AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ

ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು.

ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ
ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 26, 2024 | 10:11 PM

Share

ಮೈಸೂರು, ಮೇ.26: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸರೋದ್ ವಾದಕ ರಾಜೀವ್ ತಾರಾನಾಥ್(Rajeev Taranath)​ರವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರು ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು.

ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ

ಇನ್ನು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜೀವ್ ತಾರನಾಥ್ ಅವರ ಆರೋಗ್ಯದ ಕುರಿತು ವೈದ್ಯರು ಹಾಗೂ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದರು. ಮಹದೇವಪ್ಪಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಮತ್ತಿತರರು ಸಾಥ್​ ನೀಡಿದರು.

ಇದನ್ನೂ ಓದಿ:ತಾವು ಬಂದೊಡನೆ ಸುದ್ದಿಗೋಷ್ಟಿ ನಿಲ್ಲಿಸಿ ಎದ್ದುನಿಂತ ಸಚಿವ ಮಹದೇವಪ್ಪರನ್ನು ಸಿಎಂ ಸಿದ್ದರಾಮಯ್ಯ ನಯವಾಗಿ ಗದರಿದರು

ಸರೋದ್ ವಾದಕ ರಾಜೀವ್ ತಾರಾನಾಥ್ ಅವರು 1932 ಅಕ್ಟೋಬರ್ 17 ರಂದು ಬೆಂಗಳೂರಿನಲ್ಲಿ ಜನಿಸಿದರು. ಅವರು ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಗಾಯನ ಸಂಗೀತದಲ್ಲಿ ತಮ್ಮ ಆರಂಭಿಕ ತರಬೇತಿಯನ್ನು ಪಡೆದರು. ಒಂಬತ್ತು ವರ್ಷದವರಾಗಿದ್ದಾಗ ಅವರು ತಮ್ಮ ಮೊದಲ ಸಾರ್ವಜನಿಕ ಗಾಯನ ಪ್ರದರ್ಶನವನ್ನು ನೀಡಿದರು. ಇವರು ಸಾಹಿತ್ಯದಲ್ಲಿ ಪಿಎಚ್‌ಡಿ ಹೊಂದಿದ್ದರೂ, ಅವರು ತಮ್ಮ ವೃತ್ತಿಜೀವನವನ್ನು ತಿರುಚಿರಾಪಳ್ಳಿಯ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕ ಮತ್ತು ಇಂಗ್ಲಿಷ್ ಸಾಹಿತ್ಯದ ಮುಖ್ಯಸ್ಥರಾಗಿ ತ್ಯಜಿಸಲು ನಿರ್ಧರಿಸಿದರು. ನಂತರ ಅದನ್ನು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ತಿರುಚಿರಾಪಳ್ಳಿ ಎಂದು ಮರುನಾಮಕರಣ ಮಾಡಲಾಯಿತು. ತದನಂತರ ಕಲ್ಕತ್ತಾಗೆ ಹೋದರು, ಅಲ್ಲಿ ಅವರು ಅಲಿ ಅಕ್ಬರ್ ಖಾನ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿಯನ್ನು ಪ್ರಾರಂಭಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Sun, 26 May 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ