AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ರೋಗಿಗಳಿಗೆ ಉಚಿತ ಊರುಗೋಲು: ಮೈಸೂರು ಕೆಆರ್ ಆಸ್ಪತ್ರೆ ನೆಫ್ರೋ ಯುರಾಲಜಿಗೆ ಹೊಸ ಲೇಸರ್ ಯಂತ್ರ, ಕಿಡ್ನಿ ಕಲ್ಲು ಪುಡಿ ಪುಡಿ ಮಾಡುತ್ತದೆ!

Mysore K.R. hospital Nephro Urology department: ಮೈಸೂರಿನ ಕೆ.ಆರ್. ಆಸ್ಪತ್ರೆಯ ನೆಫ್ರೋಯುರಾಲಜಿ ವಿಭಾಗಕ್ಕೆ ಹೊಸ ಯಂತ್ರ ಬಂದಿದೆ. ಲೇಸರ್ ಟ್ರೀಟ್ಮೆಂಟ್ ಮೂಲಕ ರೋಗಿಯ ಕಿಡ್ನಿಯಲ್ಲಿ ಇರುವ 2 ಎಂ.ಎಂ. ಒಳಗಿನ ಕಲ್ಲುಗಳನ್ನು ಪುಡಿ ಮಾಡಿ ನೇರವಾಗಿ ಹೊರತೆಗೆಯಬಹುದಾಗಿದೆ.

ಬಡ ರೋಗಿಗಳಿಗೆ ಉಚಿತ ಊರುಗೋಲು: ಮೈಸೂರು ಕೆಆರ್ ಆಸ್ಪತ್ರೆ ನೆಫ್ರೋ ಯುರಾಲಜಿಗೆ ಹೊಸ ಲೇಸರ್ ಯಂತ್ರ, ಕಿಡ್ನಿ ಕಲ್ಲು ಪುಡಿ ಪುಡಿ ಮಾಡುತ್ತದೆ!
ಬಡ ರೋಗಿಗಳಿಗೆ ಉಚಿತ ಊರುಗೋಲು
ರಾಮ್​, ಮೈಸೂರು
| Edited By: |

Updated on:Jul 22, 2023 | 5:04 PM

Share

ಕಿಡ್ನಿಯಲ್ಲಿ ಕಲ್ಲಿದೆ, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ, ಕೈಯಲ್ಲಿ ಕಾಸಿಲ್ಲ, ಏನ್ ಮಾಡೋದು? ಅಂತಾ ಯೋಚನೆಯಲ್ಲಿದ್ದೀರಾ. ಹಾಗಿದ್ರೆ ಚಿಂತೆ ಬಿಡಿ. ಯಾಕಂದ್ರೆ ಬಡವರ ಪಾಲಿನ ಸಂಜೀವಿನಿ ಕೆ.ಆರ್‌‌. ಆಸ್ಪತ್ರೆಯ (Mysore K.R. hospital) ನೆಫ್ರೋ ಯುರಾಲಜಿ ವಿಭಾಗದಲ್ಲಿ (Nephro Urology department) ಇನ್ಮುಂದೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತೆ, ಅದೂ ಸಹ ಉಚಿತವಾಗಿ! ಸರ್ಕಾರಿ ಆಸ್ಪತ್ರೆ ಅಂದ್ರೆ ಅಲ್ಲಿ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ ಅಂತಾ ಮೂಗು ಮುರಿಯುವರೇ ಹೆಚ್ಚು. ಇಂತಹ ಕಾಲಘಟ್ಟದಲ್ಲಿ ಮೈಸೂರಿನ ಕೆ ಆರ್ ಆಸ್ಪತ್ರೆಯು ರೋಗಿಗಳಿಗೆ ವರದಾನವಾಗಿದೆ. ಹೌದು ಇದಕ್ಕೆ ಕಾರಣವಾಗಿರುವುದು ಮೈಸೂರಿನ ಕೆ.ಆರ್. ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ವಿಭಾಗಕ್ಕೆ ಬಂದಿರುವ ಹೊಸ ಯಂತ್ರ. ಈ ಯಂತ್ರದಿಂದ ಲೇಸರ್ ಟ್ರೀಟ್ ಮೆಂಟ್ (laser machine) ಮೂಲಕ ರೋಗಿಯ ಕಿಡ್ನಿಯಲ್ಲಿ ಇರುವ ಸುಮಾರು 2 ಎಂ.ಎಂ. ಒಳಗಿನ ಕಲ್ಲುಗಳನ್ನು (kidney stones) ಪುಡಿ ಮಾಡಿ ನೇರವಾಗಿ ಹೊರತೆಗೆಯಬಹುದಾಗಿದೆ. ಅತ್ಯಾಧುನಿಕ ವಿಧಾನದ ಚಿಕಿತ್ಸೆ ಇನ್ನು ಮುಂದೆ ನೆಪ್ರೋ ಯುರಾಲಜಿ ವಿಭಾಗದಲ್ಲಿ ಉಚಿತವಾಗಿ ದೊರೆಯಲಿದೆ‌ ಎಂದು ಕೇಶವ ಮೂರ್ತಿ- ಮುಖ್ಯಸ್ಥರು, ನೆಪ್ರೋ ಯುರಾಲಜಿ ಅವರು ಮಾಹಿತಿ ನೀಡಿದ್ದಾರೆ.

ಇನ್ನು ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ ಇದೇ ಮೊದಲಬಾರಿಗೆ 35 watt holmium laser ಯಂತ್ರವನ್ನು ಮೈಸೂರಿನ ನೆಪ್ರೋ ಯುರಾಲಜಿ ಯೂನಿಟ್ ನಲ್ಲಿ ಬಳಸಲಾಗುತ್ತಿದೆ. ಬಿಪಿಎಲ್, ಎಸ್ ಸಿ ಎಸ್ ಟಿ‌ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಎಪಿಎಲ್ ಕಾರ್ಡ್ ದಾರರಿಗೆ ಶೇ 30% ರಿಯಾಯಿತಿ ಸಿಗಲಿದೆ. ಮೂತ್ರನಾಳದ ಮೂಲಕ ಫೈಬರ್ ಬಳಸಿ ಲೇಸರ್ ಮೂಲಕ ಕಿಡ್ನಿಯಲ್ಲಿರುವ ಕಲ್ಲುಗಳನ್ನು ಪುಡಿ ಮಾಡಿ ಹೊರ ತೆಗೆಯಲಾಗುತ್ತದೆ ಎಂದು ಮೈಸೂರು ಘಟಕದ ಮುಖ್ಯಸ್ಥರಾದ ಡಾ. ನರೇಂದ್ರ ಜೆ.ಬಿ. ಅವರು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗ್ತಾ ಇಲ್ಲ ಅಂತಾ ರೋಗಿಗಳು ಒಂದು ಕಡೆ ಪರದಾಡುತ್ತಿದ್ದರೆ, ಮತ್ತೊಂದು ಕಡೆ ನೂತನ ಚಿಕಿತ್ಸಾ ವಿಧಾನದ ಮೂಲಕ ನೆಫ್ರೋಯುರಾಲಜಿ ಕೇಂದ್ರ ಸುಧಾರಣೆಯತ್ತ ಹೆಜ್ಜೆ ಹಾಕುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಆರೋಗ್ಯ ಕ್ಷೇತ್ರದ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sat, 22 July 23

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ