AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ: ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ

ಸದಾ ಪಾಕಿಸ್ತಾನದ ಪರ ಮಾತನಾಡುವ ನಟ ಚೇತನ್ ನಮ್ಮ ದೇಶದಲ್ಲಿ ಇರಲು ಅರ್ಹನಲ್ಲ ಆತನನ್ನು ಗಡಿಪಾರು ಮಾಡಬೇಕೆಂದು ‘ಪೇ ಚೇತನ್' ಹೆಸರಿನಲ್ಲಿ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ ಮಾಡುತ್ತಿದ್ದಾರೆ.

ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ: ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ
ಮೈಸೂರು
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 21, 2022 | 11:19 AM

Share

ಮೈಸೂರು: ಕೆಲ ದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್​ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್ ಅಹಿಂಸಾ ಪೋಸ್ಟ್​ ಹಾಕಿದ್ದರು. ಇದರ ವಿರುದ್ದ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ, ಅಗ್ರಹಾರದ ಪ್ರಮುಖ‌ ರಸ್ತೆ ಅಂಗಡಿಗೆ ತೆರಳಿ ಪೇ ಚೇತನ್ ಪೋಟೋ ಹಿಡಿದು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ಚೇತನ್ ನಮ್ಮ ದೇಶದಲ್ಲಿ ಇರಲು ಯೋಗ್ಯನಲ್ಲ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎನ್ನುವ ಅಭಿಯಾನವನ್ನು ಶುರು ಮಾಡಿದ್ದಾರೆ.

ನಟ ಚೇತನ್ ಅಹಿಂಸಾ ತಮ್ಮ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕಾಂತಾರ ಸಿನಿಮಾದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಇದೀಗ 5 ದಿನಗಳ ಹಿಂದೆ(ನ.17) ಬೆಂಗಳೂರಿನ ನ್ಯೂ ಹೊರೈಜನ್​ ಕಾಲೇಜಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದರು ಅವರನ್ನು ಬೆಂಬಲಿಸುವ ಮೂಲಕ ಮತ್ತೆ ವಿವಾದವನ್ನು ತಮ್ಮ ಮೇಲೆ ಎಳೆದುಕೊಂಡಿದ್ದಾರೆ.

ಚೇತನ್​ ಅಹಿಂಸಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ‘ಕಾಲೇಜ್​ ಫೆಸ್ಟ್​ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್​ ಜಿಂದಾಬಾದ್​ ಘೋಷಣೆ ಕೂಗಿದ್ದಾರೆ. ಇದನ್ನು ಅವರು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕೆ ಆರ್ಯನ್​, ರಿಯಾ ಮತ್ತು ದಿನಕರ್​ ಅವರನ್ನು ಥಳಿಸಿ ಬೆದರಸಿ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಮಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರಂತೆ ಅವರು ನಮ್ಮ ಶತ್ರುಗಳಲ್ಲ. ವಾಕ್​ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು’ ಎಂದು ಬರೆದುಕೊಳ್ಳುವ ಮೂಲಕ ಸಾಕಷ್ಟು ಟೀಕೆಗಳಿಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ:Kantara: ‘ನೋ ಕಮೆಂಟ್ಸ್​ ಅಂತ ರಿಷಬ್​ ಎಸ್ಕೇಪ್​ ಆಗಬಾರದು’; ಭೂತಕೋಲ ಚರ್ಚೆ ಬಗ್ಗೆ ಚೇತನ್​ ಪ್ರತಿಕ್ರಿಯೆ

ಇನ್ನು ವಿದ್ಯಾರ್ಥಿಗಳ ವಿರುದ್ಧ ಮಾರತ್​ಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ತನಿಖೆ ನಡೆಸಿದ್ದಾರೆ.

ಇನ್ನಷ್ಟು ರಾಜ್ಯ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!