ಬಡ ರೋಗಿಗಳಿಗೆ ಉಚಿತ ಊರುಗೋಲು: ಮೈಸೂರು ಕೆಆರ್ ಆಸ್ಪತ್ರೆ ನೆಫ್ರೋ ಯುರಾಲಜಿಗೆ ಹೊಸ ಲೇಸರ್ ಯಂತ್ರ, ಕಿಡ್ನಿ ಕಲ್ಲು ಪುಡಿ ಪುಡಿ ಮಾಡುತ್ತದೆ!

Mysore K.R. hospital Nephro Urology department: ಮೈಸೂರಿನ ಕೆ.ಆರ್. ಆಸ್ಪತ್ರೆಯ ನೆಫ್ರೋಯುರಾಲಜಿ ವಿಭಾಗಕ್ಕೆ ಹೊಸ ಯಂತ್ರ ಬಂದಿದೆ. ಲೇಸರ್ ಟ್ರೀಟ್ಮೆಂಟ್ ಮೂಲಕ ರೋಗಿಯ ಕಿಡ್ನಿಯಲ್ಲಿ ಇರುವ 2 ಎಂ.ಎಂ. ಒಳಗಿನ ಕಲ್ಲುಗಳನ್ನು ಪುಡಿ ಮಾಡಿ ನೇರವಾಗಿ ಹೊರತೆಗೆಯಬಹುದಾಗಿದೆ.

ಬಡ ರೋಗಿಗಳಿಗೆ ಉಚಿತ ಊರುಗೋಲು: ಮೈಸೂರು ಕೆಆರ್ ಆಸ್ಪತ್ರೆ ನೆಫ್ರೋ ಯುರಾಲಜಿಗೆ ಹೊಸ ಲೇಸರ್ ಯಂತ್ರ, ಕಿಡ್ನಿ ಕಲ್ಲು ಪುಡಿ ಪುಡಿ ಮಾಡುತ್ತದೆ!
ಬಡ ರೋಗಿಗಳಿಗೆ ಉಚಿತ ಊರುಗೋಲು
Edited By:

Updated on: Jul 22, 2023 | 5:04 PM

ಕಿಡ್ನಿಯಲ್ಲಿ ಕಲ್ಲಿದೆ, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ, ಕೈಯಲ್ಲಿ ಕಾಸಿಲ್ಲ, ಏನ್ ಮಾಡೋದು? ಅಂತಾ ಯೋಚನೆಯಲ್ಲಿದ್ದೀರಾ. ಹಾಗಿದ್ರೆ ಚಿಂತೆ ಬಿಡಿ. ಯಾಕಂದ್ರೆ ಬಡವರ ಪಾಲಿನ ಸಂಜೀವಿನಿ ಕೆ.ಆರ್‌‌. ಆಸ್ಪತ್ರೆಯ (Mysore K.R. hospital) ನೆಫ್ರೋ ಯುರಾಲಜಿ ವಿಭಾಗದಲ್ಲಿ (Nephro Urology department) ಇನ್ಮುಂದೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತೆ, ಅದೂ ಸಹ ಉಚಿತವಾಗಿ! ಸರ್ಕಾರಿ ಆಸ್ಪತ್ರೆ ಅಂದ್ರೆ ಅಲ್ಲಿ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ ಅಂತಾ ಮೂಗು ಮುರಿಯುವರೇ ಹೆಚ್ಚು. ಇಂತಹ ಕಾಲಘಟ್ಟದಲ್ಲಿ ಮೈಸೂರಿನ ಕೆ ಆರ್ ಆಸ್ಪತ್ರೆಯು ರೋಗಿಗಳಿಗೆ ವರದಾನವಾಗಿದೆ. ಹೌದು ಇದಕ್ಕೆ ಕಾರಣವಾಗಿರುವುದು ಮೈಸೂರಿನ ಕೆ.ಆರ್. ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ವಿಭಾಗಕ್ಕೆ ಬಂದಿರುವ ಹೊಸ ಯಂತ್ರ. ಈ ಯಂತ್ರದಿಂದ ಲೇಸರ್ ಟ್ರೀಟ್ ಮೆಂಟ್ (laser machine) ಮೂಲಕ ರೋಗಿಯ ಕಿಡ್ನಿಯಲ್ಲಿ ಇರುವ ಸುಮಾರು 2 ಎಂ.ಎಂ. ಒಳಗಿನ ಕಲ್ಲುಗಳನ್ನು (kidney stones) ಪುಡಿ ಮಾಡಿ ನೇರವಾಗಿ ಹೊರತೆಗೆಯಬಹುದಾಗಿದೆ. ಅತ್ಯಾಧುನಿಕ ವಿಧಾನದ ಚಿಕಿತ್ಸೆ ಇನ್ನು ಮುಂದೆ ನೆಪ್ರೋ ಯುರಾಲಜಿ ವಿಭಾಗದಲ್ಲಿ ಉಚಿತವಾಗಿ ದೊರೆಯಲಿದೆ‌ ಎಂದು ಕೇಶವ ಮೂರ್ತಿ- ಮುಖ್ಯಸ್ಥರು, ನೆಪ್ರೋ ಯುರಾಲಜಿ ಅವರು ಮಾಹಿತಿ ನೀಡಿದ್ದಾರೆ.

ಇನ್ನು ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ ಇದೇ ಮೊದಲಬಾರಿಗೆ 35 watt holmium laser ಯಂತ್ರವನ್ನು ಮೈಸೂರಿನ ನೆಪ್ರೋ ಯುರಾಲಜಿ ಯೂನಿಟ್ ನಲ್ಲಿ ಬಳಸಲಾಗುತ್ತಿದೆ. ಬಿಪಿಎಲ್, ಎಸ್ ಸಿ ಎಸ್ ಟಿ‌ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಎಪಿಎಲ್ ಕಾರ್ಡ್ ದಾರರಿಗೆ ಶೇ 30% ರಿಯಾಯಿತಿ ಸಿಗಲಿದೆ. ಮೂತ್ರನಾಳದ ಮೂಲಕ ಫೈಬರ್ ಬಳಸಿ ಲೇಸರ್ ಮೂಲಕ ಕಿಡ್ನಿಯಲ್ಲಿರುವ ಕಲ್ಲುಗಳನ್ನು ಪುಡಿ ಮಾಡಿ ಹೊರ ತೆಗೆಯಲಾಗುತ್ತದೆ ಎಂದು ಮೈಸೂರು ಘಟಕದ ಮುಖ್ಯಸ್ಥರಾದ ಡಾ. ನರೇಂದ್ರ ಜೆ.ಬಿ. ಅವರು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗ್ತಾ ಇಲ್ಲ ಅಂತಾ ರೋಗಿಗಳು ಒಂದು ಕಡೆ ಪರದಾಡುತ್ತಿದ್ದರೆ, ಮತ್ತೊಂದು ಕಡೆ ನೂತನ ಚಿಕಿತ್ಸಾ ವಿಧಾನದ ಮೂಲಕ ನೆಫ್ರೋಯುರಾಲಜಿ ಕೇಂದ್ರ ಸುಧಾರಣೆಯತ್ತ ಹೆಜ್ಜೆ ಹಾಕುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಆರೋಗ್ಯ ಕ್ಷೇತ್ರದ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

 

Published On - 4:45 pm, Sat, 22 July 23

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us