AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಡ್ಯಾಮೇಜ್‌ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಅವರು ಬೈಕ್‌ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಇದೀಗ ಈ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ಅಲ್ಲದೇ ಬೈಕ್​ ಸವಾರನ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಮ್​, ಮೈಸೂರು
| Edited By: |

Updated on:Dec 04, 2023 | 7:20 AM

Share

ಮೈಸೂರು, (ಡಿಸೆಂಬರ್ 04): ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರ ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭವಾನಿ ರೇವಣ್ಣ (Bhavani Revanna) ಅವರ ಕಾರಿಗೆ (Car) ಬೈಕ್‌ (Bike) ಡಿಕ್ಕಿ ಹೊಡೆದಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮದ ಬಳಿ ನಡೆದಿದೆ. ಸುಮಾರು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಟೊಯೋಟಾ ವೆಲ್ಫೇರ್​ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಅವರು ಬೈಕ್‌ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದು, ಇದೀಗ ಈ ದೃಶ್ಯದ ವೀಡಿಯೋ ಫುಲ್ ವೈರಲ್‌ ಆಗಿದೆ.

ರಸ್ತೆಗಿಳಿದು ಬೈಕ್ ಸವಾರನನ್ನು ಭವಾನಿ ರೇವಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟು ದೂರದಿಂದ ಟೈರ್ ಉಜ್ಜಿಕೊಂಡು ಕಂಟ್ರೋಲ್‌ ಮಾಡಿದ್ದೀವಿ. ಬೈಕ್ ಓಡ್ಸೋಕೆ ಇತಿಮಿತಿ ಇಲ್ವಾ? ನಿನಗೆ ರೈಟ್ ಸೈಡ್ ಬರೋಕೆ ರೂಲ್ಸ್ ಎಲ್ಲಿದೆ? ಲೆಫ್ಟ್ ಸೈಡ್ ಬರಬೇಕು ನೀನು ಎಂದು ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಇನ್ನು ಈ ಸಂಬಂಧ ಭವಾನಿ ರೇವಣ್ಣ ಕಾರು ಚಾಲಕ ಮಂಜುನಾಥ್‌ ಅವರು ಅವರು ಬೈಕ್​ ಸವಾರ ಶಿವಣ್ಣ ಎನ್ನುವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲೇನಿದೆ?

01/12/2023ರಂದು 12.45ರ ಸುಮಾರಿಗೆ ಕೆಲಸ ನಿಮಿತ್ತ ಸಾಲಿಗ್ರಾಮದ ಪ್ರಕಾಶ್ ಮನೆಗೆ ಹೋಗಿದ್ದೆ. ವಾಪಸ್ಸು ಹೊಳೆನರಸೀಪುರಕ್ಕೆ ಹೊರಟಿದ್ದೆ. ಆಗ ರಾಂಪುರ ಜಂಕ್ಷನ್ ಬಳಿ ಎದರುಗಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅತಿ ವೇಗ ಹಾಗೂ ಅಜಾಗರೂಕತೆಯಿಂದ ಅಡ್ಡ ದಿಡ್ಡಿಯಾಗಿ ಬಂದು ಕಾರಿನ ಮುಂಭಾಗಕ್ಕೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಆದರೆ ಆತನಿಗೆ ಯಾವುದೇ ಗಾಯವಾಗಿಲ್ಲ. ಇನ್ನು ಕಾರಿನ ಬಂಪರ್ ಬ್ಯಾನೆಟ್, ನಂಬರ್ ಪ್ಲೇಟ್ ಮುಂಭಾಗದ ಬಿಡಿ ಭಾಗಗಳು ಜಖಂ ಆಗಿವೆ. ಹೀಗಾಗಿ ಶಿವಣ್ಣ ವಿರುದ್ದ ಕಾನೂನು ಕ್ರಮ‌ಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಭವಾನಿ ರೇವಣ್ಣ ಅವರ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮನುಷ್ಯನ ಪ್ರಾಣಕ್ಕಿಂತ ತಮ್ಮ ಕಾರಿಗೆ ಆಗಿರುವ ಹಾನಿಯೇ ಹೆಚ್ಚಾಯ್ತಾ? ಅವರಿಂದಲೇ ಆಯ್ಕೆಯಾಗುವ ನಿಮ್ಮ ಈ ವರ್ತನೆ ಸರಿ ಅಲ್ಲ ಎಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 am, Mon, 4 December 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ