AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್, ಅವರ ಜಯಂತಿ ಮಾಡುತ್ತಿರುವುದು ನನಗೆ ಖುಷಿ ತಂದಿದೆ -ಹೆಚ್.ವಿಶ್ವನಾಥ್

ಟಿಪ್ಪು ಬಗ್ಗೆ ಬಹಳ ಜನ ಬೇರೆ ಬೇರೆ ಹೇಳುತ್ತಾರೆ. ಆದರೆ ಇತಿಹಾಸವನ್ನು ತಿರುಚಬಾರದು. ಕನ್ನಂಬಾಡಿ ಕಟ್ಟೆಯನ್ನ ಯದುವಂಶದವರು ಕಟ್ಟಿದರು ಅದಕ್ಕೆ ಭೂಮಿ ಪೂಜೆ ಮಾಡಿದವರು ಟಿಪ್ಪು.

ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್, ಅವರ ಜಯಂತಿ ಮಾಡುತ್ತಿರುವುದು ನನಗೆ ಖುಷಿ ತಂದಿದೆ -ಹೆಚ್.ವಿಶ್ವನಾಥ್
ಹೆಚ್ ವಿಶ್ವನಾಥ, ಎಮ್ ಎಲ್ ಸಿ
TV9 Web
| Edited By: |

Updated on:Nov 10, 2022 | 3:39 PM

Share

ಮೈಸೂರು: ಟಿಪ್ಪು ಜಯಂತಿ(Tipu Jayanti) ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ. ಟಿಪ್ಪು ಕನ್ನಡ ವಿರೋಧಿ ಎಂದು ಬಿಂಬಿಸುವವರಿಗೆ ಇದು ತಕ್ಕ ಉತ್ತರ ಎಂದು ಮೈಸೂರಿನಲ್ಲಿ ಪರಿಷತ್​ನ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್(H Vishwanath) ಸಂತಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಎನ್​​.ಆರ್​.ಮೊಹಲ್ಲಾದ ಮಸೀದಿ ಮೈದಾನದಲ್ಲಿ ಇಂದು ಟಿಪ್ಪು ಜಯಂತಿ ಆಚರಿಸಲಾಯಿತು. ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ MLC ಹೆಚ್.ವಿಶ್ವನಾಥ್, ಟಿಪ್ಪು ಸುಲ್ತಾನ್​ನ ಸಾಧನೆಯನ್ನು ಕೊಂಡಾಡಿದ್ದಾರೆ. ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್. ಕರ್ನಾಟಕದಲ್ಲಿ ಆರ್ಥಿಕ ವಲಯವನ್ನು ಉತ್ತಮ ಪಡಿಸಿದ್ದು ಟಿಪ್ಪು. ಮೈಸೂರು ಹುಲಿ ಎಂಬ ಬಿರುದು ಯಾರೋ ಮಹಾರಾಜರು ನೀಡಿಲ್ಲ. ಈ ನಾಡಿನ ಪ್ರಜೆಗಳು ಟಿಪ್ಪುಗೆ ಮೈಸೂರು ಹುಲಿ ಬಿರುದು ನೀಡಿದ್ದಾರೆ. ಟಿಪ್ಪು ಮತಾಂತರ ಮಾಡಿದ, ಹಲವರನ್ನು ಕೊಂದ ಎಂದು ಹೇಳುತ್ತಾರೆ. ಟಿಪ್ಪು ಮತಾಂತರ ಮಾಡಿಲ್ಲ, ಯಾರನ್ನೂ ಕೊಂದಿಲ್ಲ ಎಂದು ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ MLC ಹೆಚ್.ವಿಶ್ವನಾಥ್ ಹೇಳಿದರು.

ಟಿಪ್ಪು ಬಗ್ಗೆ ಬಹಳ ಜನ ಬೇರೆ ಬೇರೆ ಹೇಳುತ್ತಾರೆ. ಆದರೆ ಇತಿಹಾಸವನ್ನು ತಿರುಚಬಾರದು. ಕನ್ನಂಬಾಡಿ ಕಟ್ಟೆಯನ್ನ ಯದುವಂಶದವರು ಕಟ್ಟಿದರು ಅದಕ್ಕೆ ಭೂಮಿ ಪೂಜೆ ಮಾಡಿದವರು ಟಿಪ್ಪು. ಯಾರೋ ಏನೋ ಹೇಳಬಹುದು, ರೈಲಿನ ಹೆಸರನ್ನು ತೆಗೆಯಬಹುದು. ಆದರೆ ನಾಡಿನ ಜನರ ಮನಸ್ಸಿನಿಂದ ಯಾರು ತೆಗೆಯಲು ಸಾಧ್ಯವಾಗದು. ಟಿಪ್ಪು ಆಡಳಿತ, ಧೈರ್ಯ ಶೌರ್ಯ, ಕಲ್ಯಾಣ ಕಾರ್ಯಕ್ರಮಗಳನ್ನು ಯಾರು ಅಲ್ಲೆಗೆಳೆಯಲು ಸಾಧ್ಯವಾಗದು. ಮೈಸೂರಿನ ಸಂಸ್ಥಾನದಲ್ಲಿ ಅಂದು ಎಷ್ಟು ಜನಸಂಖ್ಯೆ ಇತ್ತು? 70 ಸಾವಿರ ಜನರನ್ನು ಕೊಂದ, ಮತಾಂತರ ಮಾಡಿದ ಎಂದು ಹೇಳುತ್ತಾರೆ. ಹಾಗಾದರೆ ಅಂದು ಜನಸಂಖ್ಯೆ ಎಷ್ಟಿತ್ತು? ಶೃಂಗೇರಿ ಮಠ ಸಂಕಷ್ಟದಲ್ಲಿದ್ದಾಗ ಧರ್ಮಧಿಕಾರಿಗಳು ಟಿಪ್ಪುಗೆ ಪತ್ರ ಬರೆಯುತ್ತಾರೆ. ಅಂದು ಟಿಪ್ಪು ಮಠವನ್ನು ರಕ್ಷಣೆ ಮಾಡುತ್ತಾರೆ. ಟಿಪ್ಪು ಧರ್ಮದ ಪರವೂ ಆಡಳಿತ ಪರವೂ ಇದ್ದರು. ಮಹಿಳೆಯರಿಗೆ ಕೇರಳದಲ್ಲಿ ವಸ್ತ್ರ ಸಂಹಿತೆಯನ್ನ ಜಾರಿಗೆ ತಂದಿದ್ದು ಟಿಪ್ಪು ಸುಲ್ತಾನ್ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಟಿಪ್ಪು ಜಯಂತಿಯ ಶುಭಾಶಯ ಕೋರಿದ ಹೆಚ್​.ಡಿ.ದೇವೇಗೌಡ

ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರ ಪರಾಕ್ರಮಿ ಟಿಪ್ಪು ಸುಲ್ತಾನ್​ಗೆ ನನ್ನ ಗೌರವಪೂರ್ವಕ ನಮನ ಅರ್ಪಿಸುತ್ತೇನೆ. ದೇಶಪ್ರೇಮ, ಮಾದರಿ ಆಡಳಿತಕ್ಕೆ ಟಿಪ್ಪು ಹೆಸರುವಾಸಿಯಾಗಿದ್ದರು. ಇಂದು ಟಿಪ್ಪುರನ್ನು ಸ್ಮರಿಸೋಣ ಎಂದು H.D.ದೇವೇಗೌಡ ಟ್ವೀಟ್​​ ಮಾಡಿದ್ದಾರೆ.

Published On - 3:28 pm, Thu, 10 November 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!