AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಅಭಿವೃದ್ಧಿಗೆ ಜಮೀರ್ ಅಹ್ಮದ್ ಕೊಡುಗೆ ಏನು? ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ

ಬಿ.ಎಂ.ಫಾರೂಕ್ರನ್ನ ಚುನಾವಣೆಗೆ ನಿಲ್ಲಿಸಿ ಕತ್ತು ಕೊಯ್ದಿದ್ಯಾರು? ಬಿ.ಎಂ.ಫಾರೂಕ್ ವಿರುದ್ಧ ರಾಮಸ್ವಾಮಿಗೆ ಮತ ಹಾಕಿದ್ಯಾರು? ಇವರಿಂದ ಮುಸಲ್ಮಾನರು ಉದ್ಧಾರ ಆಗಿದ್ದಾರಾ? ಎಂದು ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮುಸ್ಲಿಮರ ಅಭಿವೃದ್ಧಿಗೆ ಜಮೀರ್ ಅಹ್ಮದ್ ಕೊಡುಗೆ ಏನು? ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ
ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್
TV9 Web
| Edited By: ಆಯೇಷಾ ಬಾನು|

Updated on:Oct 25, 2021 | 11:53 AM

Share

ಮೈಸೂರು: ಬ್ರದರ್ ಬ್ರದರ್ ಎಂದು ಮುಸಲ್ಮಾನರ ಕತ್ತು ಕೋಯ್ತಾರೆ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಬಿ.ಎಂ.ಫಾರೂಕ್ರನ್ನ ಚುನಾವಣೆಗೆ ನಿಲ್ಲಿಸಿ ಕತ್ತು ಕೊಯ್ದಿದ್ಯಾರು? ಬಿ.ಎಂ.ಫಾರೂಕ್ ವಿರುದ್ಧ ರಾಮಸ್ವಾಮಿಗೆ ಮತ ಹಾಕಿದ್ಯಾರು? ಇವರಿಂದ ಮುಸಲ್ಮಾನರು ಉದ್ಧಾರ ಆಗಿದ್ದಾರಾ? ಎಂದು ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹೋಗಲಿ ರಾಮಸ್ವಾಮಿಯವರನ್ನಾದ್ರೂ ಉಳಿಸಿಕೊಂಡಿದ್ದಾರಾ? ಇವರಿಂದ ನಾವು ಕಲಿಯುವುದು ಏನೇನೂ ಇಲ್ಲ. ಇವರೆಲ್ಲಾ ಚುನಾವಣೆ ಉದ್ದಕ್ಕೂ ಹೀಗೆ ಮಾತನಾಡುತ್ತಿರಲಿ. ನನಗೆ ಒಳ್ಳೆಯದು, ನಾನೂ ಅದನ್ನೇ ಆಶಿಸುತ್ತೇನೆ ಎಂದು ಮೈಸೂರಿನಲ್ಲಿ ಟೀಕಿಸಿದ್ದಾರೆ.

ಸಿದ್ದರಾಮಯ್ಯರಿಂದ ಪ್ರತಿ ಸಭೆಯಲ್ಲಿ ನನ್ನ ವಿರುದ್ಧ ಆರೋಪವಾಗಿದೆ ಇನ್ನು ಸಿದ್ದರಾಮಯ್ಯ & ಟೀಂ ಸಿಂದಗಿಯಲ್ಲಿ ಕುಳಿತದ್ದೇ ಜೆಡಿಎಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸಲು ಎಂದು ಮೈಸೂರಿನಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಸಿಂದಗಿಯಲ್ಲಿ ಸ್ಪರ್ಧೆ ಇರುವುದೇ ಜೆಡಿಎಸ್, ಬಿಜೆಪಿ ಮಧ್ಯೆ. ಆದ್ರೂ ಕಾಂಗ್ರೆಸ್‌ನವರು ಯಾಕೆ ಅಲ್ಲಿ ಬೀಡುಬಿಟ್ಟಿದ್ದಾರೆ. ಅವರ ಉದ್ದೇಶ ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸುವುದು ಎಂದಿದ್ದಾರೆ.

ಸಿದ್ದರಾಮಯ್ಯರಿಂದ ಪ್ರತಿ ಸಭೆಯಲ್ಲಿ ನನ್ನ ವಿರುದ್ಧ ಆರೋಪವಾಗಿದೆ. ಹೊಲ ಉಳುಮೆ ಮಾಡಿದ್ದಾನಾ? ಎಂದು ಆರೋಪ ಮಾಡ್ತಾರೆ. ನಿಜವಾದ ರೈತ ನಾನು, ಕುರಿಮಂದೆ ಮಧ್ಯೆ ಊಟ ಮಾಡಿ‌ದ್ದೇನೆ. ಕೃಷಿಕನೋ ಅಲ್ಲವೋ ಅಂತ ಬಿಡದಿ ತೋಟಕ್ಕೆ ಬಂದು ನೋಡಲಿ. ಸಿದ್ದರಾಮಯ್ಯ ಎಲ್ಲಿ ಹೊಲ ಉಳುಮೆ ಮಾಡಿದ್ದಾರೆ. ಅವರದ್ದು ಫಾರ್ಮ್‌ಹೌಸ್ ಇದ್ಯಲ್ಲ, ಅಲ್ಲಿ ಏನು ಬಿತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಲ್ಪನೆ ವಿಪರೀತ, ಅದಕ್ಕೆ ಯಾವುದೇ ಆಧಾರವಿಲ್ಲ; ಜಮೀರ್ ಆರೋಪಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Published On - 11:47 am, Mon, 25 October 21

Follow Us
Web contact
Web contact

TV9 Kannada

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!