AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಎಲ್ಲರನ್ನೂ ಕೊಂಡು ಕೊಂಡಿದ್ದಾರಾ?- ಮೈಸೂರಿನಲ್ಲಿ ಎಚ್ ವಿಶ್ವನಾಥ್ ಪ್ರಶ್ನೆ

ನಮ್ಮದು ಸಹಾ ದೊಡ್ಡ ಮಠ. ಹಾವೇರಿ, ಕಲಬುರಗಿ, ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್ಎಸ್ಎಸ್ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು.

ಸಿದ್ದರಾಮಯ್ಯ ಎಲ್ಲರನ್ನೂ ಕೊಂಡು ಕೊಂಡಿದ್ದಾರಾ?- ಮೈಸೂರಿನಲ್ಲಿ ಎಚ್ ವಿಶ್ವನಾಥ್ ಪ್ರಶ್ನೆ
ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: sandhya thejappa|

Updated on: Dec 13, 2021 | 11:40 AM

Share

ಮೈಸೂರು: ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ ಅವರನ್ನು ಮರೆತಿರುವುದು ಪ್ರಮಾದ ಅಂತ ಎಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಕಾಗಿನೆಲೆ ಸ್ವಾಮಿಗಳ ಜಗದ್ಗುರುಗಳನ್ನು ಮರೆತಿತಿದ್ದೀರಾ? ಯಾಕೆ ಕುರುಬರನ್ನು ನೀವು ಮರೆಯುತ್ತಿದ್ದೀರಾ? ನಿರಂಜನಾಪುರಿ ಪ್ರಸನ್ನ ಸ್ವಾಮಿಗಳನ್ನು ಕರೆದಿಲ್ಲ. ಬಸವರಾಜ ಬೊಮ್ಮಾಯಿ ಸಹಾ ಮರೆತುಬಿಟ್ಟರಾ? ಅಂತ ವಿಶ್ವನಾಥ್ ಮೈಸೂರಿನಲ್ಲಿ ಪ್ರಶ್ನಿಸಿದ್ದಾರೆ.

ನಮ್ಮದು ಸಹಾ ದೊಡ್ಡ ಮಠ. ಹಾವೇರಿ, ಕಲಬುರಗಿ, ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್ಎಸ್ಎಸ್ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಅಹಲ್ಯಬಾಯಿ ಸಮಾಜದ ಗುರುಗಳನ್ನು ಮರೆತಿದ್ದೀರಾ, ಹಾಗಾದರೆ ನಾನು ಕುರುಬರು ಬೇಡವಾ ನಿಮಗೆ? ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ ವಿಶ್ವನಾಥ್, ಮೋದಿ ಮತ್ತು ಬೊಮ್ಮಾಯಿ ಅವರು ಸರಿ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಇನ್ನು ಇದೇ ವೇಳೆ ಹಿಂದುಳಿದವರು ಬಿಜೆಪಿಗೆ ಹೋಗಬಾರದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಯಾರು? ಎಲ್ಲರನ್ನೂ ಕೊಂಡು ಕೊಂಡಿದ್ದಾರಾ? ಇವರು ಯಾರು ಅದನ್ನು ಹೇಳೋಕೆ. ಇವರಿಂದ ಹೆಚ್ಎಂ ರೇವಣ್ಣ, ನಮ್ಮ ಮನೆ ಹಾಳಾಗಿದೆ. ಮನೆ ಹಾಳು ಮಾಡಿದ್ದು ಬಿಟ್ಟರೆ ಬೇರೆ ಏನು ಮಾಡಿದ್ದೀರಾ? 5 ವರ್ಷ ಸಿಎಂ ಆಗಿದ್ದಾಗ ಯಾರಿಗೆ ಏನು ಮಾಡಲಿಲ್ಲ. ಕುರುಬರಿಗೂ ಏನು ಮಾಡಲಿಲ್ಲ. ಚಾಮುಂಡೇಶ್ವರಿ ಸೋಲಿಗೆ ಎಲ್ಲರ ಮೇಲೆ ಎಗರಾಡುತ್ತಾರೆ. ನಿಮ್ಮ ಅಹಂ ನಿಮ್ಮ ದುರಂಹಕಾರ ನಿಮ್ಮನ್ನು ಸೋಲಿಸಿದ್ದು. ಬೇರೆ ಯಾರು ನಿಮ್ಮನ್ನು ಸೋಲಿಸಿಲ್ಲ ಅಂತ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ

ಯುಕೆಯಲ್ಲಿ ಒಮಿಕ್ರಾನ್ ಅಲೆ ಸಾಧ್ಯತೆ ವರದಿ; ಬೂಸ್ಟರ್ ಡೋಸ್, ಹೆಚ್ಚಿನ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

Autobiography : ಅಭಿಜ್ಞಾನ ; ‘ನನ್ನಜ್ಜಿ ಹಾಲಿಲ್ಲದ ಮೊಲೆಗಳನ್ನು ಬಾಯಲ್ಲಿಟ್ಟು ಸಮಾಧಾನಿಸುತ್ತಿದ್ದಳು’

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ