AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 11 ಶಸ್ತ್ರಚಿಕಿತ್ಸೆ: ಯುವತಿ ಸ್ಥಿತಿ ಕಂಡು ಮರುಗಿದ ಕುಮಾರಸ್ವಾಮಿ: ಮನೆಗೆ ಹೋಗಿ ಸಹಾಯ ಹಸ್ತ

ಮೈಸೂರು ಜಿಲ್ಲೆ ನಂಜನಗೂಡಿನ ಪೂಜಾ ಕುಟುಂಬಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಸರೆಯಾಗಿದ್ದಾರೆ. ಕಾಲು ಕಳೆದುಕೊಂಡ ಪೂಜಾ ಹಾಗೂ ಪತಿಯ ಅಪಘಾತದಿಂದ ಸಂಕಷ್ಟದಲ್ಲಿದ್ದ ಇವರಿಗೆ ಕುಮಾರಸ್ವಾಮಿ ಆರ್ಥಿಕ ನೆರವು ನೀಡಿದ್ದಾರೆ. ಸದ್ಯ ಕೇಂದ್ರ ಸಚಿವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬರೋಬ್ಬರಿ 11 ಶಸ್ತ್ರಚಿಕಿತ್ಸೆ: ಯುವತಿ ಸ್ಥಿತಿ ಕಂಡು ಮರುಗಿದ ಕುಮಾರಸ್ವಾಮಿ: ಮನೆಗೆ ಹೋಗಿ ಸಹಾಯ ಹಸ್ತ
ಪೂಜಾ ಮನೆಗೆ ಹೆಚ್​​​ಡಿ ಕುಮಾರಸ್ವಾಮಿ ಭೇಟಿ Image Credit source: tv9 kannada
ರಾಮ್​, ಮೈಸೂರು
| Edited By: |

Updated on: Apr 10, 2026 | 9:31 PM

Share

ಮೈಸೂರು, ಏಪ್ರಿಲ್ 10: ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ, ಇತ್ತ ಕೈಯಲ್ಲಿ ಹಣವಿದಲ್ಲ ಸ್ಥಿತಿ. ಈ ಕಣ್ಣೀರಿನ ಕಥೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಇಂದು ಆ ಬಡ ಕುಟುಂಬಕ್ಕೆ ಸಾಕ್ಷಾತ್ ದೇವರಾಗಿ ಬಂದಿದ್ದರು. ಹಳೆಯ ಲೀಸ್ ಹಣ ತೀರಿಸುವ ಭರವಸೆ ಜೊತೆಗೆ, ಮನೆಯ ಮಗನಂತೆ ಆ ಕುಟುಂಬಕ್ಕೆ ಧೈರ್ಯ ತುಂಬಿದರು.

ಬರೋಬ್ಬರಿ 11 ಶಸ್ತ್ರಚಿಕಿತ್ಸೆ

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ 24 ವರ್ಷದ ಪೂಜಾ ಮಾರಕ ಕಾಯಿಲೆಗೆ ತುತ್ತಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಲ್ಲಿಯೇ ನೆಲೆಸಿರುವ ಈ ಕುಟುಂಬಕ್ಕೆ ವಿಧಿ ಒಂದಾದ ಮೇಲೊಂದರಂತೆ ಕಷ್ಟಗಳನ್ನ ನೀಡಿದೆ. ಮಾರಕ ಕಾಯಿಲೆಗೆ ತುತ್ತಾದ ಪೂಜಾ, ಬರೋಬ್ಬರಿ 11 ಶಸ್ತ್ರಚಿಕಿತ್ಸೆಗಳನ್ನ ಎದುರಿಸಿದ್ದಾರೆ. ಅಂತಿಮವಾಗಿ ತನ್ನ ಎರಡೂ ಕಾಲುಗಳನ್ನೇ ಕಳೆದುಕೊಂಡು ಇಂದು ಹಾಸಿಗೆ ಹಿಡಿದಿದ್ದಾರೆ.

ನನ್ನ ಸಂಕಷ್ಟವನ್ನ ಕುಮಾರಣ್ಣನಿಗೆ ತಲುಪಿಸಿ

ಪೂಜಾಗೆ ಗಾಯದ ಮೇಲೆ ಬರೆ ಎಳೆದಂತೆ ಪತಿ ರವಿ ಕೂಡ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುಟ್ಟ ಮಕ್ಕಳನ್ನ ಕಟ್ಟಿಕೊಂಡು ಜೀವನ ನಡೆಸಲು ದಾರಿಯೇ ಇಲ್ಲದಂತಾದಾಗ, ಪೂಜಾ ಮನವಿ ಮಾಡಿದ್ದು ಕುಮಾರಣ್ಣನಿಗೆ. “ನನ್ನ ಸಂಕಷ್ಟವನ್ನ ಹೇಗಾದರೂ ಮಾಡಿ ಅವರಿಗೆ ತಲುಪಿಸಿ” ಎಂದು ಬೇಡಿಕೊಂಡಿದ್ದರು. ಪೂಜಾರ ಕೂಗು ಕುಮಾರಸ್ವಾಮಿ ಅವರಿಗೆ ತಲುಪಿದೆ. ಹಾಗಾಗಿ ಇಂದು ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು, ನೇರವಾಗಿ ಪೂಜಾರ ಮನೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಹಾಸಿಗೆಯಲ್ಲಿ ಮಲಗಿದ್ದ ಪೂಜಾರನ್ನ ಕಂಡು ಮರುಗಿದ ಹೆಚ್​​ಡಿ ಕುಮಾರಸ್ವಾಮಿ, ಕುಟುಂಬದ ಪರಿಸ್ಥಿತಿಯನ್ನ ಆಲಿಸಿದರು. ಪೂಜಾ ತಂದೆ ಕುಮಾರ ಮತ್ತು ತಾಯಿ ಶೀಲಾರಿಗೆ ಧೈರ್ಯ ತುಂಬಿದರು. ಸ್ಥಳದಲ್ಲೇ ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಅಷ್ಟೇ ಅಲ್ಲ, ಕುಟುಂಬದ ದೊಡ್ಡ ತಲೆನೋವಾಗಿದ್ದ ಮನೆಯ ಲೀಸ್ ಹಣವನ್ನ ತಾವೇ ಪಾವತಿಸುವುದಾಗಿ ಭರವಸೆ ನೀಡುವ ಮೂಲಕ ಕುಟುಂಬಕ್ಕೆ ಆಸರೆಯಾದರು. ಪತಿ ರವಿ ಅಪಘಾತದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಜೊತೆ ಚರ್ಚಿಸಿ ಸೂಕ್ತ ಪರಿಹಾರ ಕೊಡಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಇನ್ನು ಈ ವೇಳೆ ಹೆಚ್​ಡಿ ಕುಮಾರಸ್ವಾಮಿಗೆ ಶಾಸಕ ಹರೀಶ್ ಗೌಡ, ಎಂಎಲ್‌ಸಿ ಮಂಜೇಗೌಡ ಸೇರಿದಂತೆ ಜೆಡಿಎಸ್ ಪ್ರಮುಖ ಮುಖಂಡರು ಸಾಥ್ ನೀಡಿದರು. ಒಟ್ಟಿನಲ್ಲಿ, ರಾಜಕೀಯ ಜಂಜಾಟಗಳ ನಡುವೆಯೂ ಕೇಂದ್ರ ಸಚಿವರು ತೋರಿದ ಈ ಮಾನವೀಯತೆ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಧಿಯ ಆಟಕ್ಕೆ ಸೋತಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೀಡಿದ ಭರವಸೆ ಹೊಸ ಜೀವನದ ಕಿರಣ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?