ಮೈಸೂರು: ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಓರ್ವ ಮಹಿಳೆಗೆ ಗಂಭೀರ ಗಾಯ

ಮೈಸೂರು ಜಿಲ್ಲೆಯ ಹೆಚ್​.ಡಿ ಕೋಟೆ(H.D Kote) ತಾಲೂಕಿನ ದೇವಲಾಪುರ ಬಳಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಮೈಸೂರು: ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಓರ್ವ ಮಹಿಳೆಗೆ ಗಂಭೀರ ಗಾಯ
ಹೆಚ್​ಡಿ ಕೋಟೆ ಸಮೀಪ ಬೈಕ್​ಗಳ ನಡುವೆ ಅಪಘಾತ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 10, 2023 | 5:16 PM

ಮೈಸೂರು, ಆ.10: ಎರಡು ಬೈಕ್(Bike)​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೆಚ್​.ಡಿ ಕೋಟೆ(H.D Kote) ತಾಲೂಕಿನ ದೇವಲಾಪುರ ಬಳಿ ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ದೇವೇಶ್​, ಪ್ರಕಾಶ್ ಮೃತ ರ್ದುದೈವಿಗಳು. ಇನ್ನು ಘಟನೆಯಲ್ಲಿ ಗಂಭೀರ ಗಾಯಗೊಂಡ ಶ್ರುತಿ ಎಂಬ ಮಹಿಳೆಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟಣೆ ಕುರಿತು ಸರಗೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್​ಗೆ ಕ್ಯಾಂಟರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಬಳಿ ಬೈಕ್​ಗೆ ಕ್ಯಾಂಟರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಚಿಕ್ಕಜಾಲ ಬಳಿಯ ವಿದ್ಯಾನಗರ ನಿವಾಸಿ ಅಂಬರೀಶ್ ಮೃತ ರ್ದುದೈವಿ. ಇತ ದೊಡ್ಡಬಳ್ಳಾಪುರ‌ ಕಡೆಯಿಂದ ಯಲಹಂಕ ಬರುತ್ತಿದ್ದ ವೇಳೆ‌ ಈ ದುರ್ಘಟನೆ ನಡೆದಿದೆ. ಈ ಕುರಿತು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೆಲಮಂಗಲ: ಪತ್ನಿಯನ್ನು ಗ್ರಾಪ ಪಂಚಾಯಿತಿ ಅಧ್ಯಕ್ಷೆಯಾಗಿಸುವ ಕಸರತ್ತು ನಡೆಸಿದ್ದ ಪತಿ ಗುರಿ ಈಡೇರುವ ಮೊದಲೇ ರಸ್ತೆ ಅಪಘಾತಕ್ಕೆ ಬಲಿ!

ಕದಂಬ ನೌಕಾನೆಲೆಯ ತೇಜ್ ಹೆಸರಿನ ಟಗ್ ಬೋಟ್​ನ ಇಂಜಿನ್​ನಲ್ಲಿ ಬೆಂಕಿ

ಉತ್ತರ ಕನ್ನಡ: ಕಾರವಾರ ಕದಂಬ ನೌಕಾನೆಲೆಯ ಡಾಕ್ ಯಾರ್ಡ್​ಗೆ ಎಳೆತರಲು ಉಪಯೋಗಿಸುವ ಟಗ್ ಬೋಟ್​ನ ಇಂಜಿನ್​ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಕುರಿತು ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಈ ಟಗ್​ ಬೋಟ್​ಗಳನ್ನು ನೌಕಾ ಹಡಗುಗಳನ್ನು ಎಳೆದು ತರಲು ಉಪಯೋಗಿಸಲಾಗುತ್ತದೆ. ಅದರಂತೆ ಯುದ್ದ ಹಡಗನ್ನು ಎಳೆದು ತರಲು ಹೋದಾಗ ಟಗ್​ ಬೋಟ್​ ಇಂಜಿನ್​ನಲ್ಲಿ ಬೆಂಕಿ ತಗುಲಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us