ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಶಾಲಾ ಬಾಲಕರು ನೀರುಪಾಲು!

ಮೈಸೂರು: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಶಾಲಾ ಬಾಲಕರು ನೀರುಪಾಲಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮಲ್ಬಾರ್ ಗ್ರಾಮದಲ್ಲಿ ಸಂಭವಿಸಿದೆ. ನೀರಿನಲ್ಲಿ ಮುಳುಗಿ ಕಿರಣ, ಕೆಂಡಗಣ್ಣ ಹಾಗೂ ಸಹೋದರರಾದ ರೋಹಿತ್, ಯಶವಂತ‌ ಮೃತಪಟ್ಟಿದ್ದಾರೆ. ನಿನ್ನೆ ಶಾಲೆಗೆ ರಜೆ ಇದ್ದ ಕಾರಣ ಮಲ್ಬಾರ್ ಗ್ರಾಮದ ಕೆರೆಯಲ್ಲಿ ಈಜಲು ವಿದ್ಯಾರ್ಥಿಗಳು ತೆರಳಿದ್ದರು. ಕೆರೆ ಏರಿ ಮೇಲೆ ಬಾಲಕರ ಬಟ್ಟೆ ಹಾಗೂ ಬೈಸಿಕಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರು ಕೆರೆಯಲ್ಲಿ ಹುಡುಕಾಟ ನಡೆಸಿದ್ದರು. ಆಗ ಕೆರೆಯಲ್ಲಿ ನಾಲ್ವರು ಬಾಲಕರ ಮೃತದೇಹ ಪತ್ತೆಯಾಗಿದೆ. […]

ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಶಾಲಾ ಬಾಲಕರು ನೀರುಪಾಲು!
ಸಾಧು ಶ್ರೀನಾಥ್​

Updated on: Feb 22, 2020 | 12:27 PM

ಮೈಸೂರು: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಶಾಲಾ ಬಾಲಕರು ನೀರುಪಾಲಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮಲ್ಬಾರ್ ಗ್ರಾಮದಲ್ಲಿ ಸಂಭವಿಸಿದೆ. ನೀರಿನಲ್ಲಿ ಮುಳುಗಿ ಕಿರಣ, ಕೆಂಡಗಣ್ಣ ಹಾಗೂ ಸಹೋದರರಾದ ರೋಹಿತ್, ಯಶವಂತ‌ ಮೃತಪಟ್ಟಿದ್ದಾರೆ.

ನಿನ್ನೆ ಶಾಲೆಗೆ ರಜೆ ಇದ್ದ ಕಾರಣ ಮಲ್ಬಾರ್ ಗ್ರಾಮದ ಕೆರೆಯಲ್ಲಿ ಈಜಲು ವಿದ್ಯಾರ್ಥಿಗಳು ತೆರಳಿದ್ದರು. ಕೆರೆ ಏರಿ ಮೇಲೆ ಬಾಲಕರ ಬಟ್ಟೆ ಹಾಗೂ ಬೈಸಿಕಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರು ಕೆರೆಯಲ್ಲಿ ಹುಡುಕಾಟ ನಡೆಸಿದ್ದರು. ಆಗ ಕೆರೆಯಲ್ಲಿ ನಾಲ್ವರು ಬಾಲಕರ ಮೃತದೇಹ ಪತ್ತೆಯಾಗಿದೆ.

ನಾಲ್ವರು ಶಾಲಾ ಬಾಲಕರ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಪೋಷಕರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:13 pm, Sat, 22 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us