AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವೀಧರರಿಗೆ ಸರ್ಕಾರ ಹಣದ ಬದಲು ಉದ್ಯೋಗ ನೀಡಲಿ: ವಾಟಾಳ್ ನಾಗರಾಜ್

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ನಿರುದ್ಯೋಗಿ ಪದವೀಧರರಿಗೆ ಮೂರು ಸಾವಿರ ರೂಪಾಯಿ ನೀಡುವ ಯುವನಿಧಿ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ರಾಜ್ಯ ಸರ್ಕಾರ ಪದವೀಧರರಿಗೆ ಹಣದ ಬದಲು ಉದ್ಯೋಗ ನೀಡಿಲಿ ಎಂದು ಒತ್ತಾಯಿಸಿದ್ದಾರೆ.

ಪದವೀಧರರಿಗೆ ಸರ್ಕಾರ ಹಣದ ಬದಲು ಉದ್ಯೋಗ ನೀಡಲಿ: ವಾಟಾಳ್ ನಾಗರಾಜ್
ಪದವೀಧರರಿಗೆ ಸರ್ಕಾರ ಹಣದ ಬದಲು ಉದ್ಯೋಗ ನೀಡಿಲಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ವಾಟಾಳ್ ನಾಗರಾಜ್
ರಾಮ್​, ಮೈಸೂರು
| Edited By: Rakesh Nayak Manchi|

Updated on: Jan 07, 2024 | 2:46 PM

Share

ಮೈಸೂರು, ಜ.7: ರಾಜ್ಯ ಸರ್ಕಾರ ಪದವೀಧರರಿಗೆ ಹಣದ ಬದಲು ಉದ್ಯೋಗ ನೀಡಿಲಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಒತ್ತಾಯಿಸಿದ್ದಾರೆ. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಮತ್ತು ಹಿಂದಿ ಹೇರಿಕೆ ವಿರೋಧಿಸಿ ಮೈಸೂರಿನ (Mysuru) ಜಯಚಾಮರಾಜೇಂದ್ರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಉದ್ಯೋಗದಲ್ಲಿ ಮೊದಲು ಕನ್ನಡಿಗರಿಗೆ ಆದ್ಯತೆ ನೀಡುವಂತೆ ಆಗ್ರಹಿಸಿದರು.

ಹೋಟೆಲ್​ನಲ್ಲಿ ಕಾಫಿ, ಟೀ, ತಿಂಡಿ, ದೋಸೆ ಬೆಲೆಯೇ 150 ರೂಪಾಯಿ ಆಗಿದೆ. ನೀವು ಕೊಡುವ ದುಡ್ಡಿನಲ್ಲಿ ಅವರು ಕಾಫಿ ಕುಡಿಯಲು ಯೋಚನೆ ಮಾಡಬೇಕಾಗುತ್ತದೆ. ಮೂರು ಸಾವಿರ, ಒಂದೂವರೆ ಸಾವಿರ ನೀಡುವ ಮೂಲಕ ಪದವೀಧರರಿಗೆ ಅಗೌರವ ತೋರಲಾಗುತ್ತಿದೆ. ವರ್ಷಕ್ಕೆ ಎಷ್ಟು ಜನ ಪದವೀಧರರಾಗುತ್ತಿದ್ದಾರೆ ಎಂಬ ಮಾಹಿತಿ ಇದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಇದನ್ನೂ ಓದಿ: ನಾಮಫಲಕಗಳಲ್ಲಿ ಶೇ 60% ಕನ್ನಡ ಕಡ್ಡಾಯಕ್ಕೆ ಸುಗ್ರಿವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

ಪದವೀಧರರ ಸಮಸ್ಯೆ ಆಲಿಸಲು ಓಬ್ಬ ಸಚಿವರನ್ನ ನೇಮಕ ಮಾಡಿ. ಉನ್ನತ ಶಿಕ್ಷಣ ಮಾಡಲು ಕನ್ನಡಿಗರಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್, ಮಠಾಧೀಶರ ಕಾಲೇಜುಗಳಲ್ಲಿ ಹೊರಗಿನ ರಾಜ್ಯದವರಿಗೆ ಸೀಟು ಕೊಟ್ಟಿದ್ದೀರಿ. ಮೊದಲು ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.

ಕನ್ನಡ ಬೋರ್ಡ್​​ಗಾಗಿ ಹೋರಾಟ ಮಾಡಬೇಕಾದ ಸ್ಥಿತಿ

ರಾಜ್ಯದಲ್ಲಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ವಿಚಾರವಾಗಿ ಮಾತನಾಡಿದ ವಾಟಾಳ್ ನಾಗರಾಜ್, ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧನ ಮಾಡಬಾರದಾಗಿತ್ತು. ಸರ್ಕಾರ ಬಂಧನ ಮಾಡಿದೆ, ಆದರೆ ಕೋರ್ಟ್​ ಬಿಡುಗಡೆ ಮಾಡುತ್ತಿದೆ. ಕನ್ನಡ ಬೋರ್ಡ್ ಹಾಕಿ ಅಂತಾ ಹೋರಾಟ ಮಾಡಬೇಕಾದ ಸ್ಥಿತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದರು. ಅಲ್ಲದೆ, ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!