AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಳೆ ಆರ್ಭಟ; ನೋಡ ನೋಡ್ತಿದ್ದಂತೆ ಮೋರಿಯಲ್ಲಿ ಕೊಚ್ಚಿಹೋದ ವ್ಯಕ್ತಿ!

ಚಿಕ್ಕಬಳ್ಳಾಪುರದ ಕಂದವಾರ ಕೆರೆ ಕೋಡಿ ನೀರು ತಡೆಹಿಡಿದಿದ್ದರಿಂದ ಕೆರೆ ಹಿನ್ನೀರು ತೋಟಗಳಿಗೆ ನುಗ್ಗಿದೆ. ರೈತರು ಬೆಳೆದಿದ್ದ ಸೇವಂತಿ, ಗುಲಾಬಿ, ಆಲೂಗಡ್ಡೆ, ಜೋಳ, ರಾಗಿ, ತರಕಾರಿ ಬೆಳೆಗಳು ನೀರುಪಾಲಾಗಿವೆ.

ಮೈಸೂರಿನಲ್ಲಿ ಮಳೆ ಆರ್ಭಟ; ನೋಡ ನೋಡ್ತಿದ್ದಂತೆ ಮೋರಿಯಲ್ಲಿ ಕೊಚ್ಚಿಹೋದ ವ್ಯಕ್ತಿ!
ನೀರು ಪಾಲಾದ ಚಂದ್ರೇಗೌಡ
TV9 Web
| Edited By: sandhya thejappa|

Updated on:Oct 25, 2021 | 9:25 AM

Share

ಮೈಸೂರು: ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮಳೆ ಆರ್ಭಟದಿಂದ ವ್ಯಕ್ತಿಯೊಬ್ಬ ಮೋರಿಯಲ್ಲಿ ಕೊಚ್ಚಿಹೋದ ಘಟನೆ ಮೈಸೂರಿನ ಸಿದ್ದಾರ್ಥನಗರದಲ್ಲಿ ಸಂಭವಿಸಿದೆ. ಕುಟುಂಬ ಸದಸ್ಯರ ಕಣ್ಣೆದುರೇ ಎಂ.ಚಂದ್ರೇಗೌಡ(60) ಎಂಬುವವರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಚಂದ್ರೇಗೌಡ ಮನೆ ಬಳಿ ಮೋರಿ ವೀಕ್ಷಣೆ ಮಾಡುತ್ತಿದ್ದರು. ಕಾಲು ಜಾರಿ ಮೋರಿಯಲ್ಲಿ ಕೊಚ್ಚಿಹೋಗಿದ್ದಾರೆ. ಸದ್ಯ ವ್ಯಕ್ತಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದೆ. ಕಾರಂಜಿ ಕೆರೆಗೆ ಸಂಪರ್ಕ ಕಲ್ಪಿಸುವ ಕಾಲುವೆಯಲ್ಲಿ ಈ ದುರ್ಘಟನೆ ನಡೆದಿದೆ.

ಬೆಳೆ ಜಲಾವೃತ ಇನ್ನು ಚಿಕ್ಕಬಳ್ಳಾಪುರದ ಕಂದವಾರ ಕೆರೆ ಕೋಡಿ ನೀರು ತಡೆಹಿಡಿದಿದ್ದರಿಂದ ಕೆರೆ ಹಿನ್ನೀರು ತೋಟಗಳಿಗೆ ನುಗ್ಗಿದೆ. ರೈತರು ಬೆಳೆದಿದ್ದ ಸೇವಂತಿ, ಗುಲಾಬಿ, ಆಲೂಗಡ್ಡೆ, ಜೋಳ, ರಾಗಿ, ತರಕಾರಿ ಬೆಳೆಗಳು ನೀರುಪಾಲಾಗಿವೆ. ಮೈಲಪ್ಪನಹಳ್ಳಿ ಗ್ರಾಮಕ್ಕೂ ಕೆರೆ ಹಿನ್ನೀರು ನುಗ್ಗುವ ಭೀತಿ ಎದುರಾಗಿದೆ. ಕೆರೆ ಕೋಡಿಗೆ ಮರಳು ಚೀಲಗಳನ್ನು ತುಂಬಿ ಕೋಡಿ ನೀರಿಗೆ ತಡೆ ಹಿಡಿಯಲಾಗಿದೆ. ಪರಿಣಾಮ ಸುತ್ತಾಮುತ್ತಾ ಜಲಾವೃತವಾಗಿದ್ದು, ಚಿಕ್ಕಬಳ್ಳಾಪುರ ನಗರದ ವಿವಿಧ ಬಡಾವಣೆಗಳಿಗೂ ನೀರು ನುಗ್ಗುವ ಭೀತಿ ಇದೆ.

ಧಾರಾಕಾರ ಮಳೆಗೆ ಶ್ರೀನಿವಾಸಸಾಗರ ಹಾಗೂ ರಂಗಧಾಮ ಜಲಾಶಯಗಳು ಬಿರುಕು ಬಿಟ್ಟಿರುವ ವದಂತಿ ಇದೆ. ಹೀಗಾಗಿ ಎರಡು ಜಲಾಶಯಗಳಿಗೆ ಚಿಕ್ಕಬಳ್ಳಾಪುರ ಡಿಸಿ ಆರ್.ಲತಾ ಭೇಟಿ ನೀಡಿದ್ದಾರೆ. ಡಿಸಿ ಲತಾಗೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಾಥ್ ಕೊಟ್ಟಿದ್ದಾರೆ. ಯಾವುದೇ ಅಪಾಯವಿಲ್ಲ. ವದಂತಿಗೆ ಕಿವಿಕೊಡಬೇಡಿ ಅಂತ ರೈತರಿಗೆ ಡಿಸಿ ಲತಾ ಮನವಿ ಮಾಡಿದ್ದಾರೆ.

ಮಂಡ್ಯದಲ್ಲೂ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಹಲವೆಡೆ ಬೆಳೆ ಹಾನಿಯಾಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಜಮೀನು ಜಲಾವೃತಗೊಂಡಿವೆ.

ಮನೆ ಕುಸಿದು ವೃದ್ಧ ದಂಪತಿ ಪರದಾಟ ನಿರಂತರ ಮಳೆಗೆ ಮನೆ ಕುಸಿದಿದ್ದು, ವೃದ್ಧ ದಂಪತಿ ಪರದಾಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ನಾರಾಯಣಪುರದಲ್ಲಿ ಸಾಕಮ್ಮ, ಗವಿರಂಗಶೆಟ್ಟಿ ಬೀದಿಯಲ್ಲಿ ಪರದಾಟ ಪಡುತ್ತಿದ್ದಾರೆ.

ಇದನ್ನೂ ಓದಿ

Viral Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ ಕಾನ್​ಸ್ಟೇಬಲ್

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

Published On - 8:47 am, Mon, 25 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!