ಬೆಳಗ್ಗೆ ತಮ್ಮ ಮೇಲೆ ರೇಗಿದ್ದ ಮುಡಾ ಹಿಂದಿನ ಆಯುಕ್ತ ಮಧ್ಯಾಹ್ನ ಊಟಕ್ಕೆ ಬಂದಾಗ ಮಾಧ್ಯಮದವರು ಮುಗಿಬಿದ್ದರು

ಅರುಣ್​ ಕುಮಾರ್​ ಬೆಳ್ಳಿ

Updated on: Nov 19, 2024 | 4:20 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯನ್ನೊಳಗೊಂಡ ಮುಡಾ ಪ್ರಕರಣದ ಬಗ್ಗೆ ಮಾತಾಡಿದ ನಟೇಶ್ ವಿಚಾರಣೆ ಜಾರಿಯಲ್ಲಿರುವುದರಿಂದ ಏನನ್ನೂ ಹೇಳಲಾಗದು, ಸಿಎಂ ಪತ್ನಿಯವರಿಗೆ ತಮ್ಮ ಅವಧಿಯಲ್ಲಿ ಸೈಟು ಅಲಾಟ್ ಆಗಿರೋದು ನಿಜ, ಕಾಯ್ದೆ ಮತ್ತು ನಿಯಮಾವಳಿಗಳ ಬಗ್ಗೆ ಅಧಿಕಾರಗಳ ದೃಷ್ಟಿಕೋನ ಭಿನ್ನವಾಗಿರುತ್ತದೆ ಎಂದು ನಟೇಶ್ ಹೇಳಿದರು.

ಮೈಸೂರು: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅಂತ ಪ್ರಾಯಶಃ ಇದನ್ನೇ ಹೇಳೋದು. ಇಂದು ಲೋಕಾಯುಕ್ತ ಕಚೇರಿಗೆ ಬಂದ ಹಿಂದಿನ ಮುಡಾ ಆಯುಕ್ತ ಡಿಬಿ ನಟೇಶ್ ತನ್ನ ಆಗಮನದ ವಿಡಿಯೋ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಡ್ಯಾನ್ಸ್ ಮಾಡ್ತಾ ಇದ್ದೀನಾ? ಕಾಮನ್ ಸೆನ್ಸ್ ಇಲ್ವಾ ಅಂತ ರೇಗಿದ್ದರು. ನಟೇಶ್ ಬೆಳಗಿನ ವಿಚಾರಣೆ ಮುಗಿಸಿಕೊಂಡು ಮಧ್ಯಾಹ್ನದ ಊಟಕ್ಕೆಂದು ಬಂದಾಗ ಅವರಿಗಾಗಿ ಕಾಯುತ್ತಿದ್ದ ಮಿಡಿಯಾದವರು ಮುಗಿಬಿದ್ದರು. ನೀವು ಮಾತಾಡಿದ್ದು ತಪ್ಪಲ್ವಾ? ಯಾಕೆ ಕಾಮನ್ ಸೆನ್ಸ್ ಅಂತ ಇಲ್ಲ ಹೇಳಿದ್ದು ಅಂತ ಎಲ್ಲರೂ ಕೇಳಲಾರಂಭಿಸಿದಾಗ ಕಕ್ಕಾಬಿಕ್ಕಿಯಾದ ನಟೇಶ್ ಮೊದಲು ನಿರುತ್ತರರಾದರೂ ನಂತರ ಸಾವರಿಸಿಕೊಂಡು ಏನೇನೋ ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಾಯುಕ್ತ ಕಚೇರಿಗೆ ಆಗಮಿಸಿದ ಹಿಂದಿನ ಮುಡಾ ಆಯುಕ್ತ ನಟೇಶ್ ಮಾಧ್ಯಮಗಳ ಮೇಲೆ ಕಿಡಿ ಕಾರಿದರು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.