಣೆ ನೀಡಿದರು.

ಸಿದ್ದರಾಮಯ್ಯ ವೃತ್ತ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ
ಸಿದ್ದರಾಮಯ್ಯ ವೃತ್ತ ಉದ್ಘಾಟನೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ
TV9 Web
| Edited By: |

Updated on: Apr 08, 2022 | 8:35 PM

Share

ಮೈಸೂರು: ಸಿದ್ದರಾಮಯ್ಯ ವೃತ್ತ ಉದ್ಘಾಟನೆ (Inauguration) ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಶಾಸಕರಾದ ಜಿ.ಟಿ.ದೇವೇಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು ಮತ್ತಿತರರು ಹಾಜರಿದ್ದರು. ಮೈಸೂರು ವಿಶ್ವವಿದ್ಯಾಲಯ ಉದ್ಯೋಗಿಗಳ ಬಡಾವಣೆಯಲ್ಲಿ ಇಂದು ಬಸ್ ತಂಗಲಿದೆ. ಇಂದು ಬೆಳಗ್ಗೆಯಷ್ಟೇ ಯಾರು ಏನೇ ಹುನ್ನಾರ ಮಾಡಿದ್ರು ಕರ್ನಾಟಕ ಪ್ರಗತಿ ನಿಲ್ಲಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ಯಾರೇ ಏನೇ ಅಭಿಯಾನ ಮಾಡಿದ್ರು ಕರ್ನಾಟಕದ ಪ್ರಗತಿ ನಿರಂತರವಾಗಿ ಮುಂದುವರಿಯುತ್ತದೆ. ಅಂತಾರಾಷ್ಟ್ರೀಯ ಮಟ್ಟದ ಹೂಡಿಕೆದಾರರು ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಸಂಜೆಯ ವೇಳೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಸರಿಯಿಲ್ಲದಿದ್ದರೆ ಇನ್ವೆಸ್ಟರ್ಸ್​ ಬರಲ್ಲ. ಹೂಡಿಕೆದಾರರು ಬರಲ್ಲ ಅಂದ್ರೆ ಆರ್ಥಿಕ ವ್ಯವಸ್ಥೆ ಕುಸಿಯುತ್ತೆ ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿಯೇ ಓಲಾ ಬೈಕ್​ ಕಂಪನಿ ತಮಿಳುನಾಡಿಗೆ ಹೋಯ್ತು. ಓಲಾ ಕಂಪನಿ ಇಲ್ಲೇ ಆಗಿದ್ರೆ 10,000 ಉದ್ಯೋಗ ಸಿಗುತ್ತಿತ್ತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉದಾಹರಣೆ ನೀಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಆಗಿಲ್ಲ. ಚುನಾವಣೆಗೆ ಹೋದರೆ ಸಾಧನೆ ಏನು ಎಂದು ಹೇಳಿಕೊಳ್ತಾರೆ? ಹಾಗಾಗಿ ಇಂತಹ ಧಾರ್ಮಿಕ ವಿಚಾರ ಮುನ್ನೆಲೆಗೆ ತರುತ್ತಾರೆ. ಮುಸ್ಲಿಂ ಸಮುದಾಯಕ್ಕೆ ಕೆಲ ನಿರ್ಬಂಧಗಳನ್ನು ಹೇರುತ್ತಿದ್ದಾರೆ. ಹಿಜಾಬ್, ಹಲಾಲ್, ಮಸೀದಿ ಮೈಕ್​ಗೆ ನಿರ್ಬಂಧ ಅಂದರು. ದೇವಸ್ಥಾನ ಸುತ್ತಮುತ್ತ ವ್ಯಾಪಾರ ನಿರ್ಬಂಧ, ಮಾವು ಮಾರಾಟ ವಿಚಾರ ಮುಂದೆ ತಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ತೋರಿದರು.

ಬೆಲೆ ಏರಿಕೆ ಬಗ್ಗೆ ಮಾತನಾಡಲಿ, ಯಾಕೆ ಬಿಜೆಪಿ ಅದರ ಬಗ್ಗೆ ಮಾತಾಡ್ತಿಲ್ಲ? ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳವಾಗುತ್ತಲೇ ಇದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಧಾರ್ಮಿಕ ವಿಚಾರ ಚರ್ಚೆಗೆ ತಂದಿದ್ದಾರೆ. ಹಲಾಲ್ ಮಾಂಸ ಹಿಂದೆಲ್ಲಾ ತಿಂದಿಲ್ವಾ? ಅದೇನ್ ಹೊಸದಾ? ಎಂದು ಮೈಸೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ:

ಕಾಲಿಗೆ ಕಾಡುಬಳ್ಳಿ ತೊಡರಿ ಬಿಡಿಸಿಕೊಳ್ಳಲಾಗದೆ ಅರಚುತ್ತಿದ್ದ ಕರಡಿಯನೆರವಿಗ ಅರಣ್ಯ ಸಿಬ್ಬಂದಿ ಧಾವಿಸಿದರು

ಅಸಾರಾಂ ಬಾಪು ಆಶ್ರಮದೊಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ