ಯದುವೀರ್​ಗೆ ವೋಟ್​ ಹಾಕೋದು ಚಾಮುಂಡೇಶ್ವರಿಗೆ ಹೂವು ಹಾಕಿದಂತೆ; ಶಾಸಕ ಜಿಟಿ ದೇವೇಗೌಡ

ಹಾಲಿ ಮೈಸೂರು-ಕೊಡಗು ಕ್ಷೇತ್ರ ಸಂಸದ ಪ್ರತಾಪ್​ ಸಿಂಹಗೆ ಕೊಕ್​ ನೀಡಿ, ಯದುವೀರ್​ಗೆ (Yaduveer) ಟಿಕೆಟ್​ ಘೋಷಣೆ ಮಾಡಲಾಗಿದೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್​​ ಶಾಸಕ ಜಿ.ಟಿ.ದೇವೇಗೌಡ,(GT Devegowda) ‘ಯದುವೀರ್ ನಮ್ಮ ಎಂಪಿ ಆಗುತ್ತಾರೆ ಎನ್ನುವುದೇ ನಮಗೆಲ್ಲರಿಗೂ ಹೆಮ್ಮೆ, ಯದುವೀರ್​ಗೆ ವೋಟ್​ ಹಾಕೋದು ಚಾಮುಂಡೇಶ್ವರಿಗೆ ಹೂವು ಹಾಕಿದಂತೆ ಎಂದರು.

ಯದುವೀರ್​ಗೆ ವೋಟ್​ ಹಾಕೋದು ಚಾಮುಂಡೇಶ್ವರಿಗೆ ಹೂವು ಹಾಕಿದಂತೆ; ಶಾಸಕ ಜಿಟಿ ದೇವೇಗೌಡ
ಜಿಟಿ ದೇವೇಗೌಡ, ಯದುವೀರ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 15, 2024 | 9:37 PM

ಮೈಸೂರು, ಮಾ.15: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಹಾಲಿ ಮೈಸೂರು-ಕೊಡಗು ಕ್ಷೇತ್ರ ಸಂಸದ ಪ್ರತಾಪ್​ ಸಿಂಹಗೆ ಕೊಕ್​ ನೀಡಿ, ಯದುವೀರ್​ಗೆ (Yaduveer) ಟಿಕೆಟ್​ ಘೋಷಣೆ ಮಾಡಲಾಗಿದೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್​​ ಶಾಸಕ ಜಿ.ಟಿ.ದೇವೇಗೌಡ,(GT Devegowda) ‘ಯದುವೀರ್ ನಮ್ಮ ಎಂಪಿ ಆಗುತ್ತಾರೆ ಎನ್ನುವುದೇ ನಮಗೆಲ್ಲರಿಗೂ ಹೆಮ್ಮೆ, ಯದುವೀರ್​ಗೆ ವೋಟ್​ ಹಾಕೋದು ಚಾಮುಂಡೇಶ್ವರಿಗೆ ಹೂವು ಹಾಕಿದಂತೆ. ಹಾಗಾಗಿ ನಮ್ಮ ವೋಟ್​ ಕೊಟ್ಟು ರಾಜಮನೆತನಕ್ಕೆ ಋಣ ಸಂದಾಯ ಮಾಡೋಣ ಎಂದಿದ್ದಾರೆ.

ಮಹಾರಾಜರು ಎಂಪಿಯಾದ್ರೆ ನಿಮ್ಮ ಅಭಿವೃದ್ಧಿ ಬಾಗಿಲು ತೆರೆಯುತ್ತೆ

‘ಈ ಹಿಂದೆ ಪತ್ರಕರ್ತನಾಗಿದ್ದ ಪ್ರತಾಪ್ ಸಿಂಹನನ್ನ ಒಂದು ರೂಪಾಯಿ ಪಡೆಯದೇ ಗೆಲ್ಲಿಸಿದ್ದೇವೆ. ಅವರು ಕೂಡ ಒಂದು ರೂಪಾಯಿ ಪಡೆಯದೇ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದಕ್ಕಾಗಿ ಪ್ರತಾಪ್ ಸಿಂಹರನ್ನು ಅಭಿನಂದಿಸುತ್ತೇನೆ. ಅವರು 10 ವರ್ಷಗಳಲ್ಲಿ ಎಷ್ಟು ಮನೆಗೆ ಭೇಟಿ ನೀಡಿದ್ದಾನೆ. ಯದುವೀರ್‌ಗೆ ಅವಕಾಶ ಕೊಡಿ, ನಿಮ್ಮ ಮನೆ ಮನೆಗೆ ಬರುತ್ತಾರೆ. ಮಹಾರಾಜರು ಎಂಪಿಯಾದರೆ ನಿಮ್ಮ ಅಭಿವೃದ್ಧಿ ಬಾಗಿಲು ತೆರೆಯುತ್ತದೆ. ಬಡವರ ಕಷ್ಟಕ್ಕೆ ಆಗುತ್ತಾರೆ. ಯದುವೀರ್‌ಗೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರೇ ಗೌರವ ಕೊಡುತ್ತಾರೆ ಎಂದರು.

ಇದನ್ನೂ ಓದಿ:ಮೊದಲ ದಿನವೇ ಭರ್ಜರಿ ಪ್ರಚಾರ: ಫುಟ್‌ಪಾತ್‌ನಲ್ಲಿ ಯದುವೀರ್​ ಚಾಯ್ ಪೆ ಚರ್ಚಾ

ಮೈಸೂರು ಮಹರಾಜರ ಕೊಡುಗೆ ನಿಮಗೆ ತಿಳಿದಿದೆ. ಮೀಸಲಾತಿ ಜಾರಿ ಮಾಡಿದ್ದೆ ಮೈಸೂರು ಮಹರಾಜರು. ಇವತ್ತು ಕೆಲವರು ನಾವು ಕೊಟ್ಟೆವು ಎಂದು ಹೇಳುತ್ತಾರೆ. ನಾನು ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್​ರನ್ನ ಭಕ್ತಿಯಿಂದ ನೋಡುತ್ತಿದ್ದೆವು. ಮೈಸೂರು ಮಹರಾಜರ ಕುಟುಂಬದ ಜೊತೆ ಈಗಲೂ ಉತ್ತಮ ಒಡನಾಟ, ಅಭಿಮಾನ ಇದೆ. ನಮ್ಮ ಮತ್ತೆ ಬಿಜೆಪಿ ನಡುವೆ ಸೀಟು ಹಂಚಿಕೆ ವಿಚಾರವಾಗಿ ವೈಮನಸ್ಸಿಲ್ಲ. ಈಗಾಗಲೇ ಬಿಜೆಪಿಯವರು 25 ಕ್ಷೇತ್ರ ಗೆದ್ದಿದ್ದಾರೆ. ಇನ್ನು ಗೆಲ್ಲಬೇಕಿರುವುದು ಮೂರು ಕ್ಷೇತ್ರ. ಆ ಮೂರು ಕ್ಷೇತ್ರ ಮಂಡ್ಯ, ಹಾಸನ, ಕೋಲಾರ ಮಾತ್ರ ಜೆಡಿಎಸ್ ಕೇಳುತ್ತದೆ. 28ಕ್ಕೆ 28 ಕ್ಷೇತ್ರವನ್ನ ಮೈತ್ರಿ ಅಭ್ಯರ್ಥಿಗಳು ಗೆದ್ದರೆ, ನಮ್ಮ ಎಲ್ಲಾ ಕೆಲಸಗಳು ಆಗುತ್ತವೆ. ಯಾರು ಎಷ್ಟೇ ಹಣ ಆಮಿಷ ನೀಡಲಿ. ನಾವೆಲ್ಲರೂ ಸೇರಿ ಯದುವೀರ್ ಒಡೆಯರ್​ರನ್ನ ಗೆಲ್ಲಿಸೋಣ ಎಂದು ಹೇಳಿದರು.

ಜಿಟಿ ದೇವೇಗೌಡರ ಸಹಕಾರ ಕೇಳಲಿಕ್ಕೆ ಬಂದಿದ್ದೇವೆ-ಯದುವೀರ್

ಇದೇ ವೇಳೆ ಯದುವೀರ್​ ಮಾತನಾಡಿ, ‘ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ ವ್ಯಕ್ತಿ. ಜಿಟಿ ದೇವೇಗೌಡರ ಸಹಕಾರ ಕೇಳಲಿಕ್ಕೆ ಬಂದಿದ್ದೇವೆ. ಇಂತಹ ವ್ಯಕ್ತಿಗಳ ಜೊತೆ ಚುನಾವಣೆಗೆ ಹೋಗೋದು ಖುಷಿಯ ವಿಷಯ. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದಲ್ಲೂ ನಾವು ಸಿದ್ದರಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ