AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ದೇವಿಯ ಆಷಾಢ ಮಾಸದ ವಿಶೇಷ ಪೂಜೆಗೆ ಬರುವ ಭಕ್ತರಿಗೆ ಕೊರೊನಾ 2ನೇ ಡೋಸ್​​, ನೆಗೆಟಿವ್ ವರದಿ ಕಡ್ಡಾಯ

ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ 2ನೇ ಡೋಸ್​​ ಪಡೆದಿರುವ ಜೊತೆಗೆ ನೆಗೆಟಿವ್ ವರದಿಯ ಪ್ರತಿ ಕಡ್ಡಾಯ ತರಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದಾರೆ.

ಚಾಮುಂಡೇಶ್ವರಿ ದೇವಿಯ ಆಷಾಢ ಮಾಸದ ವಿಶೇಷ ಪೂಜೆಗೆ ಬರುವ ಭಕ್ತರಿಗೆ ಕೊರೊನಾ 2ನೇ ಡೋಸ್​​, ನೆಗೆಟಿವ್ ವರದಿ ಕಡ್ಡಾಯ
ಚಾಮುಂಡೇಶ್ವರಿ ದೇವಿ ದೇವಸ್ಥಾನ
TV9 Web
| Updated By: ವಿವೇಕ ಬಿರಾದಾರ|

Updated on: Jun 22, 2022 | 3:03 PM

Share

ಮೈಸೂರು: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ (Chamundeshwari) ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆ (Worship) ನೆರವೇರಲಿದ್ದು, ಈ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ (Covid 19) 2ನೇ ಡೋಸ್​ (2d Dose vaccine)​ ಪಡೆದಿರುವ ಜೊತೆಗೆ ನೆಗೆಟಿವ್  (negative) ವರದಿಯ ಪ್ರತಿ ಕಡ್ಡಾಯ ತರಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದಾರೆ. ಪ್ರತಿ ವರ್ಷ ಆಷಾಢ ಮಾಸದ(Ashada Masa) ಶುಕ್ರವಾರ ಚಾಮುಂಡಿಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಈ ಪೂಜೆಯನ್ನು ಕಣ್ಣತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಬಂದು ತಾಯಿಯ ದರ್ಶನ ಪಡೆಯುತ್ತಾರೆ.

ಇದನ್ನು ಓದಿ: ಜಿ7 ಶೃಂಗಸಭೆಗಾಗಿ ಜೂನ್ 26-27 ರಂದು ಜರ್ಮನಿಗೆ, 28ರಂದು ಯುಎಇಗೆ ಭೇಟಿ ನೀಡಲಿದ್ದಾರೆ ಮೋದಿ

ಆದರೆ ಕಳೆದ 2 ವರ್ಷಗಳಿಂದ ಕೊರೊನಾ ಕಾರಣದಿಂದ ಆಷಾಢ ಮಾಸದ ವಿಶೇಷ ಪೂಜೆಗೆ ಭಕ್ತರಿಲ್ಲದೆ ದೇವಸ್ಥಾನ ಬಣಗುಡುತ್ತಿತ್ತು. ಕೊರೊನಾ ಸಮಯದಲ್ಲಿ ಮುಂಚಾನೆ 5 ಗಂಟೆಗೆ ಪೂಜೆ ಪ್ರಾರಂಭಿಸಿ 8 ಗಂಟೆಯಷ್ಟರ ಹೊತ್ತಿಗೆ ಪೂಜಾ ಕೈಂಕರ್ಯಗಳು ಮುಕ್ತಾಯಗೊಳ್ಳುತ್ತಿದ್ದವು. 8 ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತಿತ್ತು. ಕೊರೊನಾ ಕಾರಣದಿಂದ ಭಕ್ತಿರಿಗೆ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದ್ದರು. ಆದರೆ ಈ ವರ್ಷ ಕೆಲವು ಸಡಿಲಿಕೆಯನ್ನು ನೀಡಿದ್ದು, ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ 2ಡೋಸ್​ ಲಸಿಕೆ ಪಡೆದಿರಬೇಕು ಮತ್ತು ಕೊರೊನಾ ನೆಗಟಿವ್​​​​ ವರದಿ ತಂದಿರಬೇಕು.

ಇದನ್ನು ಓದಿ:  ಕಾಲ್​ ಕನ್ವರ್ಟ್ ಅಡ್ಡೆಗಳ ಮೇಲೆ ಸಿಸಿಬಿ ದಾಳಿ: ಕೇರಳ ಮೂಲದ ವ್ಯಕ್ತಿಯ ಬಂಧನ

ಪ್ರತಿ ವರ್ಷ ಆಷಾಢ ಶುಕ್ರವಾರಗಳಂದು ಮಾತ್ರವಲ್ಲದೆ, ಪ್ರತಿ ದಿನವೂ ಸಾವಿರಾರು ಮಂದಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯುತ್ತಾರೆ. ಮುಂಜಾನೆಯೇ ಅಲಂಕಾರದಿಂದ ಕಂಗೊಳಿಸುವ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ತಮ್ಮ ಹರಕೆ ಸಮರ್ಪಿಸಿ ಭಕ್ತಿಭಾವ ಮೆರೆಯುತ್ತಾರೆ. ಈ ಸಂದರ್ಭದಲ್ಲಿ ಬೆಟ್ಟದಲ್ಲಿ ಜಾತ್ರೆಯ ವಾತಾವರಣ ನಿರ್ಮಾಣವಾಗುತ್ತೆ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ