AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಳೆ ಆರ್ಭಟ; ನೋಡ ನೋಡ್ತಿದ್ದಂತೆ ಮೋರಿಯಲ್ಲಿ ಕೊಚ್ಚಿಹೋದ ವ್ಯಕ್ತಿ!

ಚಿಕ್ಕಬಳ್ಳಾಪುರದ ಕಂದವಾರ ಕೆರೆ ಕೋಡಿ ನೀರು ತಡೆಹಿಡಿದಿದ್ದರಿಂದ ಕೆರೆ ಹಿನ್ನೀರು ತೋಟಗಳಿಗೆ ನುಗ್ಗಿದೆ. ರೈತರು ಬೆಳೆದಿದ್ದ ಸೇವಂತಿ, ಗುಲಾಬಿ, ಆಲೂಗಡ್ಡೆ, ಜೋಳ, ರಾಗಿ, ತರಕಾರಿ ಬೆಳೆಗಳು ನೀರುಪಾಲಾಗಿವೆ.

ಮೈಸೂರಿನಲ್ಲಿ ಮಳೆ ಆರ್ಭಟ; ನೋಡ ನೋಡ್ತಿದ್ದಂತೆ ಮೋರಿಯಲ್ಲಿ ಕೊಚ್ಚಿಹೋದ ವ್ಯಕ್ತಿ!
ನೀರು ಪಾಲಾದ ಚಂದ್ರೇಗೌಡ
TV9 Web
| Edited By: |

Updated on:Oct 25, 2021 | 9:25 AM

Share

ಮೈಸೂರು: ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮಳೆ ಆರ್ಭಟದಿಂದ ವ್ಯಕ್ತಿಯೊಬ್ಬ ಮೋರಿಯಲ್ಲಿ ಕೊಚ್ಚಿಹೋದ ಘಟನೆ ಮೈಸೂರಿನ ಸಿದ್ದಾರ್ಥನಗರದಲ್ಲಿ ಸಂಭವಿಸಿದೆ. ಕುಟುಂಬ ಸದಸ್ಯರ ಕಣ್ಣೆದುರೇ ಎಂ.ಚಂದ್ರೇಗೌಡ(60) ಎಂಬುವವರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಚಂದ್ರೇಗೌಡ ಮನೆ ಬಳಿ ಮೋರಿ ವೀಕ್ಷಣೆ ಮಾಡುತ್ತಿದ್ದರು. ಕಾಲು ಜಾರಿ ಮೋರಿಯಲ್ಲಿ ಕೊಚ್ಚಿಹೋಗಿದ್ದಾರೆ. ಸದ್ಯ ವ್ಯಕ್ತಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದೆ. ಕಾರಂಜಿ ಕೆರೆಗೆ ಸಂಪರ್ಕ ಕಲ್ಪಿಸುವ ಕಾಲುವೆಯಲ್ಲಿ ಈ ದುರ್ಘಟನೆ ನಡೆದಿದೆ.

ಬೆಳೆ ಜಲಾವೃತ ಇನ್ನು ಚಿಕ್ಕಬಳ್ಳಾಪುರದ ಕಂದವಾರ ಕೆರೆ ಕೋಡಿ ನೀರು ತಡೆಹಿಡಿದಿದ್ದರಿಂದ ಕೆರೆ ಹಿನ್ನೀರು ತೋಟಗಳಿಗೆ ನುಗ್ಗಿದೆ. ರೈತರು ಬೆಳೆದಿದ್ದ ಸೇವಂತಿ, ಗುಲಾಬಿ, ಆಲೂಗಡ್ಡೆ, ಜೋಳ, ರಾಗಿ, ತರಕಾರಿ ಬೆಳೆಗಳು ನೀರುಪಾಲಾಗಿವೆ. ಮೈಲಪ್ಪನಹಳ್ಳಿ ಗ್ರಾಮಕ್ಕೂ ಕೆರೆ ಹಿನ್ನೀರು ನುಗ್ಗುವ ಭೀತಿ ಎದುರಾಗಿದೆ. ಕೆರೆ ಕೋಡಿಗೆ ಮರಳು ಚೀಲಗಳನ್ನು ತುಂಬಿ ಕೋಡಿ ನೀರಿಗೆ ತಡೆ ಹಿಡಿಯಲಾಗಿದೆ. ಪರಿಣಾಮ ಸುತ್ತಾಮುತ್ತಾ ಜಲಾವೃತವಾಗಿದ್ದು, ಚಿಕ್ಕಬಳ್ಳಾಪುರ ನಗರದ ವಿವಿಧ ಬಡಾವಣೆಗಳಿಗೂ ನೀರು ನುಗ್ಗುವ ಭೀತಿ ಇದೆ.

ಧಾರಾಕಾರ ಮಳೆಗೆ ಶ್ರೀನಿವಾಸಸಾಗರ ಹಾಗೂ ರಂಗಧಾಮ ಜಲಾಶಯಗಳು ಬಿರುಕು ಬಿಟ್ಟಿರುವ ವದಂತಿ ಇದೆ. ಹೀಗಾಗಿ ಎರಡು ಜಲಾಶಯಗಳಿಗೆ ಚಿಕ್ಕಬಳ್ಳಾಪುರ ಡಿಸಿ ಆರ್.ಲತಾ ಭೇಟಿ ನೀಡಿದ್ದಾರೆ. ಡಿಸಿ ಲತಾಗೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಾಥ್ ಕೊಟ್ಟಿದ್ದಾರೆ. ಯಾವುದೇ ಅಪಾಯವಿಲ್ಲ. ವದಂತಿಗೆ ಕಿವಿಕೊಡಬೇಡಿ ಅಂತ ರೈತರಿಗೆ ಡಿಸಿ ಲತಾ ಮನವಿ ಮಾಡಿದ್ದಾರೆ.

ಮಂಡ್ಯದಲ್ಲೂ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಹಲವೆಡೆ ಬೆಳೆ ಹಾನಿಯಾಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಜಮೀನು ಜಲಾವೃತಗೊಂಡಿವೆ.

ಮನೆ ಕುಸಿದು ವೃದ್ಧ ದಂಪತಿ ಪರದಾಟ ನಿರಂತರ ಮಳೆಗೆ ಮನೆ ಕುಸಿದಿದ್ದು, ವೃದ್ಧ ದಂಪತಿ ಪರದಾಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ನಾರಾಯಣಪುರದಲ್ಲಿ ಸಾಕಮ್ಮ, ಗವಿರಂಗಶೆಟ್ಟಿ ಬೀದಿಯಲ್ಲಿ ಪರದಾಟ ಪಡುತ್ತಿದ್ದಾರೆ.

ಇದನ್ನೂ ಓದಿ

Viral Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ ಕಾನ್​ಸ್ಟೇಬಲ್

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

Published On - 8:47 am, Mon, 25 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್