ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಆಗ್ತಾರಾ ನಿಖಿಲ್ ಕುಮಾರಸ್ವಾಮಿ? ಜಿಡಿ ಹರೀಶ್ ಗೌಡ ಅಚ್ಚರಿ ಹೇಳಿಕೆ

ಹೆಚ್‌ಡಿಕೆ ಕೇಂದ್ರ ಸಚಿವರಾಗಿರುವ ಕಾರಣ ವಾರದಲ್ಲಿ ನಾಲ್ಕು ದಿನ ದೆಹಲಿಯಲ್ಲಿದ್ದು, ಎಲ್ಲಾ ರಾಜ್ಯಗಳಿಗೆ ಹೋಗಬೇಕು. ಹೀಗಾಗಿ ವಾರದಲ್ಲಿ 1 ದಿನ ಕರ್ನಾಟಕಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ಯಾರಿಗೆ ಎಂಬ ಪ್ರಶ್ನೆ ಉದ್ಭವವಾಗಿತ್ತು. ಇದೀಗ ನಿಖಿಲ್ ಕುಮಾರಸ್ವಾಮಿ ಪಕ್ಷವನ್ನ ರಾಜ್ಯದಲ್ಲಿ ಕಟ್ಟುತ್ತಾರೆ ಎಂದು ಶಾಸಕ ಜಿಡಿ ಹರೀಶ್ ಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಆಗ್ತಾರಾ ನಿಖಿಲ್ ಕುಮಾರಸ್ವಾಮಿ? ಜಿಡಿ ಹರೀಶ್ ಗೌಡ ಅಚ್ಚರಿ ಹೇಳಿಕೆ
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಆಗ್ತಾರಾ ನಿಖಿಲ್ ಕುಮಾರಸ್ವಾಮಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 27, 2024 | 8:51 PM

ಮೈಸೂರು, ಜು.27: ಇತ್ತೀಚೆಗಷ್ಟೆ ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ(H. D. Kumaraswamy) ಅವರು ನೇತೃತ್ವದಲ್ಲಿ ಸಭೆ ನಡೆಸಿ, ಪಕ್ಷವನ್ನ ಬಲಪಡಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪಕ್ಷದ ನಾಯಕರುಗಳು ಚರ್ಚಿಸಿದ್ದರು. ಅದರಲ್ಲೂ ಕುಮಾರಸ್ವಾಮಿ ಅವರು ಸಚಿವರಾಗಿದ್ದರಿಂದ ಪಕ್ಷ ಸಂಘಟನೆ ಕಡೆ ಗಮನಹರಿಸುವುದು ಸಾಧ್ಯವಿಲ್ಲ. ಹೀಗಾಗಿ ಆ ಜವಾಬ್ದಾರಿ ಹೊರಲು ಸಮರ್ಥ ನಾಯಕರ ಹೆಸರುಗಳಲ್ಲಿ ನಿಖಿಲ್​ ಅವರ ಹೆಸರು ಕೂಡ ಕೇಳಿಬಂದಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಶಾಸಕ ಜಿಡಿ ಹರೀಶ್ ಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಇಂದು(ಶನಿವಾರ)  ಮೈಸೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಜಿ.ಡಿ ಹರೀಶ್ ಗೌಡ, ‘ ಹೆಚ್‌ಡಿಕೆ ಕೇಂದ್ರ ಸಚಿವರಾಗಿರುವ ಕಾರಣ ವಾರದಲ್ಲಿ ನಾಲ್ಕು ದಿನ ದೆಹಲಿಯಲ್ಲಿದ್ದು, ಎಲ್ಲಾ ರಾಜ್ಯಗಳಿಗೆ ಹೋಗಬೇಕು. ಹೀಗಾಗಿ ವಾರದಲ್ಲಿ 1 ದಿನ ಕರ್ನಾಟಕಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ಯಾರಿಗೆ ಎಂಬ ಪ್ರಶ್ನೆ ಉದ್ಭವವಾಗಿತ್ತು. ಹೆಚ್‌.ಡಿ.ಕುಮಾರಸ್ವಾಮಿ ಅವರು ನಮ್ಮೆಲ್ಲರ ಜತೆ ಚರ್ಚೆ ನಡೆಸಿದ್ದಾರೆ. ಇದರಿಂದ ನಿಖಿಲ್ ಕುಮಾರಸ್ವಾಮಿ ಪಕ್ಷವನ್ನ ರಾಜ್ಯದಲ್ಲಿ ಕಟ್ಟುತ್ತಾರೆ.  ಪಕ್ಷದ ನಾಯಕತ್ವದ ಬಗ್ಗೆ ಮಾತನಾಡುತ್ತಿದಂತೆ ಮಾಹಿತಿ ಬಹಿರಂಗಪಡಿಸದಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಹರೀಶ್ ಗೌಡ ಸೂಚನೆ ನೀಡಿದರು.

ಇದನ್ನೂ ಓದಿ:ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ, ಭಜನೆ!

ನಿಖಿಲ್ ರಾಜ್ಯದಲ್ಲಿ ಉತ್ತಮವಾಗಿ ಪಕ್ಷ ಸಂಘಟನೆ ಮಾಡುತ್ತಾರೆ

ಮತ್ತೆ ಮಾತು ಮುಂದುವರೆಸಿದ ಶಾಸಕ ಹರೀಶ್ ಗೌಡ, ‘ಎಲ್ಲವೂ ತೀರ್ಮಾನ ಆಗಿದೆ ಬಿಡಣ್ಣ ಎಂದು ಸುರೇಶ್ ಬಾಬುಗೆ ಉತ್ತರಿಸಿದರು. ‘ಯಾವುದೇ ಹುದ್ದೆ ಪಡೆಯದೆ ಪಕ್ಷ ಕಟ್ಟುತ್ತೇನೆಂದು ನಿಖಿಲ್ ಹೇಳಿದ್ದಾರೆ. ಈಗಾಗಲೇ ಸಿನಿಮಾದಲ್ಲಿ ನಟಿಸಲ್ಲ ಎಂದು ಕೂಡ ಘೋಷಿಸಿದ್ದಾರೆ. ನಿಖಿಲ್ ರಾಜ್ಯದಲ್ಲಿ ಉತ್ತಮವಾಗಿ ಪಕ್ಷ ಸಂಘಟನೆ ಮಾಡುತ್ತಾರೆ ಎಂದು ಪರೋಕ್ಷವಾಗಿ ಅವರೇ ಮುಂದಿನ ಜೆಡಿಎಸ್​ ರಾಜ್ಯಾಧ್ಯಕ್ಷ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್