AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home alone woman Murder: ಮದುವೆಯಾಗಿ 26 ವರ್ಷವಾಗಿತ್ತು, ಮಕ್ಕಳಿರಲಿಲ್ಲ, ಗೃಹಿಣಿಯ ಹತ್ಯೆ ಮಾಡಿ ಹಣ ಒಡವೆ ದೋಚಿರುವ ಹಂತಕರು

Mysore Lady Murder: ದತ್ತು ಮಗಳು ಮೇಘಾ ಶಾಲೆಯಿಂದ ಬಂದ ನಂತರ ಮಂಜುಳಾ ಕೊಲೆಯಾಗಿರುವುದು ಗೊತ್ತಾಗಿದೆ. ಮಂಜುಳಾ ಕುತ್ತಿಗೆ ಬಿಗಿದು ಉಸಿರು ಕಟ್ಟಿಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೊಲೆ ಮಾಡಿ ಮನೆಯಲ್ಲಿದ್ದ ನಗದು ಹಾಗೂ ಒಡವೆ ದೋಚಲಾಗಿದೆ.

Home alone woman Murder: ಮದುವೆಯಾಗಿ 26 ವರ್ಷವಾಗಿತ್ತು, ಮಕ್ಕಳಿರಲಿಲ್ಲ, ಗೃಹಿಣಿಯ ಹತ್ಯೆ ಮಾಡಿ ಹಣ ಒಡವೆ ದೋಚಿರುವ ಹಂತಕರು
ಗೃಹಿಣಿಯ ಹತ್ಯೆ ಮಾಡಿ ಹಣ ಒಡವೆ ದೋಚಿರುವ ಹಂತಕರು
ರಾಮ್​, ಮೈಸೂರು
| Edited By: |

Updated on: Nov 17, 2023 | 11:56 AM

Share

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳ್ಳತನ ಪ್ರಕರಣಗಳು ಜನರ ನಿದ್ದೆಗೆಡಿಸಿದೆ. ಈ ಮಧ್ಯೆ, ಮೊನ್ನೆ ಬುಧವಾರ ನಡೆದಿರುವ ಒಂಟಿ ಮಹಿಳೆಯ ಕೊಲೆ ನಾಗರಿಕರನ್ನು ಬೆಚ್ಚಿ ಬೀಳಿಸಿದೆ. ಮೇಲಿನ ಪೋಟೋದಲ್ಲಿರುವವರು ಮಂಜುಳಾ. ಮೈಸೂರಿನ ಕುವೆಂಪುನಗರದ ನಿವಾಸಿ.‌ ಪತಿ ನಾಗರಾಜ್ ಎಸ್ ಟಿ ಅಭಿವೃದ್ಧಿ ಮಂಡಳಿಯ ಮ್ಯಾನೇಜರ್ ಆಗಿದ್ದಾರೆ. ಇವರ ಮದುವೆಯಾಗಿ 26 ವರ್ಷವಾಗಿತ್ತು. ಇವರಿಗೆ ಮಕ್ಕಳಿರಲಿಲ್ಲ. ಆ ಕಾರಣಕ್ಕಾಗಿ ನಾಗರಾಜ್ ತನ್ನ ಅಣ್ಣನ ಮೊಮ್ಮಗಳನ್ನು ದತ್ತು ಪಡೆದಿದ್ದರು. ಖುಷಿ ಖುಷಿಯಾಗಿದ್ರು. ಇದೀಗ ಮಂಜುಳಾ ನೆನಪು ಮಾತ್ರ. ಮನೆಯಲ್ಲಿ ಒಂಟಿಯಾಗಿದ್ದ (Home alone woman) ಮಂಜುಳಾ ಅವರನ್ನು ಕೊಲೆ ಮಾಡಲಾಗಿದೆ.

ಮಂಜುಳಾ ಪತಿ ನಾಗರಾಜು ಮೈಸೂರು ಜಿಲ್ಲೆ ಹೆಚ್ ಡಿ ಕೋಟೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ದತ್ತು‌ ಮಗಳು 9 ವರ್ಷದ ಮೇಘಾ ಮೂರನೇ ತರಗತಿ ಓದುತ್ತಿದ್ದಳು. ಪ್ರತಿ ದಿನ ಮಗಳು ಶಾಲೆಗೆ ಹೋದ ನಂತರ ಪತಿ ಕೆಲಸಕ್ಕೆ ಹೋಗುತ್ತಿದ್ದರು. ನಂತರ ಮಂಜುಳಾ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಈ ಬಗ್ಗೆ ಗೊತ್ತಿರುವವರೇ ಮಂಜುಳಾ ಕೊಲೆ ಮಾಡಿದ್ದಾರೆ ಅನ್ನೋ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಹಾಸನ – ಆಗಿಲೆ ಗ್ರಾಮದ ಕುಂತಿ ಬೆಟ್ಟದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬರ್ಬರ ಹತ್ಯೆ ಮಾಡಿದ ಪಾಗಲ್ ಪ್ರೇಮಿ

ಮೊನ್ನೆ ಬುಧವಾರ ಸಂಜೆ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ದತ್ತು ಮಗಳು ಮೇಘಾ ಶಾಲೆಯಿಂದ ಬಂದ ನಂತರ ಮಂಜುಳಾ ಕೊಲೆಯಾಗಿರುವುದು ಗೊತ್ತಾಗಿದೆ. ಮಂಜುಳಾ ಕುತ್ತಿಗೆ ಬಿಗಿದು ಉಸಿರು ಕಟ್ಟಿಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೊಲೆ ಮಾಡಿ ಮನೆಯಲ್ಲಿದ್ದ ನಗದು ಹಾಗೂ ಒಡವೆ ದೋಚಲಾಗಿದೆ.

Also Read:  ಶವ ಪತ್ತೆಯಾಗುತ್ತಿದ್ದಂತೆ ಜೀವ ಪಡೆದ ಮಿಸ್ಸಿಂಗ್ ಕೇಸ್! ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಎದುರೇ ಇನ್ನೊಂದು ಸಂಬಂಧ ಹೊಂದಿದ್ದ ಗಂಡ ಅರೆಸ್ಟ್ ಆದ

ಮೈಸೂರಿನ ಕುವೆಂಪುನಗರ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೊಲೆ ಮಾಡಿದವರ ಹುಡುಕಾಟದಲ್ಲಿದ್ದಾರೆ. ಆರೋಪಿಗಳು ಸಿಕ್ಕ ನಂತರವೇ ಮಂಜುಳಾ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ. ಇದೆಲ್ಲಾ ಏನೇ ಇರಲಿ ಹಾಡಹಗಲೇ ನಡೆದಿರುವ ಕೊಲೆ ಮೈಸೂರಿಗರನ್ನು ಬೆಚ್ಚಿಬೀಳಿಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್