AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಓರ್ವ ಮಹಿಳೆಗೆ ಗಂಭೀರ ಗಾಯ

ಮೈಸೂರು ಜಿಲ್ಲೆಯ ಹೆಚ್​.ಡಿ ಕೋಟೆ(H.D Kote) ತಾಲೂಕಿನ ದೇವಲಾಪುರ ಬಳಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಮೈಸೂರು: ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಓರ್ವ ಮಹಿಳೆಗೆ ಗಂಭೀರ ಗಾಯ
ಹೆಚ್​ಡಿ ಕೋಟೆ ಸಮೀಪ ಬೈಕ್​ಗಳ ನಡುವೆ ಅಪಘಾತ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 10, 2023 | 5:16 PM

Share

ಮೈಸೂರು, ಆ.10: ಎರಡು ಬೈಕ್(Bike)​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೆಚ್​.ಡಿ ಕೋಟೆ(H.D Kote) ತಾಲೂಕಿನ ದೇವಲಾಪುರ ಬಳಿ ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ದೇವೇಶ್​, ಪ್ರಕಾಶ್ ಮೃತ ರ್ದುದೈವಿಗಳು. ಇನ್ನು ಘಟನೆಯಲ್ಲಿ ಗಂಭೀರ ಗಾಯಗೊಂಡ ಶ್ರುತಿ ಎಂಬ ಮಹಿಳೆಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟಣೆ ಕುರಿತು ಸರಗೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್​ಗೆ ಕ್ಯಾಂಟರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಬಳಿ ಬೈಕ್​ಗೆ ಕ್ಯಾಂಟರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಚಿಕ್ಕಜಾಲ ಬಳಿಯ ವಿದ್ಯಾನಗರ ನಿವಾಸಿ ಅಂಬರೀಶ್ ಮೃತ ರ್ದುದೈವಿ. ಇತ ದೊಡ್ಡಬಳ್ಳಾಪುರ‌ ಕಡೆಯಿಂದ ಯಲಹಂಕ ಬರುತ್ತಿದ್ದ ವೇಳೆ‌ ಈ ದುರ್ಘಟನೆ ನಡೆದಿದೆ. ಈ ಕುರಿತು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೆಲಮಂಗಲ: ಪತ್ನಿಯನ್ನು ಗ್ರಾಪ ಪಂಚಾಯಿತಿ ಅಧ್ಯಕ್ಷೆಯಾಗಿಸುವ ಕಸರತ್ತು ನಡೆಸಿದ್ದ ಪತಿ ಗುರಿ ಈಡೇರುವ ಮೊದಲೇ ರಸ್ತೆ ಅಪಘಾತಕ್ಕೆ ಬಲಿ!

ಕದಂಬ ನೌಕಾನೆಲೆಯ ತೇಜ್ ಹೆಸರಿನ ಟಗ್ ಬೋಟ್​ನ ಇಂಜಿನ್​ನಲ್ಲಿ ಬೆಂಕಿ

ಉತ್ತರ ಕನ್ನಡ: ಕಾರವಾರ ಕದಂಬ ನೌಕಾನೆಲೆಯ ಡಾಕ್ ಯಾರ್ಡ್​ಗೆ ಎಳೆತರಲು ಉಪಯೋಗಿಸುವ ಟಗ್ ಬೋಟ್​ನ ಇಂಜಿನ್​ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಕುರಿತು ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಈ ಟಗ್​ ಬೋಟ್​ಗಳನ್ನು ನೌಕಾ ಹಡಗುಗಳನ್ನು ಎಳೆದು ತರಲು ಉಪಯೋಗಿಸಲಾಗುತ್ತದೆ. ಅದರಂತೆ ಯುದ್ದ ಹಡಗನ್ನು ಎಳೆದು ತರಲು ಹೋದಾಗ ಟಗ್​ ಬೋಟ್​ ಇಂಜಿನ್​ನಲ್ಲಿ ಬೆಂಕಿ ತಗುಲಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ