AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿದ್ದಾಗಲೇ, ಪಕ್ಷದ ಚಟುವಟಿಕೆಗಳಲ್ಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಪ್ರಜ್ವಲ್: ಹೆಚ್​ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲೇ ನನ್ನ ಜತೆ ಸಂಪರ್ಕದಲ್ಲಿರದ ಪ್ರಜ್ವಲ್ ರೇವಣ್ಣ ಈಗ ವಿದೇಶದಲ್ಲಿರುವಾಗ ಸಂಪರ್ಕದಲ್ಲಿರುತ್ತಾನೆಯೇ? ಹೀಗೆಂದು ಮಾಧ್ಯಮಗಳಿಗೇ ಮರು ಪ್ರಶ್ನೆ ಹಾಕಿದ್ದಾರೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ. ಪ್ರಜ್ವಲ್ ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯ ನಡೆಯನ್ನು ಪ್ರಶ್ನಿಸಿರುವ ಅವರು, ಎಸ್ಐಟಿ ಅನವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿದ್ದಾಗಲೇ, ಪಕ್ಷದ ಚಟುವಟಿಕೆಗಳಲ್ಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಪ್ರಜ್ವಲ್: ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ರಾಮ್​, ಮೈಸೂರು
| Edited By: |

Updated on: May 16, 2024 | 1:53 PM

Share

ಮೈಸೂರು, ಮೇ 16: ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ನನ್ನ ಸಂಪರ್ಕದಲ್ಲಿ ಇಲ್ಲ. ಆತ ಮೊದಲಿನಿಂದಲೂ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲಿಯೂ ನನ್ನ ಸಂಪರ್ಕದಲ್ಲಿ ಇರಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ರಾಜ್ಯದಲ್ಲಿದ್ದಾಗಲೇ ನನ್ನ ಸಂಪರ್ಕದಲ್ಲಿರದ ಪ್ರಜ್ವಲ್ ವಿದೇಶದಲ್ಲಿರುವಾಗ ಹೇಗೆ ನನ್ನ ಜೊತೆ ಸಂಪರ್ಕದಲ್ಲಿರುತ್ತಾನೆ ಎಂದು ಪ್ರಶ್ನಿಸಿದರು.

ಇನ್ನು ಪ್ರಜ್ವಲ್ ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯ ನಡೆಯನ್ನು ಪ್ರಶ್ನಿಸಿರುವ ಅವರು, ಎಸ್ಐಟಿ ಅನವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ದೇವೇರಾಜೇಗೌಡರನ್ನು ಪ್ರಕರಣ ದಾಖಲಾಗಿ ಒಂದು ತಿಂಗಳ ನಂತರ ಬಂಧಿಸಿದ್ದು ಯಾಕೆ? ಎಸ್ಐಟಿಯವರಿಗೆ ದೇವೇರಾಜೇಗೌಡರಿಂದ ಏನು ಮಾಹಿತಿ ಬೇಕಿದೆ? ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಮಾಹಿತಿನಾ? ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿನಾ? ಈ ಪ್ರಕರಣದ ಆಡಿಯೋ ತುಣುಕು ಬಿಡುಗಡೆಯಾಗಿತ್ತಲ್ಲ ಅದರ ಮಾಹಿತಿನಾ? ಏತಕ್ಕಾಗಿ ಎಸ್ಐಟಿ ನಾಲ್ಕು ದಿನದಿಂದ ವಶಕ್ಕೆ ಪಡೆದುಕೊಂಡು ಇಟ್ಟುಕೊಂಡಿದೆ ಎಂದು ಅವರು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಎರಡು ಭಾಗ ಇದೆ. ಒಂದು ವಿಡಿಯೋ ಮಾಡಿಕೊಂಡವನ ಅಪರಾಧ. ಮತ್ತೊಂದು ಆ ವಿಡಿಯೋವನ್ನು ವೈರಲ್ ಮಾಡಿ ಕುಟುಂಬಗಳನ್ನು ಬೀದಿಗೆ ತಂದವರದ್ದು. ಇದು ಕೂಡ ಘೋರ ಅಪರಾಧ. ಆದರೆ ಎಸ್ಐಟಿ ವೈರಲ್ ಮಾಡಿದವರನ್ನು ಬಂಧಿಸುವಲ್ಲಿ ವಿಫಲವಾಗಿದೆ. ಆರೋಪಿ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡುತ್ತಾನೆ. ಆದರೆ ಎಸ್ಐಟಿಗೆ ಸಿಗುತ್ತಿಲ್ಲ ಅಂದರೆ ಏನು ಅರ್ಥ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಎಸ್ಐಟಿ ಸೂಕ್ತವಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದರು.

ದೇವರಾಜೇಗೌಡ ಪೊಲೀಸ್ ಕಸ್ಟಡಿ ವಿಸ್ತರಣೆ

ಮತ್ತೊಂದೆಡೆ, ಅತ್ಯಾಚಾರ ಆರೋಪ ಕೇಸ್​ನಲ್ಲಿ ಬಂಧನಕ್ಕೊಳಗಾಗಿರುವ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿ ಒಂದು ದಿನದ ಮಟ್ಟಿಗೆ ವಿಸ್ತರಣೆಯಾಗಿದೆ. ದೇವರಾಜೇಗೌಡರನ್ನು ಮೇ 14ರಂದು ಹೊಳೆನರಸೀಪುರ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ಇಂದು ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು

ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ ಮತ್ತೆ ನಾಳೆ, ಅಂದ್ರೆ ಶುಕ್ರವಾರ ಹಾಜರುಪಡಿಸಲು ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ