AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜುಡೇಶ್ವರನಿಗೆ ತುಲಾಭಾರ ಸೇವೆ: ತಮ್ಮ ಆರೋಗ್ಯಕ್ಕಾಗಿ ಕುಟುಂಬದ ಸದಸ್ಯರೊಬ್ಬರು ಹೊತ್ತಿದ್ದ ಹರಕೆ ತೀರಿಸಿದ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದರೊಂದಿಗೆ ಕುಟುಂಬದ ಸದಸ್ಯರೊಬ್ಬರು ಹೊತ್ತುಕೊಂಡಿದ್ದ ಹರಕೆಯನ್ನು ಕುಮಾರಸ್ವಾಮಿ ತೀರಿಸಿದ್ದಾರೆ.

ನಂಜುಡೇಶ್ವರನಿಗೆ ತುಲಾಭಾರ ಸೇವೆ: ತಮ್ಮ ಆರೋಗ್ಯಕ್ಕಾಗಿ ಕುಟುಂಬದ ಸದಸ್ಯರೊಬ್ಬರು ಹೊತ್ತಿದ್ದ ಹರಕೆ ತೀರಿಸಿದ ಕುಮಾರಸ್ವಾಮಿ
ಕುಮಾರಸ್ವಾಮಿ ಪೂಜೆ
TV9 Web
| Edited By: |

Updated on: Oct 16, 2023 | 3:42 PM

Share

ಮೈಸೂರು, (ಅಕ್ಟೋಬರ್ 16): ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ((HD Deve Gowda)ದಂಪತಿ ಕಳೆದ ಒಂದು ವಾರ ಅಷ್ಟೇ ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ (Kukke Subrahmanya Temple) ಭೇಟಿ ನೀಡಿದ್ದು, ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆ ನೆರವೇರಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ದಂಪತಿ ಇಂದು (ಅಕ್ಟೋಬರ್ 16) ನಂಜನಗೂಡಿಗೆ ಭೇಟಿ ನೀಡಿ ನಂಜುಡೇಶ್ವರನಿಗೆ (njundeshwara) ತುಲಾಭಾರಕ್ಕೆ ಪೂಜೆ ನೆರವೇರಿಸಿದ್ದಾರೆ. ಮೊದಲಿಗೆ ಹೆಚ್​ಡಿ ಕುಮಾರಸ್ವಾಮಿ ಅವತು ತಮ್ಮ ಕುಟುಂಬ ಸಮೇತವಾಗಿ ತುಲಾಭಾರಕ್ಕೆ ವಿಶೇಷ ಪೂಜೆ ಮಾಡಿದರು. ಬಳಿಕ ಅನಿತಾ ಕುಮಾರಸ್ವಾಮಿ ಅವರು ಬೆಲ್ಲದ ತುಲಾಭಾರ ಮಾಡಿಸಿದರು. ಪತ್ನಿ ನಂತರ ಕುಮಾರಸ್ವಾಮಿ ಅವರೂ ಸಹ ತುಲಾಭಾರ‌ ಸೇವೆ ಸಲ್ಲಿಸಿದರು.

ನಂಜುಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ನನ್ನ ಆರೋಗ್ಯ ಸಮಸ್ಯೆಯಿಂದ ಭಗವಂತ ಪಾರು ಮಾಡಿದ್ದಾನೆ. ನಾನು ಅನಾರೋಗ್ಯ ಸಮಸ್ಯೆಗೆ ಒಳಗಾದಾಗ ನನ್ನ ಕುಟುಂಬ ಸದಸ್ಯರೊಬ್ಬರು ನರಸಿಂಹಸ್ವಾಮಿ ನಂಜುಂಡೇಶ್ವರನಿಗೆ ಹರಕೆ ಹೊತ್ತುಕೊಂಡಿದ್ದರು. ಹೀಗಾಗಿ ಇಂದು ನಂಜುಂಡೇಶ್ವರನಿಗೆ ತುಲಾಭಾರ ಮಾಡಿಸಿದ್ದೇವೆ. ನಾಡಿಗೆ ಒಳ್ಳೆಯ ದಿನಗಳು‌ ಬರಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದಂಪತಿ ಭೇಟಿ -ನಾಗಪ್ರತಿಷ್ಠೆ, ತುಲಾಭಾರ

ಲೈಟ್ ಆಗಿ ಪಾರ್ಶ್ವವಾಯುಗೆ ತುತ್ತಾಗಿದ್ದ ಕುಮಾರಸ್ವಾಮಿ ಅವರು ಮೂರ್ನಾಲ್ಕು ದಿನಗಳ ವರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಮಾತನಾಡಿ, ನನಗೆ ಪುನರ್ಜನ್ಮ ಸಿಕ್ಕಿದೆ. ದೇವರು, ವೈದ್ಯರು, ತಂದೆ ತಾಯಿಗಳ ಆಶೀರ್ವಾದವೇ ಇದಕ್ಕೆ ಕಾರಣ. ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ನನಗೆ ಪುನರ್ಜನ್ಮ ಸಿಕ್ಕಿದೆ ಎಂದು ಹೇಳಿದ್ದರು.

ದೇವೇಗೌಡ ಅವರ ಕುಟುಂಬ ನಂಜನಗೂಡಿನ ನಂಜುಂಡೇಶ್ವರನ ಮೇಲೆ ಬಹಳ ಭಕ್ತಿ ಇಟ್ಟುಕೊಂಡಿದೆ. ಇದರಕ್ಕೆ ಪೂರಕವೆಂಬಂತೆ ದೇವೇಗೌಡ ಅವರು ಈ ಹಿಂದೆ ಅಂದರೆ 2022 ಡಿಸೆಂಬರ್​ನಲ್ಲಿ ಶ್ರೀಕಂಠೇಶ್ವರ ಸ್ವಾಮಿ ರುದ್ರಾಭಿಷೇಕ, ತುಲಾಭಾರ ಸೇವೆ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ