Mysore Dasara 2023: ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ

Hamsalekha: ವಿಶ್ವವಿಖ್ಯಾತ ಮೈಸೂರು ದಸರಾ ಅಕ್ಟೋಬರ್ 15ರಂದು ಬೆಳಗ್ಗೆ 10.15 ರಿಂದ 10.30 ರೊಳಗೆ ಶುಭ ಲಗ್ನದಲ್ಲಿ ಉದ್ಘಾಟನೆಯಾಗಲಿದೆ. ಆದರೆ, ಯಾರು ಉದ್ಘಾಟನೆ ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿಸಿತ್ತು. ಅಲ್ಲದೇ ಉದ್ಘಾಟಕರ ಆಯ್ಕೆಯನ್ನು ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಇದೀಗ ಅಂತಿಮವಾಗಿ ಸ್ವತಃ ಮುಖ್ಯಮಂತ್ರಿಗಳೇ ಈ ಬಾರಿಯ ಮೈಸೂರು ದಸರಾ ಉದ್ಘಾಟಕರ ಹೆಸರನ್ನು ಘೋಷಣೆ ಮಾಡಿದ್ದಾರೆ.

Mysore Dasara 2023: ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ
ಸಂಗೀತ ನಿರ್ದೇಶಕ ಹಂಸಲೇಖ
Follow us
| Updated By: ವಿವೇಕ ಬಿರಾದಾರ

Updated on:Aug 29, 2023 | 10:57 AM

ಮೈಸೂರು (ಆ.29): ಈ ಬಾರಿಯ ಮೈಸೂರು ದಸರಾವನ್ನು (Mysuru Dasara) ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ದಸಾರ ಅಕ್ಟೋಬರ್​ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ಇದನ್ನೂ ಓದಿ: Mysore Dasara 2023: ಮೈಸೂರು ದಸರಾಗೆ ರಸ್ತೆಗಿಳಿಯಲಿವೆ 300 ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್​​ಗಳು

ಇನ್ನು ಮೈಸೂರು ದಸರಾ ಹಬ್ಬಕ್ಕೆ ಈಗಿನಿಂದಲೇ ಗಜಪಡೆಯ ತಾಲೀಮು ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಆನೆ ಶಿಬಿರದಿಂದ ದಸರಾ ಜಂಬೂ ಸವಾರಿಗೆ ಎರಡು ಆನೆಗಳು ಆಯ್ಕೆಯಾಗಿವೆ.  ಆನೆ ಶಿಬಿರದಲ್ಲಿ ಪಾರ್ಥಸಾರಥಿ ಮತ್ತು ಕಲ್ಪನಾ ಎರಡು ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ವಾಹನಗಳ ಶಬ್ದಗಳಿಗೆ ಹೆದರಬಾರದೆಂದು ಪ್ರತಿನಿತ್ಯ ಗುಂಡ್ಲುಪೇಟೆ, ಕೇರಳ ಹೆದ್ದಾರಿಯಲ್ಲಿ ಆನೆಗಳು ಪ್ರತಿದಿನ 10 ಕಿ.ಮೀ ಸಂಚಾರ ಮಾಡುತ್ತಿವೆ.  ರಾಂಪುರ ಆನೆ ಶಿಬಿರದಿಂದ ಮೂಲೆಹೊಳೆ ಚೆಕ್ ಪೋಸ್ಟ್ ವರೆಗೂ ನಿತ್ಯ ತಾಲೀಮು ನೀಡಲಾಗುತ್ತಿದೆ.

ಏರ್ ಶೋ ಆಯೋಜನಗೆ ಚಿಂತನೆ

ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ಇದೆ.  ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:26 am, Tue, 29 August 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು