AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಅಭಿವೃದ್ಧಿಗೆ ಜಮೀರ್ ಅಹ್ಮದ್ ಕೊಡುಗೆ ಏನು? ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ

ಬಿ.ಎಂ.ಫಾರೂಕ್ರನ್ನ ಚುನಾವಣೆಗೆ ನಿಲ್ಲಿಸಿ ಕತ್ತು ಕೊಯ್ದಿದ್ಯಾರು? ಬಿ.ಎಂ.ಫಾರೂಕ್ ವಿರುದ್ಧ ರಾಮಸ್ವಾಮಿಗೆ ಮತ ಹಾಕಿದ್ಯಾರು? ಇವರಿಂದ ಮುಸಲ್ಮಾನರು ಉದ್ಧಾರ ಆಗಿದ್ದಾರಾ? ಎಂದು ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮುಸ್ಲಿಮರ ಅಭಿವೃದ್ಧಿಗೆ ಜಮೀರ್ ಅಹ್ಮದ್ ಕೊಡುಗೆ ಏನು? ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ
ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್
TV9 Web
| Edited By: |

Updated on:Oct 25, 2021 | 11:53 AM

Share

ಮೈಸೂರು: ಬ್ರದರ್ ಬ್ರದರ್ ಎಂದು ಮುಸಲ್ಮಾನರ ಕತ್ತು ಕೋಯ್ತಾರೆ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಬಿ.ಎಂ.ಫಾರೂಕ್ರನ್ನ ಚುನಾವಣೆಗೆ ನಿಲ್ಲಿಸಿ ಕತ್ತು ಕೊಯ್ದಿದ್ಯಾರು? ಬಿ.ಎಂ.ಫಾರೂಕ್ ವಿರುದ್ಧ ರಾಮಸ್ವಾಮಿಗೆ ಮತ ಹಾಕಿದ್ಯಾರು? ಇವರಿಂದ ಮುಸಲ್ಮಾನರು ಉದ್ಧಾರ ಆಗಿದ್ದಾರಾ? ಎಂದು ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹೋಗಲಿ ರಾಮಸ್ವಾಮಿಯವರನ್ನಾದ್ರೂ ಉಳಿಸಿಕೊಂಡಿದ್ದಾರಾ? ಇವರಿಂದ ನಾವು ಕಲಿಯುವುದು ಏನೇನೂ ಇಲ್ಲ. ಇವರೆಲ್ಲಾ ಚುನಾವಣೆ ಉದ್ದಕ್ಕೂ ಹೀಗೆ ಮಾತನಾಡುತ್ತಿರಲಿ. ನನಗೆ ಒಳ್ಳೆಯದು, ನಾನೂ ಅದನ್ನೇ ಆಶಿಸುತ್ತೇನೆ ಎಂದು ಮೈಸೂರಿನಲ್ಲಿ ಟೀಕಿಸಿದ್ದಾರೆ.

ಸಿದ್ದರಾಮಯ್ಯರಿಂದ ಪ್ರತಿ ಸಭೆಯಲ್ಲಿ ನನ್ನ ವಿರುದ್ಧ ಆರೋಪವಾಗಿದೆ ಇನ್ನು ಸಿದ್ದರಾಮಯ್ಯ & ಟೀಂ ಸಿಂದಗಿಯಲ್ಲಿ ಕುಳಿತದ್ದೇ ಜೆಡಿಎಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸಲು ಎಂದು ಮೈಸೂರಿನಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಸಿಂದಗಿಯಲ್ಲಿ ಸ್ಪರ್ಧೆ ಇರುವುದೇ ಜೆಡಿಎಸ್, ಬಿಜೆಪಿ ಮಧ್ಯೆ. ಆದ್ರೂ ಕಾಂಗ್ರೆಸ್‌ನವರು ಯಾಕೆ ಅಲ್ಲಿ ಬೀಡುಬಿಟ್ಟಿದ್ದಾರೆ. ಅವರ ಉದ್ದೇಶ ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸುವುದು ಎಂದಿದ್ದಾರೆ.

ಸಿದ್ದರಾಮಯ್ಯರಿಂದ ಪ್ರತಿ ಸಭೆಯಲ್ಲಿ ನನ್ನ ವಿರುದ್ಧ ಆರೋಪವಾಗಿದೆ. ಹೊಲ ಉಳುಮೆ ಮಾಡಿದ್ದಾನಾ? ಎಂದು ಆರೋಪ ಮಾಡ್ತಾರೆ. ನಿಜವಾದ ರೈತ ನಾನು, ಕುರಿಮಂದೆ ಮಧ್ಯೆ ಊಟ ಮಾಡಿ‌ದ್ದೇನೆ. ಕೃಷಿಕನೋ ಅಲ್ಲವೋ ಅಂತ ಬಿಡದಿ ತೋಟಕ್ಕೆ ಬಂದು ನೋಡಲಿ. ಸಿದ್ದರಾಮಯ್ಯ ಎಲ್ಲಿ ಹೊಲ ಉಳುಮೆ ಮಾಡಿದ್ದಾರೆ. ಅವರದ್ದು ಫಾರ್ಮ್‌ಹೌಸ್ ಇದ್ಯಲ್ಲ, ಅಲ್ಲಿ ಏನು ಬಿತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಲ್ಪನೆ ವಿಪರೀತ, ಅದಕ್ಕೆ ಯಾವುದೇ ಆಧಾರವಿಲ್ಲ; ಜಮೀರ್ ಆರೋಪಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Published On - 11:47 am, Mon, 25 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ