ಮೈಸೂರು ಅರಮನೆ ಆವರಣ ಮತ್ತೆ ಧ್ವನಿ-ಬೆಳಕು ಹೊಂಬಣ್ಣದಲ್ಲಿ ಜಗಮಗ; ತುಂಬಿ ಹರಿಯುತಿವೆ ಚುಂಚನಕಟ್ಟೆ, ಧನುಷ್ಕೋಟಿ ಜಲಪಾತ

ಮೈಸೂರು ಅರಮನೆಯಲ್ಲಿ ಪ್ರತೀ ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ದೀಪಾಲಂಕಾರ ಕಾರ್ಯಕ್ರಮವಿರಲಿದೆ ರಾತ್ರಿ 7ರಿಂದ 8ರ ವರೆಗೆ ಮತ್ತೆ ಮೈಸೂರು ಅರಮನೆ ಜಗಮಗಿಸಲಿದೆ. ಇನ್ನುಳಿದ ದಿನಗಳಂದೂ ಸಹ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಇರುತ್ತದೆ. ಆದರೆ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7ರಿಂದ 8 ಹಾಗೂ ಶನಿವಾರ 7 ರಿಂದ 9.15ರ ವರಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯುತ್ತದೆ. 

ಮೈಸೂರು ಅರಮನೆ ಆವರಣ ಮತ್ತೆ ಧ್ವನಿ-ಬೆಳಕು ಹೊಂಬಣ್ಣದಲ್ಲಿ ಜಗಮಗ; ತುಂಬಿ ಹರಿಯುತಿವೆ ಚುಂಚನಕಟ್ಟೆ, ಧನುಷ್ಕೋಟಿ ಜಲಪಾತ
ಮೈಸೂರು ಅರಮನೆ ಆವರಣ
Follow us
| Updated By: ಸಾಧು ಶ್ರೀನಾಥ್​

Updated on:Jul 24, 2021 | 11:38 AM

ಮೈಸೂರು: ಐತಿಹಾಸಿಕ ಮೈಸೂರು ಅರಮನೆಗೆ ನಾಳೆಯಿಂದ ದೀಪಾಲಂಕಾರ ಮರುಕಳಿಸಲಿದೆ. ಸಂಜೆಯ ವೇಳೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಕೊರೊನಾ ಹಿನ್ನೆಲೆ ಸ್ಥಗಿತವಾಗಿತ್ತು. ಇದೀಗ ನಾಳೆಯಿಂದ ಮತ್ತೆ ಕಾರ್ಯಕ್ರಮ ಪುನಾರಂಭವಾಗಲಿದೆ.

ಪ್ರವಾಸೋದ್ಯಮ ಹಿತದೃಷ್ಟಿಯಿಂದ ದೀಪಾಲಂಕಾರ ( sound and light program) ಪುನರಾರಂಭವಾಗಿದೆ. ನಾಳೆಯಿಂದ ಮೈಸೂರು ಅರಮನೆ ದೀಪಾಲಂಕಾರ ಪುನರಾರಂಭವಾಗಲಿದ್ದು, ಹೊಂಬಣ್ಣದಲ್ಲಿ ಜಗಮಗಿಸಲಿದೆ.  ಕೊರೊನಾ ನಿಯಂತ್ರಣ ಕ್ರಮವಾಗಿ ಜಾರಿಯಲ್ಲಿದ್ದ ಲಾಕ್​ಡೌನ್​ ಈಗ ಸಂಪೂರ್ಣವಾಗಿ ತೆಗೆದುಹಾಕಲಾಗಿದ್ದು, ಅನ್​ಲಾಕ್‌ ಬಳಿಕ ಅರಮನೆ ಆಡಳಿತ ಮಂಡಳಿ (Mysuru Palace Board) ಮತ್ತೆ ಆರಂಭ ಮಾಡುತ್ತಿದೆ.

ಪ್ರತೀ ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ದೀಪಾಲಂಕಾರ:

ಮೈಸೂರು ಅರಮನೆಯಲ್ಲಿ ಪ್ರತೀ ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ದೀಪಾಲಂಕಾರ ಕಾರ್ಯಕ್ರಮವಿರಲಿದೆ (mysore palace). ರಾತ್ರಿ 7ರಿಂದ 8ರ ವರೆಗೆ ಮತ್ತೆ ಮೈಸೂರು ಅರಮನೆ ಜಗಮಗಿಸಲಿದೆ. ಇನ್ನುಳಿದ ದಿನಗಳಂದೂ ಸಹ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಇರುತ್ತದೆ. ಆದರೆ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7ರಿಂದ 8 ಹಾಗೂ ಶನಿವಾರ 7 ರಿಂದ 9.15ರ ವರಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯುತ್ತದೆ.

ಚುಂಚನಕಟ್ಟೆ ಜಲಪಾತ, ಧನುಷ್ಕೋಟಿ ಜಲಪಾತ ತುಂಬಿ ಹರಿಯುತ್ತಿವೆ

ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು, ಕೆ ಆರ್ ನಗರ ತಾಲ್ಲೂಕಿನ ಚುಂಚನಕಟ್ಟೆ ಜಲಪಾತ, ಧನುಷ್ಕೋಟಿ ಜಲಪಾತ ತುಂಬಿ ಹರಿಯುತ್ತಿವೆ. ರಾಜ್ಯದ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಚುಂಚನಕಟ್ಟೆ ಜಲಪಾತದ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೊರೊನಾ ಲಾಕ್ ಡೌನ್ ಹಿನ್ನೆಲೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ವರ್ಷಕ್ಕೊಮ್ಮೆ ನಡೆಯುತ್ತಿದ್ದ ಜಲಪಾತೋತ್ಸವವೂ ಸಹ ರದ್ದಾಗಿತ್ತು.

Mysuru Palace: ನಾಳೆಯಿಂದಲೇ ಮೈಸೂರು ಅರಮನೆ ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಅವಕಾಶ (Historical mysore palace to resume with sound and light program after unlock Mysuru Palace Board)

Published On - 9:12 am, Sat, 24 July 21

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ