AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS: ಜೆಡಿಎಸ್ ಜನತಾ ಜಲಧಾರೆಗೆ ಚಾಲನೆ; ನೀರಾವರಿ ವಿಚಾರದಲ್ಲಿ ನಮ್ಮ ಪರವಾಗಿ ಯಾರೂ ಇಲ್ಲ ಎಂದ ಹೆಚ್​ಡಿ ದೇವೇಗೌಡ

ಜೆಡಿಎಸ್ ಕಾರ್ಯಕ್ರಮಗಳನ್ನ ನೋಡಿ ಬಣ್ಣ ಕಟ್ಟುತ್ತಾರೆ. ನಮ್ಮ ಜತೆ ಬಿಜೆಪಿಯ ಯಾರಾದರೂ ಇಲ್ಲಿಗೆ ಬಂದಿದ್ದಾರಾ? ಸುಮ್ಮನೆ ಯಾರೊ ಏನೋ ಹೇಳುತ್ತಾರೆ, ಹೇಳಲಿ ಬಿಡಿ ಎಂದು ದೇವೇಗೌಡ ಹೇಳಿದ್ದಾರೆ.

JDS: ಜೆಡಿಎಸ್ ಜನತಾ ಜಲಧಾರೆಗೆ ಚಾಲನೆ; ನೀರಾವರಿ ವಿಚಾರದಲ್ಲಿ ನಮ್ಮ ಪರವಾಗಿ ಯಾರೂ ಇಲ್ಲ ಎಂದ ಹೆಚ್​ಡಿ ದೇವೇಗೌಡ
ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ
TV9 Web
| Updated By: ganapathi bhat|

Updated on:Apr 16, 2022 | 1:13 PM

Share

ಮೈಸೂರು: ನೀರಿನ ವಿಚಾರದಲ್ಲಿ ತಮಿಳುನಾಡಿನ ಪಕ್ಷಗಳು ಒಂದಾಗುತ್ತೆ. ಆದರೆ ಕರ್ನಾಟಕದಲ್ಲಿರುವ ಎಲ್ಲ ಪಕ್ಷಗಳು ಒಂದಾಗುವುದಿಲ್ಲ. ಮಹದಾಯಿ ಯೋಜನೆ ವಿಚಾರದಲ್ಲಿ ಸಾಕಷ್ಟು ನೋವಿದೆ. ಜಲಸಂಪನ್ಮೂಲ ಸಚಿವರು 3 ಬಾರಿ ಸಮಯ ಕೊಟ್ಟಿದ್ದರು. ಸಚಿವರನ್ನ ಭೇಟಿ ಮಾಡಲು ಮನೆಗೆ ಹೋದಾಗ ಚಕ್ಕರ್ ಆಗಿದ್ದರು ಎಂದು ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ‌ ಬೀಚನಹಳ್ಳಿಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ. ಬಿಜೆಪಿ- ಜೆಡಿಎಸ್ ಜತೆ ಚುನಾವಣಾ ಪೂರ್ವ ಮೈತ್ರಿ ವಿಚಾರವಾಗಿ ಅವರು ಮಾತನಾಡಿದ್ದಾರೆ. ಜೆಡಿಎಸ್ ಕಾರ್ಯಕ್ರಮಗಳನ್ನ ನೋಡಿ ಬಣ್ಣ ಕಟ್ಟುತ್ತಾರೆ. ನಮ್ಮ ಜತೆ ಬಿಜೆಪಿಯ ಯಾರಾದರೂ ಇಲ್ಲಿಗೆ ಬಂದಿದ್ದಾರಾ? ಸುಮ್ಮನೆ ಯಾರೊ ಏನೋ ಹೇಳುತ್ತಾರೆ, ಹೇಳಲಿ ಬಿಡಿ ಎಂದು ದೇವೇಗೌಡ ಹೇಳಿದ್ದಾರೆ.

BJP ಸರ್ಕಾರದ ವಿರುದ್ಧ ಶೇಕಡಾ 40 ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಅವರು ಇದು ನನಗೆ ಸಂಬಂಧವಿಲ್ಲ, ನನ್ನ ಮಗ PWD ಸಚಿವನಾಗಿದ್ದಾನಾ? ನನ್ನ ಮಗ ನೀರಾವರಿ ಸಚಿವ ಆಗಿದ್ದಾನಾ? ನನ್ನ ಮಗ ಸಚಿವನಾಗಿದ್ದಿದ್ರೆ ಕಮಿಷನ್ ಬಗ್ಗೆ ಮಾತನಾಡುತ್ತಿದ್ದೆ. ಸರ್ಕಾರದ ವಿರುದ್ಧ ಆರೋಪ ಮಾಡಿಕೊಳ್ಳಲಿ ಬಿಡಿ ನಮಗೇನು? ಎಂದು ಮೈಸೂರಿನ ಬೀಚನಹಳ್ಳಿಯಲ್ಲಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.

ಟ್ರಿಬ್ಯುನಲ್ ಆ್ಯಕ್ಟ್ ಬಗ್ಗೆ ಕಾಂಗ್ರೆಸ್‌ನವರು ಮಾತನಾಡಿಲ್ಲ. ಕಬಿನಿ ಡ್ಯಾಂ ಬಳಿ ಜೆಡಿಎಸ್ ಜನತಾ ಜಲಧಾರೆ ಕಾರ್ಯಕ್ರಮ ನಡೆಸಲಾಗುತ್ತಿದೆ. ನೀರಾವರಿ ವಿಚಾರದಲ್ಲಿ ನಮ್ಮ ಪರವಾಗಿ ಯಾರೂ ಇಲ್ಲ. ಕರ್ನಾಟಕದಲ್ಲಿ ನೀರಾವರಿ ವಿಚಾರದಲ್ಲಿ ವಂಚನೆಯಾಗಿದೆ. ಇದು ಒಂದು ಜಾತಿಯ ಪ್ರಶ್ನೆ ಅಲ್ಲ, ವ್ಯಕ್ತಿಯ ಪ್ರಶ್ನೆಯಲ್ಲ. ಇದು ಈ‌ ನಾಡಿನ ಜನರ ಪ್ರಶ್ನೆ ಆಗಿದೆ. ಕಬಿನಿ ಡ್ಯಾಂ ಕೆಲಸ ನಿಂತಿತ್ತು ಅನೇಕ ವಿಚಾರವಾಗಿ ಅಕ್ಷೇಪ ಇತ್ತು. ಆದರೆ ನಾನು ಅಂದು ಕಬಿನಿಗಾಗಿ ಹೋರಾಟ ಮಾಡಿದ್ದೆ. ನಾನೊಬ್ಬ ರೈತನಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ನನ್ನ ಕಾಲಿನಲ್ಲಿ ಶಕ್ತಿ ಇಲ್ಲದಿದ್ದರೂ ನನ್ನ ತಲೆಯಲ್ಲಿ ಶಕ್ತಿ ಇದೆ. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಕಬಿನಿ ಡ್ಯಾಂ ಬಳಿ ಜೆಡಿಎಸ್ ಜನತಾ ಜಲಧಾರೆ ಕಾರ್ಯಕ್ರಮ ನಡೆಸಲಾಗುತ್ತಿದ್ದು ಕಾರ್ಯಕ್ರಮವನ್ನು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಉದ್ಘಾಟಿಸಿದ್ದಾರೆ. ಕಬಿನಿ ಜಲಾಶಯದಿಂದಲೇ ಜನತಾ ಜಲಧಾರೆ ಯಾತ್ರೆ ಆರಂಭವಾಗಿದೆ. ರಾಜ್ಯದಲ್ಲಿರುವ ನೀರಿನ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ನನ್ನ ಶಕ್ತಿ ಮೀರಿ ನೀರಿಗಾಗಿ ಹೋರಾಟ ಮಾಡಿದ್ದೇನೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಭ್ರಷ್ಟಾಚಾರ ತುಂಬಿದೆ, ರಾಜಕಾರಣ ಹೇಳಲಾಗದಷ್ಟು ಕೆಟ್ಟಿದೆ

ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಬಗ್ಗೆ ಚರ್ಚೆ ವಿಚಾರವಾಗಿ ಅವರು ರಾಜಕಾರಣದಲ್ಲಿ ಈಗ ಯಾರು ಸತ್ಯವಂತರಿದ್ದಾರೆಂದು ಪ್ರಶ್ನೆ ಮಾಡಿದ್ದಾರೆ. ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪಿಸ್ತಾರೆ. ಕಾಂಗ್ರೆಸ್ ಸರ್ಕಾರ ಇದ್ದಾಗ 10% ಸರ್ಕಾರ ಎಂದಿದ್ದ ಪ್ರಧಾನಿ, ಆಗಲೂ ನಾನು ಆರೋಪ ಮಾಡಲಿಲ್ಲ. ಈಗಲೂ ಅಷ್ಟೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ಕೊಡಲ್ಲ. ಭ್ರಷ್ಟಾಚಾರ ತುಂಬಿದೆ, ರಾಜಕಾರಣ ಹೇಳಲಾಗದಷ್ಟು ಕೆಟ್ಟಿದೆ ಎಂದು ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: JDS: ಜನತಾ ಜಲಧಾರೆ -ಜಲ ಸಂಗ್ರಹಕ್ಕೆ ಹೊರಟ 15 ಗಂಗಾ ರಥಗಳನ್ನು ಬೀಳ್ಕೊಟ್ಟ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ

ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ಹೋರಾಟಕ್ಕೆ ಇಳಿದ ಕಾಂಗ್ರೆಸ್; 9 ತಂಡ ರಚಿಸಿ ರಾಜ್ಯಾದ್ಯಂತ ಹೋರಾಟ, ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ತಟ್ಟಲಿದೆ ಬಿಸಿ

Published On - 1:07 pm, Sat, 16 April 22

ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ