AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ದೇವಿಯ ಆಷಾಢ ಮಾಸದ ವಿಶೇಷ ಪೂಜೆಗೆ ಬರುವ ಭಕ್ತರಿಗೆ ಕೊರೊನಾ 2ನೇ ಡೋಸ್​​, ನೆಗೆಟಿವ್ ವರದಿ ಕಡ್ಡಾಯ

ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ 2ನೇ ಡೋಸ್​​ ಪಡೆದಿರುವ ಜೊತೆಗೆ ನೆಗೆಟಿವ್ ವರದಿಯ ಪ್ರತಿ ಕಡ್ಡಾಯ ತರಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದಾರೆ.

ಚಾಮುಂಡೇಶ್ವರಿ ದೇವಿಯ ಆಷಾಢ ಮಾಸದ ವಿಶೇಷ ಪೂಜೆಗೆ ಬರುವ ಭಕ್ತರಿಗೆ ಕೊರೊನಾ 2ನೇ ಡೋಸ್​​, ನೆಗೆಟಿವ್ ವರದಿ ಕಡ್ಡಾಯ
ಚಾಮುಂಡೇಶ್ವರಿ ದೇವಿ ದೇವಸ್ಥಾನ
TV9 Web
| Edited By: ವಿವೇಕ ಬಿರಾದಾರ|

Updated on: Jun 22, 2022 | 3:03 PM

Share

ಮೈಸೂರು: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ (Chamundeshwari) ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆ (Worship) ನೆರವೇರಲಿದ್ದು, ಈ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ (Covid 19) 2ನೇ ಡೋಸ್​ (2d Dose vaccine)​ ಪಡೆದಿರುವ ಜೊತೆಗೆ ನೆಗೆಟಿವ್  (negative) ವರದಿಯ ಪ್ರತಿ ಕಡ್ಡಾಯ ತರಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದಾರೆ. ಪ್ರತಿ ವರ್ಷ ಆಷಾಢ ಮಾಸದ(Ashada Masa) ಶುಕ್ರವಾರ ಚಾಮುಂಡಿಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಈ ಪೂಜೆಯನ್ನು ಕಣ್ಣತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಬಂದು ತಾಯಿಯ ದರ್ಶನ ಪಡೆಯುತ್ತಾರೆ.

ಇದನ್ನು ಓದಿ: ಜಿ7 ಶೃಂಗಸಭೆಗಾಗಿ ಜೂನ್ 26-27 ರಂದು ಜರ್ಮನಿಗೆ, 28ರಂದು ಯುಎಇಗೆ ಭೇಟಿ ನೀಡಲಿದ್ದಾರೆ ಮೋದಿ

ಆದರೆ ಕಳೆದ 2 ವರ್ಷಗಳಿಂದ ಕೊರೊನಾ ಕಾರಣದಿಂದ ಆಷಾಢ ಮಾಸದ ವಿಶೇಷ ಪೂಜೆಗೆ ಭಕ್ತರಿಲ್ಲದೆ ದೇವಸ್ಥಾನ ಬಣಗುಡುತ್ತಿತ್ತು. ಕೊರೊನಾ ಸಮಯದಲ್ಲಿ ಮುಂಚಾನೆ 5 ಗಂಟೆಗೆ ಪೂಜೆ ಪ್ರಾರಂಭಿಸಿ 8 ಗಂಟೆಯಷ್ಟರ ಹೊತ್ತಿಗೆ ಪೂಜಾ ಕೈಂಕರ್ಯಗಳು ಮುಕ್ತಾಯಗೊಳ್ಳುತ್ತಿದ್ದವು. 8 ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತಿತ್ತು. ಕೊರೊನಾ ಕಾರಣದಿಂದ ಭಕ್ತಿರಿಗೆ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದ್ದರು. ಆದರೆ ಈ ವರ್ಷ ಕೆಲವು ಸಡಿಲಿಕೆಯನ್ನು ನೀಡಿದ್ದು, ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ 2ಡೋಸ್​ ಲಸಿಕೆ ಪಡೆದಿರಬೇಕು ಮತ್ತು ಕೊರೊನಾ ನೆಗಟಿವ್​​​​ ವರದಿ ತಂದಿರಬೇಕು.

ಇದನ್ನು ಓದಿ:  ಕಾಲ್​ ಕನ್ವರ್ಟ್ ಅಡ್ಡೆಗಳ ಮೇಲೆ ಸಿಸಿಬಿ ದಾಳಿ: ಕೇರಳ ಮೂಲದ ವ್ಯಕ್ತಿಯ ಬಂಧನ

ಪ್ರತಿ ವರ್ಷ ಆಷಾಢ ಶುಕ್ರವಾರಗಳಂದು ಮಾತ್ರವಲ್ಲದೆ, ಪ್ರತಿ ದಿನವೂ ಸಾವಿರಾರು ಮಂದಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯುತ್ತಾರೆ. ಮುಂಜಾನೆಯೇ ಅಲಂಕಾರದಿಂದ ಕಂಗೊಳಿಸುವ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ತಮ್ಮ ಹರಕೆ ಸಮರ್ಪಿಸಿ ಭಕ್ತಿಭಾವ ಮೆರೆಯುತ್ತಾರೆ. ಈ ಸಂದರ್ಭದಲ್ಲಿ ಬೆಟ್ಟದಲ್ಲಿ ಜಾತ್ರೆಯ ವಾತಾವರಣ ನಿರ್ಮಾಣವಾಗುತ್ತೆ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
TV9 Web
TV9 Web

TV9 Kannada

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ