AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ಸಿದ್ಧ; ಜಿಲ್ಲೆಯಲ್ಲಿ ಹಲವೆಡೆ ವಾಹನ ಸಂಚಾರ ಬದಲಾವಣೆ

ಮೈಸೂರಿನ ನವರತ್ನ ಜ್ಯುವೆಲರ್ಸ್ ವತಿಯಿಂದ ಬಂಗಾರದ ಅಕ್ಷರಗಳನ್ನ ಕೆತ್ತನೆ ಮಾಡಲಾಗಿರುವ ಉಡುಗೊರೆಯನ್ನು ಜೂನ್ 21ಕ್ಕೆ ಪ್ರಧಾನಿಗೆ ನೆನಪಿನ ಕಾಣಿಕೆಯಾಗಿ ಕೊಡಲಾಗುತ್ತದೆ.

ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ಸಿದ್ಧ; ಜಿಲ್ಲೆಯಲ್ಲಿ ಹಲವೆಡೆ ವಾಹನ ಸಂಚಾರ ಬದಲಾವಣೆ
ಯೋಗ ಪಟುಗಳಿಂದ ರಿಹರ್ಸಲ್ ನಡೆಯಿತು
TV9 Web
| Edited By: |

Updated on:Jun 19, 2022 | 12:33 PM

Share

ಮೈಸೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ದೇಶದ ಪ್ರಧಾನಿ ನಾಳೆ (ಜೂನ್ 20) ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಭದ್ರತೆಗೆ ಸಂಬಂಧಿಸಿದ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಹೋಟೆಲ್, ಊಟ, ತಿಂಡಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನು ಜಿಲ್ಲೆಗೆ ಆಗಮಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೋದಿಗೆ ವಿಶೇಷ ಉಡುಗೊರೆ ನೀಡಲು ಉಡುಗೊರೆ ರೆಡಿಯಾಗಿದ್ದು, ಸಂಸದ ಪ್ರತಾಪ್ ಸಿಂಹ ಮೂಲಕ ಉಡುಗೊರೆಯನ್ನು ಮೋದಿಗೆ ನೀಡಲಾಗುತ್ತದೆ. ಮೈಸೂರಿನ ನವರತ್ನ ಜ್ಯುವೆಲರ್ಸ್ ವತಿಯಿಂದ ಬಂಗಾರದ ಅಕ್ಷರಗಳನ್ನ ಕೆತ್ತನೆ ಮಾಡಲಾಗಿರುವ ಉಡುಗೊರೆಯನ್ನು ಜೂನ್ 21ಕ್ಕೆ ಪ್ರಧಾನಿಗೆ ನೆನಪಿನ ಕಾಣಿಕೆಯಾಗಿ ಕೊಡಲಾಗುತ್ತದೆ.

ಮೈಸೂರು ಅರಮನೆ, ಮೋದಿ ಯೋಗದ ಭಂಗಿ ಹಾಗೂ ಮೋದಿ ಅವರ ಭಾವಚಿತ್ರಗಳನ್ನೊಳಗೊಂಡ ಬಂಗಾರ ಲೇಪಿತ ಕೆತ್ತನೆಯ ಚಿತ್ರಪಟದಲ್ಲಿ ಯೋಗದ ಶ್ಲೋಕಗಳನ್ನ ಅಳವಡಿಕೆ ಮಾಡಲಾಗಿದೆ. ಮೈಸೂರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಮೋದಿಗೆ ಚಿನ್ನದ ಅಕ್ಷರಗಳಲ್ಲಿ ಕೃತಜ್ಞತೆ ಸಲ್ಲಿಸಲಾಗುತ್ತದೆ. ಮೋದಿಗಾಗಿ ಈ ನೆನಪಿನ ಕಾಣಿಕೆಯನ್ನು ಥೈಲ್ಯಾಂಡ್​ನಲ್ಲಿ ಮಾಡಿಸಿದ್ದಾರೆ.

ಮೋದಿ ಜತೆ ಭಾಗಿಯಾಗುವ ರಾಜಮಾತೆ ಪ್ರಮೋದಾ ದೇವಿ: ಪ್ರಧಾನಿ ಜೊತೆ ರಾಜಮಾತೆ ಪ್ರಮೋದಾ ದೇವಿ ವೇದಿಕೆ ಹಂಚಿಕೊಳ್ಳುತ್ತಾರೆ. ಯೋಗ ಶಿಬಿರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಆಯುಷ್ ಮಂತ್ರಿ ಭಾಗಿಯಾಗಲು ಅವಕಾಶವಿದೆ.

ಇದನ್ನೂ ಓದಿ
Image
ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
Sarkaru Vaari Paata Review: ಒಂದೊಳ್ಳೆಯ ಕಥೆಗೆ ಬೇಕಿತ್ತು ಇನ್ನಷ್ಟು ಒಳ್ಳೆಯ ಟ್ರೀಟ್​ಮೆಂಟ್
Image
ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಇದನ್ನೂ ಓದಿ: ಹಳ್ಳದಲ್ಲಿ ಸಿಲುಕಿದ ಕೆಎಸ್​ಆರ್​ಟಿಸಿ ಬಸ್: 22 ಪ್ರಯಾಣಿಕರನ್ನು ರಕ್ಷಿಸಿದ ರೋಚಕ ಕಾರ್ಯಚರಣೆ ಹೇಗಿತ್ತು ಗೊತ್ತಾ? ​

ವಾಹನ ಸಂಚಾರ ಬದಲಾವಣೆ: ಜಿಲ್ಲೆಯಲ್ಲಿ ಹಲವೆಡೆ ವಾಹನ ಸಂಚಾರ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟ ಹೊಡಿಸಿದೆ. ಬಸ್​​, ನಾಲ್ಕು ಚಕ್ರ, ದ್ವಿಚಕ್ರ ವಾಹನಗಳ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಬೆಂಗಳೂರಿನಿಂದ ಬರುವ ಬಸ್​​ಗಳು ಜೆ.ಕೆ.ಮೈದಾನದಲ್ಲಿ, ಹುಣಸೂರು, ಹಾಸನ ಮಾರ್ಗವಾಗಿ ಬರುವ ಬಸ್​ಗಳಿಗೆ ವಿಲೇಜ್ ಹಾಸ್ಟೆಲ್​​​​ ಮೈದಾನದ ಬಳಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಪಿರಿಯಾಪಟ್ಟಣ, ಕೆ.ಆರ್​.ನಗರ ಮಾರ್ಗದ ಬಸ್​ಗಳಿಗೆ  ಮೈಸೂರು ವಿವಿಯ ಪಾರ್ಕಿಂಗ್ ಸ್ಥಳದಲ್ಲಿ, ನಂಜನಗೂಡು, ಚಾಮರಾಜನಗರ ಮಾರ್ಗದ ಬಸ್​ಗಳಿಗೆ ಎನ್​ಎಸ್​ಎಸ್​ ಕಚೇರಿ, ಸೊಮಾನಿ ಬಿಎಡ್​ ಕಾಲೇಜ್​ ಮೈದಾನದಲ್ಲಿ, ಹೆಚ್​.ಡಿ.ಕೋಟೆ ಕಡೆಯಿಂದ ಬರುವ ಬಸ್​ಗಳಿಗೆ ಮಹಾಬೋಧಿ ಹಾಸ್ಟೆಲ್​ ಮೈದಾನದಲ್ಲಿ, ಟಿ.ನರಸೀಪುರ ಕಡೆಯಿಂದ ಬರುವ ಬಸ್​​ಗೆ ಸ್ಕೌಟ್​ ಮತ್ತು ಗೈಡ್ಸ್​​​​ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

ಮೋದಿಗಾಗಿ ಸಿದ್ಧವಾಗಿದೆ ವಿಶೇಷ ಸ್ಟೇಜ್: ಪ್ರಧಾನಿ ನರೇಂದ್ರ ಮೋದಿಗೆ ಜಿಲ್ಲೆಯಲ್ಲಿ ವಿಶೇಷ ವೇದಿಕೆ ಸಿದ್ಧವಾಗಿದೆ. ಜೊತೆಗೆ ನಮೋ ಯೋಗ ಮಾಡುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದೆ. ಮೈಸೂರು ಪ್ಯಾಲೇಸ್​ನ ಎದುರು ಮುಖ ಮಾಡಿ ಸ್ಟೇಜ್ ರೆಡಿಯಾಗಿದೆ. ಯೋಗ ಪಟುಗಳಿಗಾಗಿ 12 ಬ್ಯಾರೆಕ್​ಗಳು ಸಿದ್ಧವಾಗಿದೆ. ಪ್ರತಿ ಬ್ಯಾರೆಕ್​ನಲ್ಲಿ 100 ಮಂದಿ ಯೋಗ ಪಟುಗಳು ಯೋಗಭ್ಯಾಸ ಮಾಡುತ್ತಾರೆ. ಜಿಲ್ಲಾಡಳಿತ ಪ್ರತಿಯೊಬ್ಬ ಯೋಗ ಪಟುಗಳಿಗೆ ಗುರುತಿನ ಚೀಟಿ ನೀಡಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:47 am, Sun, 19 June 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ