AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಖೆಗೆ ಆದೇಶ ನೀಡಲು ಅಧಿಕಾರವಿದೆ: ಸಾ ರಾ ಮಹೇಶ್​ ಆಪಾದನೆಗೆ ಮುನೀಶ್​ ಮೌದ್ಗಿಲ್​ ಉತ್ತರ

ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭೂ ದಾಖಲೆಗಳ ಸರ್ವೆ ಕುರಿತು ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ಭೂ ದಾಖಲೆಗಳ ಆಯುಕ್ತ ಮುನೀಶ್ ಮೌದ್ಗೀಲ್ ಸೋಮವಾರ ಉತ್ತರ ನೀಡಿದ್ದಾರೆ.

ತನಿಖೆಗೆ ಆದೇಶ ನೀಡಲು ಅಧಿಕಾರವಿದೆ: ಸಾ ರಾ ಮಹೇಶ್​ ಆಪಾದನೆಗೆ ಮುನೀಶ್​ ಮೌದ್ಗಿಲ್​ ಉತ್ತರ
ಸಾ.ರಾ.ಮಹೇಶ್ ಮತ್ತು ಮುನೀಶ್ ಮೌದ್ಗೀಲ್
TV9 Web
| Edited By: |

Updated on: Sep 06, 2021 | 4:16 PM

Share

ಮೈಸೂರು: ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭೂ ದಾಖಲೆಗಳ ಸರ್ವೆ ಕುರಿತು ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ಭೂ ದಾಖಲೆಗಳ ಆಯುಕ್ತ ಮುನೀಶ್ ಮೌದ್ಗೀಲ್ ಸೋಮವಾರ ಉತ್ತರ ನೀಡಿದ್ದಾರೆ. ಇಂಥ ತನಿಖೆಗೆ ಆದೇಶ ನೀಡಲು ತಮಗೆ ಇರುವ ಅಧಿಕಾರಿಗಳ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.

ಇದೀಗ ನಾನು ಸರ್ವೆಗೆ ಆದೇಶಿಸಿದ್ದೇನೆ. ಮರು ಸಮೀಕ್ಷೆಗೆ ಅಲ್ಲ ಎಂದು ಮೌದ್ಗೀಲ್ ಸ್ಪಷ್ಟಪಡಿಸಿದ್ದಾರೆ. ಏಕೆಂದರೆ ಈ ಹಿಂದೆ ಮಾಡಿದ್ದು ಸರ್ವೆ ಆಗಿರಲಿಲ್ಲ. ಇದೀಗ ಅರ್ಜಿ ಹಾಕಿರುವವರು ಹಲವು ಮಾಹಿತಿ ಕೋರಿದ್ದಾರೆ, ಪ್ರಶ್ನೆಗಳನ್ನು ಎತ್ತಿದ್ದಾರೆ. ಹೀಗಾಗಿಯೇ ಹೊಸದಾಗಿ ಸರ್ವೆ ನಡೆಸಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೆ ನಡೆಸಲು ಆದೇಶಿಸುವ ಅಧಿಕಾರ ತನಗೆ ಇದೆ ಎಂದು ಹಲವು ಕಾನೂನು ವಿಚಾರಗಳನ್ನು ಮುಂದಿಟ್ಟಿದ್ದಾರೆ.

1) (ಸಾ.ರಾ.ಮಹೇಶ್​ ಅವರಿಗೆ ಸಂಬಂಧಿಸಿದಂತೆ) ಹಲವು ಅಕ್ರಮಗಳ ಆರೋಪ ಕೇಳಿಬಂದಿದೆ. ಸಂಖ್ಯೆಗಳಲ್ಲಿ ಹೇಳುವುದಾದರೆ 6ರಿಂದ 7.

2) ಈ ಹಿಂದೆಯೂ ಲಿಖಿತ ರೂಪದಲ್ಲಿ ಹಲವು ಅಕ್ರಮಗಳ ಬಗ್ಗೆ ಆರೋಪಿಸಲಾಗಿತ್ತು. ಪ್ರಾದೇಶಿಕ ಆಯುಕ್ತರು ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಮಾತ್ರ (ರಾಜಕಾಲುವೆ ಒತ್ತುವರಿ) ವಿಚಾರಣೆ ನಡೆಸಲು ಆದೇಶಿಸಲಾಗಿತ್ತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂಮಿಯ ಒತ್ತುವರಿ, ಕೆರೆಯ ಬಫರ್​ ವಲಯಗಳಲ್ಲಿ ರೆಸಾರ್ಟ್​ಗಳಿಗೆ ಅನುಮೋದನೆ ನೀಡಿರುವ ಬಗ್ಗೆ ವಿಚಾರಣೆ ನಡೆದಿರಲಿಲ್ಲ.

3) ಒಬ್ಬ ವ್ಯಕ್ತಿಯ ಬಗ್ಗೆ, ಒಂದು ವಿಚಾರವನ್ನು ಆಧರಿಸಿ ವಿಚಾರಣೆ ನಡೆಸಲು ಅರ್ಜಿದಾರರು ಕೋರಿರಲಿಲ್ಲ. ಎಲ್ಲ ವಿಚಾರಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಅರ್ಜಿದಾರರು ಕೋರಿದ್ದರು.

4) ಹೀಗಾಗಿಯೇ ವಸ್ತುಸ್ಥಿತಿಯನ್ನು ಬೆಳಕಿಗೆ ತರಲು ಸಮಗ್ರ ತನಿಖೆಗೆ ಆದೇಶಿಸಲಾಗಿದೆ. ಯಾವುದೇ ನಿರ್ದಿಷ್ಟ ಆರೋಪ ಅಥವಾ ಒತ್ತವರಿಗೆ ಸಂಬಂಧಿಸಿದ ತನಿಖೆ ಇದಲ್ಲ.

5) ಸರ್ವೆ ಆಯೋಕ್ತರ ನಿರ್ದೇಶನದ ಮೇಲೆ ಈ ಹಿಂದೆಯೇ ಸರ್ವೆ ನಡೆದಿತ್ತು. ಅದು ಮುಕ್ತಾಯವಾಗಿದೆ ಎಂಬ ಹೇಳಿಕೆಗಳು ಆಧಾರರಹಿತ.

(Have Authority to Order Inquiry in Sa Ra Mahesh Case says Munish Moudgil)

ಇದನ್ನೂ ಓದಿ: ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

ಇದನ್ನೂ ಓದಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್​ಬ್ಯಾಕ್ ಅರೋಪ; ಅಮಾನತಿಗೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಆಗ್ರಹ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ