ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 26, 2024 | 10:11 PM

ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು.

ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ
ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ
Follow us on

ಮೈಸೂರು, ಮೇ.26: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸರೋದ್ ವಾದಕ ರಾಜೀವ್ ತಾರಾನಾಥ್(Rajeev Taranath)​ರವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರು ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು.

ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ

ಇನ್ನು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜೀವ್ ತಾರನಾಥ್ ಅವರ ಆರೋಗ್ಯದ ಕುರಿತು ವೈದ್ಯರು ಹಾಗೂ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದರು. ಮಹದೇವಪ್ಪಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಮತ್ತಿತರರು ಸಾಥ್​ ನೀಡಿದರು.

ಇದನ್ನೂ ಓದಿ:ತಾವು ಬಂದೊಡನೆ ಸುದ್ದಿಗೋಷ್ಟಿ ನಿಲ್ಲಿಸಿ ಎದ್ದುನಿಂತ ಸಚಿವ ಮಹದೇವಪ್ಪರನ್ನು ಸಿಎಂ ಸಿದ್ದರಾಮಯ್ಯ ನಯವಾಗಿ ಗದರಿದರು

ಸರೋದ್ ವಾದಕ ರಾಜೀವ್ ತಾರಾನಾಥ್ ಅವರು 1932 ಅಕ್ಟೋಬರ್ 17 ರಂದು ಬೆಂಗಳೂರಿನಲ್ಲಿ ಜನಿಸಿದರು. ಅವರು ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಗಾಯನ ಸಂಗೀತದಲ್ಲಿ ತಮ್ಮ ಆರಂಭಿಕ ತರಬೇತಿಯನ್ನು ಪಡೆದರು. ಒಂಬತ್ತು ವರ್ಷದವರಾಗಿದ್ದಾಗ ಅವರು ತಮ್ಮ ಮೊದಲ ಸಾರ್ವಜನಿಕ ಗಾಯನ ಪ್ರದರ್ಶನವನ್ನು ನೀಡಿದರು. ಇವರು ಸಾಹಿತ್ಯದಲ್ಲಿ ಪಿಎಚ್‌ಡಿ ಹೊಂದಿದ್ದರೂ, ಅವರು ತಮ್ಮ ವೃತ್ತಿಜೀವನವನ್ನು ತಿರುಚಿರಾಪಳ್ಳಿಯ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕ ಮತ್ತು ಇಂಗ್ಲಿಷ್ ಸಾಹಿತ್ಯದ ಮುಖ್ಯಸ್ಥರಾಗಿ ತ್ಯಜಿಸಲು ನಿರ್ಧರಿಸಿದರು. ನಂತರ ಅದನ್ನು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ತಿರುಚಿರಾಪಳ್ಳಿ ಎಂದು ಮರುನಾಮಕರಣ ಮಾಡಲಾಯಿತು. ತದನಂತರ ಕಲ್ಕತ್ತಾಗೆ ಹೋದರು, ಅಲ್ಲಿ ಅವರು ಅಲಿ ಅಕ್ಬರ್ ಖಾನ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿಯನ್ನು ಪ್ರಾರಂಭಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Sun, 26 May 24