AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೂರಿನಲ್ಲಿ ಹನುಮ ಜಯಂತಿ ಸಂಭ್ರಮ: ಶಾಲಾ-ಕಾಲೇಜುಗಳಿಗೆ ರಜೆ, ಮೂರು ದಿನ ಮದ್ಯ ಮಾರಾಟ ನಿಷೇಧ

ಹುಣಸೂರಿನ ಪ್ರಮುಖ ಬೀದಿಗಳಲ್ಲಿ ಹನುಮ ವಿಗ್ರಹಗಳ ಮೆರವಣಿಗೆ ನಡೆಯುತ್ತಿದೆ. ಕಲಾತಂಡಗಳು ಡೋಲು, ತಮಟೆ, ನಗಾರಿ ಜೊತೆ ಮೆರವಣಿಗೆ ನಡೆಸುತ್ತಿವೆ.

ಹುಣಸೂರಿನಲ್ಲಿ ಹನುಮ ಜಯಂತಿ ಸಂಭ್ರಮ: ಶಾಲಾ-ಕಾಲೇಜುಗಳಿಗೆ ರಜೆ, ಮೂರು ದಿನ ಮದ್ಯ ಮಾರಾಟ ನಿಷೇಧ
ಹುಣಸೂರಿನಲ್ಲಿ ಹನುಮ ಜಯಂತಿ ಸಂಭ್ರಮ
TV9 Web
| Edited By: |

Updated on:Dec 07, 2022 | 10:06 AM

Share

ಮೈಸೂರು: ಇಂದು ಹುಣಸೂರಿನಲ್ಲಿ ಹನುಮ ಜಯಂತಿ(Hanuman Jayanti) ಸಂಭ್ರಮ ಮನೆ ಮಾಡಿದೆ. ಹುಣಸೂರಿನ ಪ್ರಮುಖ ಬೀದಿಗಳಲ್ಲಿ ಹನುಮ ವಿಗ್ರಹಗಳ ಮೆರವಣಿಗೆ ನಡೆಯುತ್ತಿದೆ. ಕಲಾತಂಡಗಳು ಡೋಲು, ತಮಟೆ, ನಗಾರಿ ಜೊತೆ ಮೆರವಣಿಗೆ ನಡೆಸುತ್ತಿವೆ. ಹನುಮ ಜಯಂತಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಕಟ್ಟೆಚ್ಚರ ವಹಿಸಿದೆ.

ಹುಣಸೂರಿನ ಜೆಎಲ್​ಬಿ ರಸ್ತೆ ಬಜಾರ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ. ಎಲ್ಲಾ ರೀತಿಯ ವಾಹನಗಳಿಗೆ ನಿರ್ಬಂಧ ವಿಧಿಸಿ ಹುಣಸೂರು ಉಪವಿಭಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಎಸ್​ಪಿ ಆರ್ ಚೇತನ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ಬಡಾವಣೆಗಳಲ್ಲಿ ಪೊಲೀಸ್ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹುಣಸೂರಿನಲ್ಲಿ ಭದ್ರತೆಗೆ 1,700ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹುಣಸೂರಿನ 70 ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪೊಲೀಸರು ಈಗಾಗಲೇ ಎಲ್ಲಾ ಸಮುದಾಯಗಳ ಪ್ರಮುಖರ ಜೊತೆ ಶಾಂತಿ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ ಸಾವು ಸಂಭವಿಸಿ ತಿಂಗಳಾದರೂ ಬಂದಿಲ್ಲ ಶವ ಪರೀಕ್ಷೆ ವರದಿ

ಹುಣಸೂರು ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಇಂದು ಹನುಮ ಜಯಂತಿ ಹಿನ್ನೆಲೆ ಹುಣಸೂರು ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಹುಣಸೂರು ತಾಲೂಕಿನಾದ್ಯಂತ 3 ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಗೆ ಅವಕಾಶ ನೀಡಲಾಗಿದೆ. ಹನುಮ ಮೆರವಣಿಗೆ ವೇಳೆ ಡಿಜೆ ಬಳಕೆಗೆ ಅವಕಾಶ ಇಲ್ಲ. ಸಂಜೆ 5 ಗಂಟೆಯವರೆಗೆ ಮಾತ್ರ ಮೆರವಣಿಗೆ ಮಾಡಲು ಅವಕಾಶ ನೀಡಲಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಮೇಲೆ ಖಾಕಿ ನಿಗಾ ಇಡಲಾಗಿದೆ. ಹುಣಸೂರು ಪ್ರವೇಶಿಸುವ 6 ಕಡೆ ಚೆಕ್​ಪೋಸ್ಟ್​​ ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ನಿಗದಿತ ಸ್ಥಳಗಳಲ್ಲಿ ಮಾತ್ರ ಬಾವುಟ, ಫ್ಲೆಕ್ಸ್​​ ಅಳವಡಿಕೆಗೆ ಅವಕಾಶ ನೀಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:06 am, Wed, 7 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?