AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಡ್ಯಾಮೇಜ್‌ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಅವರು ಬೈಕ್‌ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಇದೀಗ ಈ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ಅಲ್ಲದೇ ಬೈಕ್​ ಸವಾರನ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಮ್​, ಮೈಸೂರು
| Edited By: |

Updated on:Dec 04, 2023 | 7:20 AM

Share

ಮೈಸೂರು, (ಡಿಸೆಂಬರ್ 04): ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರ ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭವಾನಿ ರೇವಣ್ಣ (Bhavani Revanna) ಅವರ ಕಾರಿಗೆ (Car) ಬೈಕ್‌ (Bike) ಡಿಕ್ಕಿ ಹೊಡೆದಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮದ ಬಳಿ ನಡೆದಿದೆ. ಸುಮಾರು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಟೊಯೋಟಾ ವೆಲ್ಫೇರ್​ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಅವರು ಬೈಕ್‌ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದು, ಇದೀಗ ಈ ದೃಶ್ಯದ ವೀಡಿಯೋ ಫುಲ್ ವೈರಲ್‌ ಆಗಿದೆ.

ರಸ್ತೆಗಿಳಿದು ಬೈಕ್ ಸವಾರನನ್ನು ಭವಾನಿ ರೇವಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟು ದೂರದಿಂದ ಟೈರ್ ಉಜ್ಜಿಕೊಂಡು ಕಂಟ್ರೋಲ್‌ ಮಾಡಿದ್ದೀವಿ. ಬೈಕ್ ಓಡ್ಸೋಕೆ ಇತಿಮಿತಿ ಇಲ್ವಾ? ನಿನಗೆ ರೈಟ್ ಸೈಡ್ ಬರೋಕೆ ರೂಲ್ಸ್ ಎಲ್ಲಿದೆ? ಲೆಫ್ಟ್ ಸೈಡ್ ಬರಬೇಕು ನೀನು ಎಂದು ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಇನ್ನು ಈ ಸಂಬಂಧ ಭವಾನಿ ರೇವಣ್ಣ ಕಾರು ಚಾಲಕ ಮಂಜುನಾಥ್‌ ಅವರು ಅವರು ಬೈಕ್​ ಸವಾರ ಶಿವಣ್ಣ ಎನ್ನುವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲೇನಿದೆ?

01/12/2023ರಂದು 12.45ರ ಸುಮಾರಿಗೆ ಕೆಲಸ ನಿಮಿತ್ತ ಸಾಲಿಗ್ರಾಮದ ಪ್ರಕಾಶ್ ಮನೆಗೆ ಹೋಗಿದ್ದೆ. ವಾಪಸ್ಸು ಹೊಳೆನರಸೀಪುರಕ್ಕೆ ಹೊರಟಿದ್ದೆ. ಆಗ ರಾಂಪುರ ಜಂಕ್ಷನ್ ಬಳಿ ಎದರುಗಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅತಿ ವೇಗ ಹಾಗೂ ಅಜಾಗರೂಕತೆಯಿಂದ ಅಡ್ಡ ದಿಡ್ಡಿಯಾಗಿ ಬಂದು ಕಾರಿನ ಮುಂಭಾಗಕ್ಕೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಆದರೆ ಆತನಿಗೆ ಯಾವುದೇ ಗಾಯವಾಗಿಲ್ಲ. ಇನ್ನು ಕಾರಿನ ಬಂಪರ್ ಬ್ಯಾನೆಟ್, ನಂಬರ್ ಪ್ಲೇಟ್ ಮುಂಭಾಗದ ಬಿಡಿ ಭಾಗಗಳು ಜಖಂ ಆಗಿವೆ. ಹೀಗಾಗಿ ಶಿವಣ್ಣ ವಿರುದ್ದ ಕಾನೂನು ಕ್ರಮ‌ಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಭವಾನಿ ರೇವಣ್ಣ ಅವರ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮನುಷ್ಯನ ಪ್ರಾಣಕ್ಕಿಂತ ತಮ್ಮ ಕಾರಿಗೆ ಆಗಿರುವ ಹಾನಿಯೇ ಹೆಚ್ಚಾಯ್ತಾ? ಅವರಿಂದಲೇ ಆಯ್ಕೆಯಾಗುವ ನಿಮ್ಮ ಈ ವರ್ತನೆ ಸರಿ ಅಲ್ಲ ಎಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 am, Mon, 4 December 23

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ