AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಅಭಿವೃದ್ಧಿಗೆ ಜಮೀರ್ ಅಹ್ಮದ್ ಕೊಡುಗೆ ಏನು? ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ

ಬಿ.ಎಂ.ಫಾರೂಕ್ರನ್ನ ಚುನಾವಣೆಗೆ ನಿಲ್ಲಿಸಿ ಕತ್ತು ಕೊಯ್ದಿದ್ಯಾರು? ಬಿ.ಎಂ.ಫಾರೂಕ್ ವಿರುದ್ಧ ರಾಮಸ್ವಾಮಿಗೆ ಮತ ಹಾಕಿದ್ಯಾರು? ಇವರಿಂದ ಮುಸಲ್ಮಾನರು ಉದ್ಧಾರ ಆಗಿದ್ದಾರಾ? ಎಂದು ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮುಸ್ಲಿಮರ ಅಭಿವೃದ್ಧಿಗೆ ಜಮೀರ್ ಅಹ್ಮದ್ ಕೊಡುಗೆ ಏನು? ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ
ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್
TV9 Web
| Edited By: |

Updated on:Oct 25, 2021 | 11:53 AM

Share

ಮೈಸೂರು: ಬ್ರದರ್ ಬ್ರದರ್ ಎಂದು ಮುಸಲ್ಮಾನರ ಕತ್ತು ಕೋಯ್ತಾರೆ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಬಿ.ಎಂ.ಫಾರೂಕ್ರನ್ನ ಚುನಾವಣೆಗೆ ನಿಲ್ಲಿಸಿ ಕತ್ತು ಕೊಯ್ದಿದ್ಯಾರು? ಬಿ.ಎಂ.ಫಾರೂಕ್ ವಿರುದ್ಧ ರಾಮಸ್ವಾಮಿಗೆ ಮತ ಹಾಕಿದ್ಯಾರು? ಇವರಿಂದ ಮುಸಲ್ಮಾನರು ಉದ್ಧಾರ ಆಗಿದ್ದಾರಾ? ಎಂದು ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹೋಗಲಿ ರಾಮಸ್ವಾಮಿಯವರನ್ನಾದ್ರೂ ಉಳಿಸಿಕೊಂಡಿದ್ದಾರಾ? ಇವರಿಂದ ನಾವು ಕಲಿಯುವುದು ಏನೇನೂ ಇಲ್ಲ. ಇವರೆಲ್ಲಾ ಚುನಾವಣೆ ಉದ್ದಕ್ಕೂ ಹೀಗೆ ಮಾತನಾಡುತ್ತಿರಲಿ. ನನಗೆ ಒಳ್ಳೆಯದು, ನಾನೂ ಅದನ್ನೇ ಆಶಿಸುತ್ತೇನೆ ಎಂದು ಮೈಸೂರಿನಲ್ಲಿ ಟೀಕಿಸಿದ್ದಾರೆ.

ಸಿದ್ದರಾಮಯ್ಯರಿಂದ ಪ್ರತಿ ಸಭೆಯಲ್ಲಿ ನನ್ನ ವಿರುದ್ಧ ಆರೋಪವಾಗಿದೆ ಇನ್ನು ಸಿದ್ದರಾಮಯ್ಯ & ಟೀಂ ಸಿಂದಗಿಯಲ್ಲಿ ಕುಳಿತದ್ದೇ ಜೆಡಿಎಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸಲು ಎಂದು ಮೈಸೂರಿನಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಸಿಂದಗಿಯಲ್ಲಿ ಸ್ಪರ್ಧೆ ಇರುವುದೇ ಜೆಡಿಎಸ್, ಬಿಜೆಪಿ ಮಧ್ಯೆ. ಆದ್ರೂ ಕಾಂಗ್ರೆಸ್‌ನವರು ಯಾಕೆ ಅಲ್ಲಿ ಬೀಡುಬಿಟ್ಟಿದ್ದಾರೆ. ಅವರ ಉದ್ದೇಶ ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸುವುದು ಎಂದಿದ್ದಾರೆ.

ಸಿದ್ದರಾಮಯ್ಯರಿಂದ ಪ್ರತಿ ಸಭೆಯಲ್ಲಿ ನನ್ನ ವಿರುದ್ಧ ಆರೋಪವಾಗಿದೆ. ಹೊಲ ಉಳುಮೆ ಮಾಡಿದ್ದಾನಾ? ಎಂದು ಆರೋಪ ಮಾಡ್ತಾರೆ. ನಿಜವಾದ ರೈತ ನಾನು, ಕುರಿಮಂದೆ ಮಧ್ಯೆ ಊಟ ಮಾಡಿ‌ದ್ದೇನೆ. ಕೃಷಿಕನೋ ಅಲ್ಲವೋ ಅಂತ ಬಿಡದಿ ತೋಟಕ್ಕೆ ಬಂದು ನೋಡಲಿ. ಸಿದ್ದರಾಮಯ್ಯ ಎಲ್ಲಿ ಹೊಲ ಉಳುಮೆ ಮಾಡಿದ್ದಾರೆ. ಅವರದ್ದು ಫಾರ್ಮ್‌ಹೌಸ್ ಇದ್ಯಲ್ಲ, ಅಲ್ಲಿ ಏನು ಬಿತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಲ್ಪನೆ ವಿಪರೀತ, ಅದಕ್ಕೆ ಯಾವುದೇ ಆಧಾರವಿಲ್ಲ; ಜಮೀರ್ ಆರೋಪಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Published On - 11:47 am, Mon, 25 October 21

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ