AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ರೋಗಿಗಳಿಗೆ ಉಚಿತ ಊರುಗೋಲು: ಮೈಸೂರು ಕೆಆರ್ ಆಸ್ಪತ್ರೆ ನೆಫ್ರೋ ಯುರಾಲಜಿಗೆ ಹೊಸ ಲೇಸರ್ ಯಂತ್ರ, ಕಿಡ್ನಿ ಕಲ್ಲು ಪುಡಿ ಪುಡಿ ಮಾಡುತ್ತದೆ!

Mysore K.R. hospital Nephro Urology department: ಮೈಸೂರಿನ ಕೆ.ಆರ್. ಆಸ್ಪತ್ರೆಯ ನೆಫ್ರೋಯುರಾಲಜಿ ವಿಭಾಗಕ್ಕೆ ಹೊಸ ಯಂತ್ರ ಬಂದಿದೆ. ಲೇಸರ್ ಟ್ರೀಟ್ಮೆಂಟ್ ಮೂಲಕ ರೋಗಿಯ ಕಿಡ್ನಿಯಲ್ಲಿ ಇರುವ 2 ಎಂ.ಎಂ. ಒಳಗಿನ ಕಲ್ಲುಗಳನ್ನು ಪುಡಿ ಮಾಡಿ ನೇರವಾಗಿ ಹೊರತೆಗೆಯಬಹುದಾಗಿದೆ.

ಬಡ ರೋಗಿಗಳಿಗೆ ಉಚಿತ ಊರುಗೋಲು: ಮೈಸೂರು ಕೆಆರ್ ಆಸ್ಪತ್ರೆ ನೆಫ್ರೋ ಯುರಾಲಜಿಗೆ ಹೊಸ ಲೇಸರ್ ಯಂತ್ರ, ಕಿಡ್ನಿ ಕಲ್ಲು ಪುಡಿ ಪುಡಿ ಮಾಡುತ್ತದೆ!
ಬಡ ರೋಗಿಗಳಿಗೆ ಉಚಿತ ಊರುಗೋಲು
ರಾಮ್​, ಮೈಸೂರು
| Edited By: |

Updated on:Jul 22, 2023 | 5:04 PM

Share

ಕಿಡ್ನಿಯಲ್ಲಿ ಕಲ್ಲಿದೆ, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ, ಕೈಯಲ್ಲಿ ಕಾಸಿಲ್ಲ, ಏನ್ ಮಾಡೋದು? ಅಂತಾ ಯೋಚನೆಯಲ್ಲಿದ್ದೀರಾ. ಹಾಗಿದ್ರೆ ಚಿಂತೆ ಬಿಡಿ. ಯಾಕಂದ್ರೆ ಬಡವರ ಪಾಲಿನ ಸಂಜೀವಿನಿ ಕೆ.ಆರ್‌‌. ಆಸ್ಪತ್ರೆಯ (Mysore K.R. hospital) ನೆಫ್ರೋ ಯುರಾಲಜಿ ವಿಭಾಗದಲ್ಲಿ (Nephro Urology department) ಇನ್ಮುಂದೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತೆ, ಅದೂ ಸಹ ಉಚಿತವಾಗಿ! ಸರ್ಕಾರಿ ಆಸ್ಪತ್ರೆ ಅಂದ್ರೆ ಅಲ್ಲಿ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ ಅಂತಾ ಮೂಗು ಮುರಿಯುವರೇ ಹೆಚ್ಚು. ಇಂತಹ ಕಾಲಘಟ್ಟದಲ್ಲಿ ಮೈಸೂರಿನ ಕೆ ಆರ್ ಆಸ್ಪತ್ರೆಯು ರೋಗಿಗಳಿಗೆ ವರದಾನವಾಗಿದೆ. ಹೌದು ಇದಕ್ಕೆ ಕಾರಣವಾಗಿರುವುದು ಮೈಸೂರಿನ ಕೆ.ಆರ್. ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ವಿಭಾಗಕ್ಕೆ ಬಂದಿರುವ ಹೊಸ ಯಂತ್ರ. ಈ ಯಂತ್ರದಿಂದ ಲೇಸರ್ ಟ್ರೀಟ್ ಮೆಂಟ್ (laser machine) ಮೂಲಕ ರೋಗಿಯ ಕಿಡ್ನಿಯಲ್ಲಿ ಇರುವ ಸುಮಾರು 2 ಎಂ.ಎಂ. ಒಳಗಿನ ಕಲ್ಲುಗಳನ್ನು (kidney stones) ಪುಡಿ ಮಾಡಿ ನೇರವಾಗಿ ಹೊರತೆಗೆಯಬಹುದಾಗಿದೆ. ಅತ್ಯಾಧುನಿಕ ವಿಧಾನದ ಚಿಕಿತ್ಸೆ ಇನ್ನು ಮುಂದೆ ನೆಪ್ರೋ ಯುರಾಲಜಿ ವಿಭಾಗದಲ್ಲಿ ಉಚಿತವಾಗಿ ದೊರೆಯಲಿದೆ‌ ಎಂದು ಕೇಶವ ಮೂರ್ತಿ- ಮುಖ್ಯಸ್ಥರು, ನೆಪ್ರೋ ಯುರಾಲಜಿ ಅವರು ಮಾಹಿತಿ ನೀಡಿದ್ದಾರೆ.

ಇನ್ನು ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ ಇದೇ ಮೊದಲಬಾರಿಗೆ 35 watt holmium laser ಯಂತ್ರವನ್ನು ಮೈಸೂರಿನ ನೆಪ್ರೋ ಯುರಾಲಜಿ ಯೂನಿಟ್ ನಲ್ಲಿ ಬಳಸಲಾಗುತ್ತಿದೆ. ಬಿಪಿಎಲ್, ಎಸ್ ಸಿ ಎಸ್ ಟಿ‌ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಎಪಿಎಲ್ ಕಾರ್ಡ್ ದಾರರಿಗೆ ಶೇ 30% ರಿಯಾಯಿತಿ ಸಿಗಲಿದೆ. ಮೂತ್ರನಾಳದ ಮೂಲಕ ಫೈಬರ್ ಬಳಸಿ ಲೇಸರ್ ಮೂಲಕ ಕಿಡ್ನಿಯಲ್ಲಿರುವ ಕಲ್ಲುಗಳನ್ನು ಪುಡಿ ಮಾಡಿ ಹೊರ ತೆಗೆಯಲಾಗುತ್ತದೆ ಎಂದು ಮೈಸೂರು ಘಟಕದ ಮುಖ್ಯಸ್ಥರಾದ ಡಾ. ನರೇಂದ್ರ ಜೆ.ಬಿ. ಅವರು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗ್ತಾ ಇಲ್ಲ ಅಂತಾ ರೋಗಿಗಳು ಒಂದು ಕಡೆ ಪರದಾಡುತ್ತಿದ್ದರೆ, ಮತ್ತೊಂದು ಕಡೆ ನೂತನ ಚಿಕಿತ್ಸಾ ವಿಧಾನದ ಮೂಲಕ ನೆಫ್ರೋಯುರಾಲಜಿ ಕೇಂದ್ರ ಸುಧಾರಣೆಯತ್ತ ಹೆಜ್ಜೆ ಹಾಕುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಆರೋಗ್ಯ ಕ್ಷೇತ್ರದ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sat, 22 July 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ