AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ದಿನಾಚರಣೆ ಪ್ರಯುಕ್ತ ಮೈಸೂರು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ

ಇಂದು ಮಕ್ಕಳ ದಿನಾಚರಣೆ ಹಿನ್ನೆಲೆ ಮೃಗಾಲಯ ಮತ್ತು ವಸ್ತು ಪ್ರದರ್ಶನಕ್ಕೆ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗಿದೆ. ಪ್ರತಿ ವರ್ಷವೂ ಮಕ್ಕಳ ದಿನಾಚರಣೆ ದಿನ ಉಚಿತ ಪ್ರವೇಶ ನೀಡಲಾಗುತ್ತೆ. ಅದರಂತೆ ಇಂದು ಕೂಡ ಉಚಿತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇಂದು ದೀಪಾವಳಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವ ಸಾಧ್ಯತೆ ಇದೆ.

ಮಕ್ಕಳ ದಿನಾಚರಣೆ ಪ್ರಯುಕ್ತ ಮೈಸೂರು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ
ಮೈಸೂರು ಮೃಗಾಲಯ
ರಾಮ್​, ಮೈಸೂರು
| Edited By: |

Updated on:Nov 14, 2023 | 9:58 AM

Share

ಮೈಸೂರು, ನ.14: ಮಕ್ಕಳ ದಿನಾಚರಣೆಯ (Childrens Day) ಪ್ರಯುಕ್ತ ಮಂಗಳವಾರ (ನ. 14) ಚಾಮರಾಜೇಂದ್ರ ಮೃಗಾಲಯ (Mysuru Zoo) ಮತ್ತು ಕಾರಂಜಿ ಕೆರೆಯ ನೇಚರ್ ಪಾರ್ಕ್ ಅನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. 12 ವರ್ಷದೊಳಗಿನ ಮಕ್ಕಳಿಗೆ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೃಗಾಲಯವನ್ನು ವೀಕ್ಷಿಸಲು ಉಚಿತ ಪ್ರವೇಶವನ್ನು ನೀಡಲಾಗಿದೆ.

ಇಂದು ಮಕ್ಕಳ ದಿನಾಚರಣೆ ಹಿನ್ನೆಲೆ ಮೃಗಾಲಯ ಮತ್ತು ವಸ್ತು ಪ್ರದರ್ಶನಕ್ಕೆ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗಿದೆ. ಪ್ರತಿ ವರ್ಷವೂ ಮಕ್ಕಳ ದಿನಾಚರಣೆ ದಿನ ಉಚಿತ ಪ್ರವೇಶ ನೀಡಲಾಗುತ್ತೆ. ಅದರಂತೆ ಇಂದು ಕೂಡ ಉಚಿತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇಂದು ದೀಪಾವಳಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವ ಸಾಧ್ಯತೆ ಇದೆ. ಇನ್ನು ಪ್ರತಿ ವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತೆ. ಈ ದಿನ ಶಾಲೆ, ಕಾಲೇಜುಗಳಲ್ಲಿ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಿ, ಸಮಾರಂಭಗಳನ್ನು ಮಾಡಿ ಸಿಹಿ ಹಂಚಲಾಗುತ್ತೆ. ಬಹುಮಾನಗಳನ್ನು ವಿತರಿಸಲಾಗುತ್ತೆ. ಆದರೆ ಇಂದು ದೀಪಾವಳಿ ರಜೆ ಇರುವ ಕಾರಣ ಕೆಲವು ಶಾಲೆಗಳು ನಾಳೆ ಈ ದಿನವನ್ನು ಆಚರಿಸಲು ಸಿದ್ಧತೆ ಮಾಡಿಕೊಂಡಿವೆ.

ಇದನ್ನೂ ಓದಿ: ತ್ಯಾಜ್ಯ ವಿಲೇವಾರಿಗೆ ಶುಲ್ಕ: ಕಸ ಸಂಗ್ರಹಿಸಲು ಬಿಬಿಎಂಪಿಗೆ ಪ್ರತಿ ತಿಂಗಳು ಹಣ ಪಾವತಿಸಬೇಕು, ಎಷ್ಟು ಗೊತ್ತಾ?

ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಮಾಡುವ ಮೂಲಕ ಅವರ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಮೂಲ ಉದ್ದೇಶವಾಗಿದೆ. ಈ ಹಿಂದೆ ನವೆಂಬರ್ 20 ರಂದು ಭಾರತದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿತ್ತು. ಕಾರಣ ವಿಶ್ವಸಂಸ್ಥೆಯು ಸಾರ್ವತ್ರಿಕ ಮಕ್ಕಳ ದಿನ ಎಂದು ಈ ದಿನಾಂಕವನ್ನು ಘೋಷಣೆ ಮಾಡಿತ್ತು. ಆದರೆ ಪಂಡಿತ್ ಜವಾಹರಲಾಲ್ ನೆಹರು ಅವರ ಮರಣದ ನಂತರ ಅವರ ಜನ್ಮದಿನವಾದ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ನೆಹರು ಅವರ ಮರಣದ ನಂತರ, ಅವರ ಜನ್ಮದಿನದ ಸವಿನೆನಪಿಗಾಗಿ ನವೆಂಬರ್ 14ರಂದು ಭಾರತದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ.

ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿಯಾದ ಜವಾಹರಲಾಲ್ ನೆಹರು ರವರಿಗೆ ಮಕ್ಕಳೆಂದರೆ ಪ್ರೀತಿ. ಮಕ್ಕಳು ಪ್ರೀತಿಯಿಂದ ಚಾಚಾ ನೆಹರು ಎಂದು ಕರೆಯುತ್ತಿದ್ದರು. ದೇಶದ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕೆಂಬುದು ಅವರ ಧ್ಯೇಯವಾಗಿತ್ತು. ಹೀಗಾಗಿ ಅವರ ಸವಿನೆನಪಿಗಾಗಿ ಅವರ ಜನ್ಮ ದಿನಾಂಕದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:25 am, Tue, 14 November 23