AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundeshwari Temple: ತಾಯಿ ಚಾಮುಂಡೇಶ್ವರಿ ವರ್ಧಂತಿ, ಮೈಸೂರಿನಲ್ಲಿ ಮನೆ ಮಾಡಿದ ಸಂಭ್ರಮ

ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ.

Chamundeshwari Temple: ತಾಯಿ ಚಾಮುಂಡೇಶ್ವರಿ ವರ್ಧಂತಿ, ಮೈಸೂರಿನಲ್ಲಿ ಮನೆ ಮಾಡಿದ ಸಂಭ್ರಮ
ತಾಯಿ ಚಾಮುಂಡೇಶ್ವರಿ
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on: Jul 10, 2023 | 7:40 AM

Share

ಮೈಸೂರು: ಇಂದು (ಜುಲೈ 10) ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ(Mysore Chamundeshwari Vardhanti) ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಖುದ್ದು ರಾಜವಂಶಸ್ಥರೇ(Mysore Royal Family), ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗ್ತಾ ಇರೋದು ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ.

ಈಗಾಗಲೇ ಆಷಾಢಮಾಸದ ಸಂಭ್ರಮ ಸಡಗರ ಚಾಮುಂಡಿಬೆಟ್ಟದಲ್ಲಿ ಜೋರಾಗಿದೆ. ಇದೀಗ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ. ಯದುವಂಶದ ಪ್ರಮೋದ ದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಕುಮಾರಿ, ಪುತ್ರ ಆದ್ಯವೀರ ಸೇರಿ ಲಕ್ಷಾಂತರ ಜನರು ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Sara Annaiah: ಮೈಸೂರು ಚಾಮುಂಡಿ ದೇವಿಯ ದರ್ಶನ ಪಡೆದ ಕನ್ನಡತಿ

ಬೆಳಗ್ಗೆ 8ಗಂಟೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ

ವರ್ಧಂತಿ ಹಿನ್ನಲೆ ಬೆಳಗ್ಗೆ 3:30ರಿಂದಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಸೇರಿ ಹಲವು ಸೇವೆಗಳನ್ನು ನೆರವೇರಿಸಲಾಗುತ್ತಿದೆ. ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ ಸೇವೆ ನಡೆಯಲಿದೆ. ಈ ಕಾರಣಕ್ಕೆ ಬೆಳಗ್ಗೆ 8 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಭಕ್ತರಿಗೆ ಬೆಳಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಇಒ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತಮಹಲ್ ಮೈದಾನದಿಂದ 9 ಗಂಟೆಯಿಂದ ಬಸ್ ಸೇವೆ ಇರಲಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು