AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರು ಬದಲಾಯಿಸಿದ್ದು, ಹೊಸ ಹೆಸರಿಟ್ಟಿದ್ದಷ್ಟೇ ಮಾತ್ರವಲ್ಲ, ಹೊಸದಾಗಿ ಮೈಸೂರಿಗೆ ಬಂದ ಟ್ರೈನ್​ಗಳೆಷ್ಟು ಗೊತ್ತೇ?

ಮೈಸೂರು ಹಾಗೂ ಬೆಂಗಳೂರು ನಡುವೆ ಹೊಸದಾಗಿ ಎಷ್ಟು ರೈಲುಗಳು ಸಂಚರಿಸುತ್ತವೆ ಎನ್ನುವ ಮಾಹಿತಿ ಇಲ್ಲಿದೆ.

ಹೆಸರು ಬದಲಾಯಿಸಿದ್ದು, ಹೊಸ ಹೆಸರಿಟ್ಟಿದ್ದಷ್ಟೇ ಮಾತ್ರವಲ್ಲ, ಹೊಸದಾಗಿ ಮೈಸೂರಿಗೆ ಬಂದ ಟ್ರೈನ್​ಗಳೆಷ್ಟು ಗೊತ್ತೇ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 13, 2022 | 10:57 PM

Share

ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ರಾಜಧಾನಿ ಮೈಸೂರು ನಡುವೆ ದಿನ ನಿತ್ಯ ಸಾಕಷ್ಟು ಜನರು ಪ್ರಯಾಣಿಸುತ್ತಾರೆ. ಕೆಲವರು ಬಸ್​ ಮೂಲಕ ಪ್ರಯಾಣಿಸುತ್ತಿದ್ದರೆ, ಇನ್ನೂ ಕೆಲವರು ರೈಲ್ವೇಯನ್ನು ಅವಲಂಬಿಸಿದ್ದಾರೆ.

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ನಾಮಕರಣ: ಶುಕ್ರವಾರದ ಶುಭ ಸುದ್ದಿ ಎಂದ ಪ್ರತಾಪ್ ಸಿಂಹ

ಬೆಂಗಳೂರು ಹಾಗೂ ಮೈಸೂರು ನಡುವಿನ ಎಕ್ಸ್‌ಪ್ರೆಸ್‌ ಹೈವೇ ಮಾಡುವುದಕ್ಕೆ ಸಂಸದ ಪ್ರತಾಪ್ ಸಿಂಹ ಸಾಕಷ್ಟು ಶ್ರಮಿಸಿದ್ದಾರೆ. ಹಾಗೇ ಮೈಸೂರಿಗೆ ಬಹಳಷ್ಟು ರೈಲುಗಳನ್ನು ಸಹ ತಂದಿದ್ದಾರೆ. ಹಾಗಾದ್ರೆ, ಮೈಸೂರು ಹಾಗೂ ಬೆಂಗಳೂರು ನಡುವೆ ಹೊಸದಾಗಿ ಎಷ್ಟು ರೈಲುಗಳು ಸಂಚರಿಸುತ್ತವೆ? ಎನ್ನುವ ಮಾಹಿತಿ ಇಲ್ಲಿದೆ.

ಪ್ರತಾಪ್ ಸಿಂಹ ತಂದಿರುವ ರೈಲುಗಳು

1 ಮೈಸೂರು-ವಾರಾಣಸಿ ರೈಲನ್ನು ( ವಾರಕ್ಕೊಮ್ಮೆ) ದಿನಾಂಕ 25-12-2014ರಲ್ಲಿ ಚಾಲನೆ ನೀಡಲಾಗಿದೆ.

2.ಮೈಸೂರು-ಹುಬ್ಬಳ್ಳಿ-ಬೆಳಗಾವಿ ವಿಶ್ವಮಾನವ ಎಕ್ಸ್​ಪ್ರೆಸ್(ಪ್ರತಿ ದಿನ) ದಿನಾಂಕ 23-5-2017ರಲ್ಲಿ ತರಲಾಗಿದೆ.

3. ಮೈಸೂರು-ಉದಯ್ ಪುರ್( ಪ್ರೀಮಿಯರ್ ವೀಕ್ಲಿ ಎಕ್ಸ್​ಪ್ರೆಸ್) 19-2-2018.

4.ಬೆಂಗಳೂರು-ಮೈಸೂರು ಮೆಮು ರೈಲು(ಪ್ರತಿನಿತ್ಯ) 19-2-2018

5.ರಾಮನಗರ-ಮೈಸೂರು ಮೆಮು ರೈಲು(ಪ್ರತಿ ನಿತ್ಯ) 23-12-2018)

6.ಚೆನ್ನೈ-ಬೆಂಗಳೂರು-ಮೈಸೂರು(ಡೈಲಿ ಸೂಪರ್ ಫಾಸ್ಟ್ ಎಕ್ಸ್​ಪ್ರೆಸ್) 15-1-2019)

7.ಕಾಚಿಗುಡ(ಹೈದರಾಬಾದ್)-ಬೆಂಗಳೂರು-ಮೈಸೂರು(ಡೈಲಿ ಎಕ್ಸ್​ಪ್ರೆಸ್) 3-3-2019)

8. ಕೋಚುವೇಲಿ(ತಿರುವನಂತಪುರ)- ಬೆಂಗಳೂರು-ಮೈಸೂರು(ಡೈಲಿ ಎಕ್ಸ್​ಪ್ರೆಸ್) 29-92-2019)

9. ಬೆಂಗಳೂರು-ಮೈಸೂರು- ಮಂಗಳೂರು(ವಾರದ 6 ದಿನಗಳು) (25-8-2022)

ಇನ್ನು ಮೈಸೂರಿನ ರೈಲಿಗೆ ಇಡಲಾಗಿದ್ದ ಟಿಪ್ಪುಸುಲ್ತಾನ್ ಹೆಸರನ್ನು ತೆಗೆದುಹಾಕಿ ರೈಲ್ವೇ ಇಲಾಖೆ ಅದಕ್ಕೆ ಒಡೆಯರ್ ಎಂದು ಹೊಸ ಹೆಸರು ನಾಮಕರಣ ಮಾಡಿದೆ. ಇದಕ್ಕೆ ಪ್ರಮುಖವಾಗಿ ಮೈಸೂರು ಸಂಸದ ಶ್ರಮವಿದೆ.

ಟಿಪ್ಪು ಎಕ್ಸ್‌ಪ್ರೆಸ್‌ (Tippu Express) ರೈಲಿನ ಹೆಸರು ಬದಲಾವಣೆ ಮಾಡಿಯೇ ತೀರುತ್ತೇನೆ ಎಂದು ಹೇಳಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾಡಿಯೇ ತೀರಿದ್ದಾರೆ.

ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್‌ಪ್ರೆಸ್ ಎಂದು ಹೊಸ ಹೆಸರು ಮರುನಾಮಕರಣ ಮಾಡಿಸುವಲ್ಲ ಪ್ರತಾಪ್ ಸಿಂಹ ಯಶಸ್ವಿಯಾಗಿದ್ದಾರೆ. ಇದರ ಬೆನ್ನಲ್ಲೇ ವಿರೋಧ ಪಕ್ಷ ನಾಯಕರಿಂದ ಟೀಕೆಗಳು ವ್ಯಕ್ತವಾಗುತ್ತಿವೆ. ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

Published On - 10:54 pm, Thu, 13 October 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್