AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದ ಮೈಸೂರಿನ ನಾಲ್ವರು ನಾಪತ್ತೆ

ಹಿಮಾಚಲ ಪ್ರದೇಶದ ಬಿಯಾಸ್​​ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹವಾಗಿ ಮನೆ, ವಾಹನ, ಸೇತುವೆ ಹೂಗೂ ನೀರಿನ ರಭಸಕ್ಕೆ ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ಇದರಿಂದ ಸಂಪರ್ಕ ಕಡಿತವಾಗಿದೆ. ಇನ್ನು ಪ್ರವಾಸಕ್ಕೆ ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ.

ಹಿಮಾಚಲ ಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದ ಮೈಸೂರಿನ ನಾಲ್ವರು ನಾಪತ್ತೆ
ಮೈಸೂರಿನ ಪ್ರವಾಸಿಗರು
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Jul 11, 2023 | 8:11 AM

Share

ಮೈಸೂರು: ಹಿಮಾಚಲ ಪ್ರದೇಶದ (Himachal Pradesh) ಸೇರಿದಂತೆ ಉತ್ತರ ಭಾರತ ನೈಸರ್ಗಿಕ ವಿಕೋಪದಿಂದ (Natural disaster) ತತ್ತರಿಸಿದೆ. ಒಂದೇಸಮ ಮಳೆ ಸುರಿಯುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವಾರು ಕಡೆಗಳಲ್ಲಿ ಪ್ರವಾಹ ಉಂಟಾಗಿದೆ. ಹಿಮಾಚಲ ಪ್ರದೇಶದ ಬಿಯಾಸ್​​ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹವಾಗಿ ಮನೆ, ವಾಹನ, ಸೇತುವೆ ಹೂಗೂ ನೀರಿನ ರಭಸಕ್ಕೆ ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ಇದರಿಂದ ಸಂಪರ್ಕ ಕಡಿತವಾಗಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (India Meteorological Department) ಹಿಮಾಚಲ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಇನ್ನು ಹಿಮಾಚಲ ಪ್ರದೇಶದ ಕುಲು-ಮನಾಲಿ ಪ್ರವಾಸಕ್ಕೆ ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ.

ಪ್ಯಾಕೇಜ್ ಟೂರ್‌ನಲ್ಲಿ ಹೋಗಿದ್ದ ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ನಾಪತ್ತೆಯಾದವರು. ನಾಲ್ವರು ಕಳೆದ ಗುರುವಾರ ಮೈಸೂರಿನಿಂದ ಕುಲು-ಮನಾಲಿಗೆ ತೆರಳಿದ್ದರು. ಭಾನುವಾರ ರಾತ್ರಿ ಕೊನೆಯ ಬಾರಿಗೆ ಸಂಪರ್ಕಕ್ಕೆ ಸಿಕ್ಕಿದ್ದರು. ಈ ವೇಳೆ ಮಳೆ ಜಾಸ್ತಿ ಇದೆ ರೆಡ್​ ಅಲರ್ಟ್​ ಘೋಷಿಸಿದ್ದಾರೆ. ನಾವು ಸುರಕ್ಷಿತವಾಗಿದ್ದೇವೆಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಬಳಿಕ ಸಂಪರ್ಕಕ್ಕೆ ಸಿಗದ ಹಿನ್ನೆಲೆ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ನಮ್ಮವರನ್ನು ಸುರಕ್ಷಿತವಾಗಿ ಕರೆತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅಮರನಾಥ ಯಾತ್ರೆಗೆ ತೆರಳಿದ್ದ ಕಾಫಿನಾಡಿಗರು ಸೇಫ್

ಚಿಕ್ಕಮಗಳೂರು: ಅಮರನಾಥ ಯಾತ್ರೆಗೆ ತೆರಳಿದ್ದ ಕಾಫಿನಾಡು ಚಿಕ್ಕಮಗಳೂರಿನ ಐವರು ಸೇಫ್​ ಆಗಿದ್ದಾರೆ. ಮಳೆಯಿಂದ ಶೇಷನಾಗ್ ಪ್ರದೇಶದಲ್ಲಿ ಐವರು ಸಿಲುಕಿದ್ದರು. ನಿನ್ನೆ (ಜು.10) ಅಮರನಾಥನ ದರ್ಶನ ಪಡೆದು ಇಂದು ಬೆಲ್ತಾಲ್ ಬೇಸ್ಗೆ ವಾಪಸ್ ಆಗಿದ್ದಾರೆ.  ಶ್ರೀನಿವಾಸ್ ,ಮಣಿ ,ಭರತ್, ಚಂದ್ರಶೇಖರ್, ಮನೋಜ್  ಐವರ ತಂಡ ಕಳೆದ ವಾರ ಚಿಕ್ಕಮಗಳೂರಿನಿಂದ ಯಾತ್ರೆಗೆ ತೆರಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 11 July 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ