AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿಯಿಂದ ಬಂದು ಮೈಸೂರು ಮೃಗಾಲಯದಲ್ಲಿ ಜನ್ಮದಿನ ಆಚರಿಸಿಕೊಂಡ ಗೊರಿಲ್ಲಾ ತಬೋ

ಮೈಸೂರು ಮೃಗಾಲಯದಲ್ಲಿರುವ ತಬೋ ಹೆಸರಿನ ಗೊರಿಲ್ಲಾದ ಜನ್ಮ ದಿನವನ್ನು ಮೃಗಾಲಯದ ಆಡಳಿತ ಮಂಡಳಿ ವಿಭಿನ್ನವಾಗಿ ಆಚರಿಸಿದ್ದಾರೆ.

ಜರ್ಮನಿಯಿಂದ ಬಂದು ಮೈಸೂರು ಮೃಗಾಲಯದಲ್ಲಿ ಜನ್ಮದಿನ ಆಚರಿಸಿಕೊಂಡ ಗೊರಿಲ್ಲಾ ತಬೋ
ಮೈಸೂರು ಮೃಗಾಲಯ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 26, 2022 | 3:00 PM

Share

ಮೈಸೂರು: ಗೊರಿಲ್ಲಾ ತಬೋ(Tabo)ಗೆ ಈಗ 15ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಒಂದು ವರ್ಷದ ಹಿಂದೆ ತಬೋವನ್ನು ಜರ್ಮನಿಯಿಂದ ಮೈಸೂರಿಗೆ ಕರೆ ತರಲಾಗಿತ್ತು. ತಬೋ ಬಂದ ದಿನದಿಂದಲೂ ಮೈಸೂರು ಮೃಗಾಲಯದ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾನೆ. ಇನ್ನು ಗೊರಿಲ್ಲಾ ತಬೋಗೆ ಪ್ರತಿ ವರ್ಷ ಜರ್ಮನಿಯಲ್ಲಿ ಹುಟ್ಟುಹಬ್ಬ ಆಚರಿಸಲಾಗುತಿತ್ತು. ಅದೇ ಸಂಪ್ರದಾಯವನ್ನು ಮೃಗಾಲಯದ ಆಡಳಿತ ಮಂಡಳಿಯಿಂದ ಮುಂದುವರಿಸಲಾಗಿದೆ. ವಿಭಿನ್ನವಾಗಿ ತಯಾರಿಸಿದ ಆಕರ್ಷಕವಾದ ಹಣ್ಣು ತರಕಾರಿಯ ಕೇಕ್​ನಲ್ಲಿ ಬಾದಾಮಿ‌, ಕರ್ಜೂರ, ದ್ರಾಕ್ಷಿ, ಗೋಡಂಬಿಗಳಿಂದ ಹ್ಯಾಪಿ ಬತ್​ಡೇ ಎಂದು ಬರೆಯಿಸಿದ್ದಾರೆ.

ತಬೋಗೆ ಇಷ್ಟವಾದ ಹಣ್ಣು ತರಕಾರಿಯಿಂದಲೇ ಕೇಕ್ ತಯಾರಿಸಿರುವುದು ವಿಶೇಷ.  ಪ್ರಾಣಿ ಪ್ರಿಯರ ಜೊತೆಗೆ ಖುದ್ದು ತಬೋಗೆ ಇದು ಖುಷಿ‌ ಕೊಟ್ಟಿದೆ. ಓಡುತ್ತಾ ಕುಣಿಯುತ್ತಾ ಬಂದ ತಬೋ ಹುಟ್ಟುಹಬ್ಬವನ್ನು ಎಂಜಾಯ್ ಮಾಡಿದ್ದಾನೆ. ಕೇವಲ ಹುಟ್ಟುಹಬ್ಬ ಮಾತ್ರವಲ್ಲ ತಬೋ ಆರೋಗ್ಯಕ್ಕಾಗಿ ಪ್ರಾರ್ಥನೆ ಸಹ ಮಾಡಲಾಗಿದೆ. ಒಟ್ಟಾರೆ ಮೈಸೂರು ಮೃಗಾಲಯದಲ್ಲಿ ತಬೋ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ವರದಿ: ರಾಮ್ ಟಿವಿ9 ಮೈಸೂರು

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು