AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನಲ್ಲಿ ದುರಂತ ಸಂಭವಿಸಿದೆ. ಕಾವೇರಿ ನದಿಯಲ್ಲಿ 70 ವರ್ಷದ ತಾತ ಮತ್ತು ಇಬ್ಬರು ಮೊಮ್ಮಕ್ಕಳು ಮುಳುಗಿ ಮೃತಪಟ್ಟಿದ್ದಾರೆ. ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಜಲಸಮಾಧಿಯಾಗಿದ್ದಾರೆ. ತಿರುಮಕೂಡಲಿನ ನಿವಾಸಿಗಳಾದ ಮೂವರ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ
ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ
ರಾಮ್​, ಮೈಸೂರು
| Edited By: |

Updated on:Mar 15, 2025 | 7:04 PM

Share

ಮೈಸೂರು, ಮಾರ್ಚ್​ 15: ಕಾವೇರಿ ನದಿಯಲ್ಲಿ ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ (death) ಆಗಿರುವಂತಹ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ. ಚೌಡಯ್ಯ(70), ಭರತ್(13) ಮತ್ತು ಧನುಷ್(10) ಮೃತರು. ನದಿ ನೀರಿನಲ್ಲಿ ಮುಳುಗುತ್ತಿದ್ದ (Drown)  ಮೊಮ್ಮಕ್ಕಳ ರಕ್ಷಣೆಗೆ ತಾತ ಚೌಡಯ್ಯ ಇಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ.

ಮೃತರನ್ನು ಟಿ. ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎಂದು ಗುರುತಿಸಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸರಣಿ ಅಪಘಾತ: ಚಿಕಿತ್ಸೆ ಫಲಿಸದೆ ಕ್ಯಾಂಟರ್​ ಚಾಲಕ ಸಾವು

ಬಾಪೂಜಿನಗರದ ಸ್ಯಾಟ​ಲೈಟ್​​ ಬಸ್ ನಿಲ್ದಾಣದ ಬಳಿ ಕ್ಯಾಂಟರ್​ ಚಾಲಕನಿಂದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡಿದ್ದ ಕ್ಯಾಂಟರ್​ ಚಾಲಕ ಜಗನ್​(44) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ
Image
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
Image
ಮ್ಯಾಚ್​​ ಗೆಲ್ಲಿಸಿದ್ದಕ್ಕೆ ಕೊಲೆ? ಯುವಕನ ಸಾವಿನ ಸುತ್ತ ಅನುಮಾನಗಳ ಹುತ್ತ!
Image
ಸಾಕ್ಷ್ಯ ನಾಶಕ್ಕೆ ಐಷರಾಮಿ ಕಾರು ಸುಟ್ಟ ಕಳ್ಳರು: ಗುಂಡಿಕ್ಕಿ ಹಿಡಿದ ಪೊಲೀಸ್
Image
ಸ್ವಾತಿ ಹತ್ಯೆ: ನಯಾಜ್​ ಕೃತ್ಯಕ್ಕೆ ಸಾಥ್ ಕೊಟ್ಟಿದ್ದ ಹಿಂದೂ ಯುವಕರ ಬಂಧನ

ಇದನ್ನೂ ಓದಿ: 4 ಎಸೆತಗಳಲ್ಲಿ 20 ರನ್ ಚಚ್ಚಿ ಮ್ಯಾಚ್​​ ಗೆಲ್ಲಿಸಿದ್ದಕ್ಕೆ ಕೊಲೆ? ಯುವಕ ಸಾವಿನ ಸುತ್ತ ಅನುಮಾನಗಳ ಹುತ್ತ!

ಕೆಎಸ್​ಆರ್​ಟಿಸಿ ಬಸ್​​, ಕಾರು, ಆಟೋ, ಬೈಕ್​ಗೆ ಡಿಕ್ಕಿ ಹೊಡೆದಿದ್ದ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯ ಆಗಿತ್ತು. ಸರಣಿ ಅಪಘಾತದಲ್ಲಿ ಆಟೋ ಚಾಲಕ ಚಾಂದ್​ಪಾಷಾ, ಪಾದಚಾರಿ ಮನೋಜ್​ಗೆ ಗಾಯ ಆಗಿತ್ತು. ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿದ್ಯುತ್ ತಂತಿ ತಗುಲಿ ಯುವಕ ಸಾವು

ಬೋರ್ ವೆಲ್ ಮೋಟರ್ ಎತ್ತುವಾಗ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ. ಹನಮಂತು (24) ಮೃತ ಯುವಕ. ವಿದ್ಯುತ್ ತಂತಿ ಇರುವುದನ್ನು ಗಮನಿಸದೆ ಬೋರ್​ವೆಲ್​ ಮೋಟರ್ ಎತ್ತುತ್ತಿದ್ದಾಗ ಅವಘಡ ಸಂಭವಿಸಿದೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಶು ವೈದ್ಯರ ಎಡವಟ್ಟಿನಿಂದ 20ಕ್ಕೂ ಹೆಚ್ಚು ಕೋಳಿಗಳು ಸಾವು

ಪಶು ವೈದ್ಯರ ಎಡವಟ್ಟಿನಿಂದ 20ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿರುವಂತಹ ಘಟನೆ ಹುಬ್ಬಳ್ಳಿ ನಗರದ ಸಿದ್ದಾರ್ಥ ಕಾಲೋನಿಯಲ್ಲಿ ನಡೆದಿದೆ. R2B ವ್ಯಾಕ್ಸಿನೇಷನ್​ನಿಂದ ಜವಾರಿ ಕೋಳಿಗಳು ಸಾವು ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಸಾಕ್ಷ್ಯ ನಾಶಕ್ಕೆ ಐಷರಾಮಿ ಕಾರನ್ನೇ ಸುಟ್ಟು ಹಾಕಿದ ಕಳ್ಳರು: ಗುಂಡಿಕ್ಕಿ ದರೋಡೆಕೋರರನ್ನ ಹಿಡಿದ ಪೊಲೀಸ್ರು

ಆನಂದ್ ಜಾನ್ ಎಂಬುವರಿಗೆ ಸೇರಿದ ಜವಾರಿ ಕೋಳಿಗಳು ಸಾವಾಗಿದೆ. ವ್ಯಾಕ್ಸಿನೇಷನ್​ ಹಾಕಿದ ಮರುದಿನ ಕೋಳಿಗಳು ಮೃತಪಟ್ಟಿವೆ. ಆನಂದ್ ಜಾನ್ ಪಶು ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್‌ ಖರೀದಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:51 pm, Sat, 15 March 25

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ