AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವು ಆರೋಪ! ಮೈಸೂರಿನಲ್ಲಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ

ಯುವಕನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸೇಂಟ್ ಮೇರಿಸ್ ಆಸ್ಪತ್ರೆಗೆ ನುಗ್ಗಿ ಮೃತನ ಸ್ನೇಹಿತರು ಕಲ್ಲು ತೂರಾಟ ಮಾಡಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವು ಆರೋಪ! ಮೈಸೂರಿನಲ್ಲಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ
ಮೃತ ಯುವಕ ಇಮಾನ್ ವಿಲ್, ಪ್ರತಿಭಟನೆ ನಡೆಸುತ್ತಿರುವ ಸ್ನೇಹಿತರು
TV9 Web
| Updated By: sandhya thejappa|

Updated on:Jun 22, 2022 | 10:03 AM

Share

ಮೈಸೂರು: ವೈದ್ಯರ (Doctor) ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮೃತನ ಸ್ನೇಹಿತರು (Friends) ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಯುವಕ ಇಮಾನ್ ವಿಲ್ ಕರುಳು ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ. ಶಸ್ತ್ರಚಿಕಿತ್ಸೆ ವೇಳೆ ಬಿಪಿ ಲೋ ಆಗಿ ಇಮಾನ್​ಗೆ ಹೃದಯಾಘಾತವಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಸಾಗಿಸುವಾಗ ಯುವಕ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

ಯುವಕನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸೇಂಟ್ ಮೇರಿಸ್ ಆಸ್ಪತ್ರೆಗೆ ನುಗ್ಗಿ ಮೃತನ ಸ್ನೇಹಿತರು ಕಲ್ಲು ತೂರಾಟ ಮಾಡಿದ್ದಾರೆ. ಯುವಕರು ದಾಂಧಲೆ ನಡೆಸುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ: ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ತಲಕಾಡು ಹೊರವಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಸಿದ್ದರಾಜು ಹಾಗೂ ಸುಮಿತ್ರಾ ಎಂಬುವರ ಶವ ಪತ್ತೆಯಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
7 ವರ್ಷದ ಮಗನಿಗೆ ಮೆದುಳು ಜ್ವರ! ದಿಕ್ಕು ತೋಚದೆ ತನ್ನ ಮಗನನ್ನು ದೇವರ ಮುಂದೆ ಮಲಗಿಸಿ ಕಣ್ಣೀರಾಕಿದ ತಾಯಿ
Image
Presidential Elections 2022: ರಾಷ್ಟ್ರಪತಿ ಚುನಾವಣೆ; ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಜೂ. 27ಕ್ಕೆ ನಾಮಪತ್ರ ಸಲ್ಲಿಕೆ
Image
Draupadi Murmu: ಒಡಿಶಾದ ದೇಗುಲದಲ್ಲಿ ಕಸ ಗುಡಿಸಿ, ಪೂಜೆ ಸಲ್ಲಿಸಿದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
Image
ಕೇವಲ 50ರೂ.ಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕುವಿನಿಂದ ಇರಿದು ಎಸ್ಕೇಪ್

ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಹೊಸ ಅಂತಾರಾಷ್ಟ್ರೀಯ ಮಾರ್ಗಗಳು ಆರಂಭ

ಮೀನುಗಳು ಮಾರಣಹೋಮ: ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಬಿ.ಆರ್. ಗುಂಡ ಗ್ರಾಮದಲ್ಲಿ ಮೀನುಗಳು ಸಾವನ್ನಪ್ಪಿವೆ. ದುರ್ಗಪ್ಪ ಎಂಬುವವರು ಗ್ರಾಮದ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಿದ್ದರು. ಇಂದು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ಮೀನುಗಳನ್ನು ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಸತ್ತಿರುವ ರಾಶಿ ರಾಶಿ ಮೀನುಗಳು ಕೆರೆ ದಡದಲ್ಲಿ ಬಿದ್ದಿವೆ.

ರೈಲಿಗೆ ಸಿಲುಕಿ ವ್ಯಕ್ತಿ ಸಾವು: ತುಮಕೂರು: ರೈಲಿಗೆ ಸಿಲುಕಿ ಸುಮಾರು 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕ್ಯಾತ್ಸಂದ್ರ ರೈಲ್ವೆ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:33 am, Wed, 22 June 22

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ